ಬಿಎಸ್ಸೆನ್ನೆಲ್‌ ನೌಕರರ ಆಕ್ರೋಶ


Team Udayavani, Feb 19, 2019, 9:49 AM IST

vij-1.jpg

ವಿಜಯಪುರ: ಕೇಂದ್ರ ಸರ್ಕಾರ ಸೌಮ್ಯದಲ್ಲಿರುವ ಬಿಎಸ್ಸೆನ್ನೆಲ್‌ ದೂರ ಸಂಪರ್ಕ ಸೇವಾ ಸಂಸ್ಥೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಬಿಎಸ್ಸೆನ್ನೆಲ್‌ ನೌಕರರು ಧರಣಿ ನಡೆಸಿದರು.

ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಟೆಲಿಕಾಂ ನೌಕರರು ಮೂರು ದಿನ ಮುಷ್ಕರ ನಡೆಸಲಿದ್ದಾರೆ. ಸೋಮವಾರ ಬಿಎಸ್ಸೆನ್ನೆಲ್‌ ಪ್ರಧಾನ ಕಚೇರಿ ಎದುರು ಅಧಿಕಾರಿ ಮತ್ತು ಅಧಿಕಾರೇತರ ನೌಕರರ ಸಂಘಟನೆಗಳ ಒಕ್ಕೂಟ, ಆಲ್‌ ಯೂನಿಯನ್ಸ್‌ ಮತ್ತು ಅಸೋಸಿಯೇಷನ್ಸ್‌ ಆಫ್‌ ಬಿಎಸ್ಸೆನ್ನೆಲ್‌
ನೇತೃತ್ವದಲ್ಲಿ ನೌಕರರು ಧರಣಿ ನಡೆಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಎಸ್‌.ಆರ್‌. ನಾಯಕ ಮಾತನಾಡಿ, ಬಿಎಸ್ಸೆನ್ನೆಲ್‌ ಸಂಸ್ಥೆ ಹಿಂದಿನ ಹಾಗೂ ಇಂದಿನ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಯಲ್ಲಿದೆ.

ಸಂಸ್ಥೆಯಲ್ಲಿ ಸುಮಾರು 2 ಲಕ್ಷ ಕಾಯಂ ನೌಕರರು, 1 ಲಕ್ಷ ಗುತ್ತಿಗೆ ನೌಕರರು ಹಾಗೂ ಪರೋಕ್ಷವಾಗಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿದೆ. ಅನೇಕ ಕುಟುಂಬಗಳಿಗೆ ಬಿಎಸ್ಸೆನ್ನೆಲ್‌ ಜೀವನಾಧಾರವಾಗಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದಾಗಿ ಇಂದು ಸಂಸ್ಥೆ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಿದೆ ಎಂದು ದೂರಿದರು.

ಬಿಎಸ್ಸೆನ್ನೆಲ್‌ ಸಂಸ್ಥೆಗೆ ಸೇರಿದ ಆಸ್ತಿ ಮತ್ತು ಖಾಲಿ ಭೂಮಿ ಹಾಗೂ ನಿವೇಶನಗಳಿದ್ದು ಒಂದು ಲೆಕ್ಕಾಚಾರದಂತೆ ಮಾರುಕಟ್ಟೆ ದರ 1,00,000 ಕೋಟಿ ರೂ.ಯಿದ್ದು, ಇದರ ಮೂಲಕ ನಾವು ನಮ್ಮ ಸಂಸ್ಥೆಗೆ ವಾರ್ಷಿಕ 10,000 ಕೋಟಿ ರೂ.ಗಳಿಂದ 12 ಸಾವಿರ ಕೋಟಿ ರೂ. ಆದಾಯ
ಗಳಿಸಬಹುದಾಗಿದೆ. ಈ ಆಸ್ತಿಗಳನ್ನು ಸದುಪಯೋಗಪಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಬಿಎಸ್ಸೆನ್ನೆಲ್‌ಗೆ ಕೂಡಲೇ ಕೇಂದ್ರ ಸರ್ಕಾರ 4ಜಿ ಸೇವೆಗಳನ್ನು ಒದಗಿಸಲು ಅನುಮತಿ ನೀಡಬೇಕು. ಕಳೆದ ವರ್ಷದ ಫೆಬ್ರವರಿ 24ರಂದು ಕೇಂದ್ರ ಸಂಪರ್ಕ ಮಂತ್ರಿಗಳು 4ಜಿ ತರಂಗಳನ್ನು ಸಂಸ್ಥೆಗೆ ಕೊಡಲು ದೂರ ಸಂಪರ್ಕ ಇಲಾಖಾ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಆದರೆ ಇಂದಿಗೂ ಕಾರ್ಯಗತವಾಗಿಲ್ಲ ಎಂದು ದೂರಿದರು.

ಬಿಎಸ್ಸೆನ್ನೆಲ್‌ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಬಿಎಸ್ಸೆನ್ನೆಲ್‌ ತನ್ನ ಜಾಲವನ್ನು ಅಭಿವೃದ್ಧಿಪಡಿಸಲು ಅತಿ ಅವಶ್ಯವಿರುವ ಮೂಲಭೂತ ಸಾಮಗ್ರಿ ಖರೀದಿಸಲು ಕೇಂದ್ರ ಸಕಾರ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು. 

ವಿವಿಧ ಟೆಲಿಕಾಂ ನೌಕರರ ಸಂಘಟನೆ ಪ್ರಮುಖರಾದ ಎಸ್‌.ಎಲ್‌. ಕುಲಕರ್ಣಿ, ವಿ.ಆರ್‌. ತೆಲಗಾರ, ವಿ.ಡಿ. ನಾಯಕ, ಎಂ.ಜಿ. ಬಿಜ್ಜರಗಿ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.