ಬಸವಸಾಗರ ಜಲಾಶಯದಿಂದ ನದಿಗೆ ನೀರು
Team Udayavani, Feb 12, 2019, 11:54 AM IST
ನಾಲತವಾಡ: ಸಮೀಪದ ಬಸವಸಾಗರ ಜಲಾಶಯದಿಂದ ರವಿವಾರ ಬೆಳಗ್ಗೆ 6 ಗಂಟೆಯಿಂದ ಆಣೆಕಟ್ಟಿನ 2 ಕ್ರಸ್ಟ್ಗೇಟ್ಗಳ ಮೂಲಕ 6 ಸಾವಿರ ಕ್ಯೂಸೆಕ್ ನೀರನ್ನು ನದಿ ಪಾತ್ರದ ಮೂಲಕ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ (ಆರ್ಟಿಪಿಎಸ್) ಹರಿಸಲಾಗುತ್ತಿದೆ ಎಂದು ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.
ಆರ್ಟಿಪಿಎಸ್ನ ಬೇಡಿಕೆಯಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರೋಗ್ಯ ಸಚಿವ ಶಿವಾನಂದ ಪಾಟೀಲರ ನಿರ್ದೇಶನ, ಮೇಲಧಿಕಾರಿಗಳ ಸೂಚನೆಯಂತೆ ಆಣೆಕಟ್ಟಿನ ಕ್ರಸ್ಟ್ಗೇಟ್ ಮೂಲಕ ನದಿ ಪಾತ್ರಕ್ಕೆ ನೀರು ಹರಿಸಲಾಗುತ್ತಿದೆ. ಕಾರಣ ನದಿ ತೀರದಲ್ಲಿ ಬರುವ ಗ್ರಾಮಗಳ ಜನ, ಜಾನುವಾರುಗಳು ನದಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸೋಮವಾರ ಸಂಜೆ ನದಿ ಪಾತ್ರಕ್ಕೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಒಟ್ಟಾರೆ ಜಲಾಶಯದಿಂದ ಕುಡಿಯುವ ನೀರಿಗೆ ಅವಲಂಬಿತವಾಗಿರುವ ನಗರ, ಪಟ್ಟಣಗಳಿಗೆ ಮುಂದಿನ ಬೇಸಿಗೆ ಜುಲೈ ತಿಂಗಳು ಅಂತ್ಯದವರೆಗೆ 4 ಟಿಎಂಸಿಯಷ್ಟು ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹವಿದ್ದು, ಕಾಲ ಕಾಲಕ್ಕೆ ಸರ್ಕಾರದಿಂದ ಬರುವ ಸೂಚನೆ ಮೇರೆಗೆ ಕುಡಿಯುವ ನೀರನ್ನು ಜಲಾಶಯದಿಂದ ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ