ಜಲ ಗ್ರಾಮವಾಗಿ ಕಂಗೊಳಿಸಲಿದೆ ಸೋಮದೇವರಹಟ್ಟಿ


Team Udayavani, Feb 16, 2019, 8:15 AM IST

vij-1.jpg

ವಿಜಯಪುರ: ಊರಿಗೊಂದು ವನ, ಗ್ರಾಮಕ್ಕೊಂದು ಕೆರೆ ಎಂಬುದು ಘೋಷಣೆಯಾಗಿತ್ತು. ಗ್ರಾಮಕ್ಕೊಂದು ಕೆರೆ ನಿರ್ಮಾಣ ಕಷ್ಟಸಾಧ್ಯ. ಅದಕ್ಕೆ ನೂರಾರು ಅಡಚಣೆಗಳು. ಕೆರೆ ನಿರ್ಮಾಣಕ್ಕೆ ಸೂಕ್ತ ನಿವೇಶನ ಇಲ್ಲದಿರುವದು. ನಿವೇಶನ ಇದ್ದರೆ, ಭೂಸ್ವಾಧೀನ ಸಮಸ್ಯೆ. ರೈತರು ಭೂಮಿ ನೀಡಿದರೂ ಯೋಗ್ಯ ಪರಿಹಾರದ ತೊಂದರೆಗಳು. ಇಷ್ಟಾಗಿ ಹಣಕಾಸಿನ, ತಾಂತ್ರಿಕ ಅನುಮೋದನೆಗಳು. ಮೇಲಾಗಿ ರಾಜಕೀಯ ಇಚ್ಛಾಶಕ್ತಿ ಕೊರತೆ. ಇಂತಹ ಹಲವು ಅಡೆತಡೆ ನಿವಾರಿಸಿ, ಸಣ್ಣ ಗ್ರಾಮದಲ್ಲಿ 3ನೇ ಕೆರೆ ನಿರ್ಮಾಣಗೊಳ್ಳುತ್ತಿದೆ.

ತಿಕೋಟಾ ಸಮೀಪದ ಸೋಮದೇವರಹಟ್ಟಿ ಒಂದಲ್ಲ, ಎರಡಲ್ಲ ಮೂರು ಕೆರೆಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಬರದ ಜಿಲ್ಲೆ ಎಂದೇ ಈ ಹಿಂದೆ ಖ್ಯಾತವಾಗಿದ್ದ ವಿಜಯಪುರ ಜಿಲ್ಲೆ ಅದರಲ್ಲೂ ಗೃಹ ಸಚಿವ ಎಂ.ಬಿ. ಪಾಟೀಲ ಪ್ರತಿನಿಧಿಸುವ ಬಬಲೇಶ್ವರ ವಿಧಾನಸಭಾ ಕ್ಷೇತ್ರ ಕೆರೆಗಳ ತವರೂರು. ಇಲ್ಲಿ ಎಲ್ಲಿ ನೋಡಿದರಲ್ಲಿ ಕೆರೆಗಳು. ಆ ಕೆರೆಗಳಿಗೆ ದೂರದ ಕೃಷ್ಣಾ ನದಿಯಿಂದ ನೀರೆತ್ತಿ ತುಂಬಿಸಲಾಗುತ್ತಿದ್ದು, ಬೇಸಿಗೆಯಲ್ಲಿಯೂ ಈ ಕೆರೆಗಳು ನೀರಿನಿಂದ ನಳ-ನಳಿಸುತ್ತಿವೆ. 

ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣಕ್ಕೆ ಗೃಹ ಸಚಿವ ಎಂ.ಬಿ. ಪಾಟೀಲ ಫೆ. 18 ರಂದು ಸಂಜೆ ಭೂಮಿಪೂಜೆ ನೆರೆವೇರಿಸಲಿದ್ದು, ಈ ಕೆರೆ ನಿರ್ಮಾಣದಿಂದ ಒಂದೇ ಗ್ರಾಮದಲ್ಲಿ ಮೂರು ಕೆರೆ ಹೊಂದಿದ ಹೆಮ್ಮೆ ಸೋಮದೇವರಹಟ್ಟಿಗೆ ದೊರೆಯಲಿದೆ. 

ಜಿಲ್ಲೆಯ ಅತ್ಯಂತ ಎತ್ತರದ ಪ್ರದೇಶವಾದ ತಿಕೋಟಾ ಹೋಬಳಿಯಲ್ಲಿಯೇ ಇನ್ನು ಎತ್ತರವಾಗಿರುವ ಒಣಭೂಮಿ ಹೊಂದಿರುವ ಗುಡ್ಡಗಾಡು ಪ್ರದೇಶವೇ ಸೋಮದೇವರಹಟ್ಟಿ ಗ್ರಾಮ. ಇಲ್ಲಿ ಪ್ರಥಮವಾಗಿ ಕೆರೆ ನಿರ್ಮಾಣವಾಗಿದ್ದು, ಕಾಖಂಡಕಿಯ ಜಿ.ಎನ್‌. ಪಾಟೀಲರು 1974ರಲ್ಲಿ ತಿಕೋಟಾ
ಶಾಸಕರಾಗಿದ್ದ ಸಂದರ್ಭದಲ್ಲಿ, 2.88 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕೆರೆ ಇಂದಿಗೂ ಎರಡನೂರು ಎಕರೆಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಿಸುತ್ತದೆ. 2007ರಲ್ಲಿ ಈ ಗ್ರಾಮದಲ್ಲಿ ಅಂದು ತಿಕೋಟಾ ಶಾಸಕರಾಗಿದ್ದ ಎಂ.ಬಿ. ಪಾಟೀಲರು 30 ಲಕ್ಷ ವೆಚ್ಚದಲ್ಲಿ ಕೆರೆ ನಿರ್ಮಿಸಿದ್ದು, ಇದು ನೂರು ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸುತ್ತದೆ. ಇದೀಗ ಸೋಮದೇವರಹಟ್ಟಿಯಲ್ಲಿ ನಿರ್ಮಿಸುತ್ತಿರುವ ಸೈಟ್‌-3 ಕೆರೆ 91 ಲಕ್ಷ ರೂ. ವೆಚ್ಚದಲ್ಲಿ 9 ತಿಂಗಳು ಅವಧಿಯಲ್ಲಿ ನಿರ್ಮಾಣವಾಗಲಿರುವ ಈ ಕೆರೆ ಉದ್ದ 130 ಮೀಟರ್‌ ಆಗಿದ್ದು, 8.18 ಮೀಟರ್‌ ಎತ್ತರವಿದ್ದು, 2ಎಂ.ಸಿ.ಎಫ್‌.ಟಿ ನೀರು ಶೇಖರಣಾ ಸಾಮರ್ಥಯ ಹೊಂದಿದ್ದು, 35 ಮೀಟರ್‌ ಕೋಡಿ ಇದೆ. ಈ ಎಲ್ಲ ಕೆರೆಗಳಿಗೂ ಕೆರೆ ತುಂಬುವ ಯೋಜನೆಯಡಿ ಪೈಪ್‌ಲೈನ್‌ ಅಳವಡಿಸಿ, ನೀರು ತುಂಬಿಸಲಾಗುತ್ತಿದ್ದು, ಇದೀಗ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಲುವೆ ಜಾಲದ ಮುಖಾಂತರ ಕೂಡ ಈ ಕೆರೆ ತುಂಬಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಒಂದೇ ಗ್ರಾಮದಲ್ಲಿ ಮೂರು ಕೆರೆಗಳನ್ನು ಹೊಂದುವ ಮೂಲಕ ಸೋಮದೇವರಹಟ್ಟಿ ಜಲಗ್ರಾಮವಾಗಲಿದೆ.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.