ಕಣ್ಣೀರು ಹಾಕುವ ಸಿಎಂ ಬೇಡ, ಕಣ್ಣೀರೊರೆಸುವ ಸಿಎಂ ಬೇಕು


Team Udayavani, Mar 10, 2019, 9:45 AM IST

vij-1.jpg

ವಿಜಯಪುರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ ಕಣ್ಣೀರು ಸುರಿಸಿಕೊಂಡು ಜನರನ್ನು ಮರಳು ಮಾಡಲು ಹೊರಟಿದ್ದಾರೆ. ಪ್ರಸಕ್ತ ಸಂದರ್ಭದಲ್ಲಿ ನಮಗೆ ಕಣ್ಣೀರು ಸುರಿಸುವ ಸಿಎಂಗಿಂತ ಕಣ್ಣೀರು ಒರೆಸುವ ಸಿಎಂ ಬೇಕಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಅವರು ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ನಗರದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲೆಯ ಶಕ್ತಿ ಕೇಂದ್ರಗಳ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಬಿಜೆಪಿ ಸದಾ ಮಹಿಳೆಯರನ್ನು ಗೌರವಿಸುವ ಪಕ್ಷವಾಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಸರ್ಕಾರ ದೇಶದಲ್ಲಿ ರಕ್ಷಣೆ ಹೊಣೆಯನ್ನೇಧೀರ ಮಹಿಳೆ ನಿರ್ಮಲಾ ಸೀತಾರಾಮನ್‌ ಅವರಿಗೆ ನೀಡುವ ಮೂಲಕ ಮಹಿಳೆಗೆ ಆಕೆಯ ಸಾಮರ್ಥ್ಯ ಸಾಬೀತು ಮಾಡಲು ಅವಕಾಶ ಕಲ್ಪಿಸಿದ್ದಾರೆ. ಆದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಲ್ಲಿ ಮಹಿಳೆಯರ ಸ್ಥಾನಮಾನ ಹೇಗಿದೆ, ಅವರ ವರ್ತನೆ ಹೇಗಿದೆ ಎಂಬುದು ದೇಶದ ಜನರಿಗೆಲ್ಲ ಗೊತ್ತಿದೆ ಎಂದರು.

ಇದಲ್ಲದೇ ಮೋದಿ ಸರ್ಕಾರ ಭೇಟಿ ಬಚಾವೋ ಭೇಟಿ ಪಡಾವೋ, ಬಾಲ್ಯ ವಿವಾಹ ನಿರ್ಬಂಧ, ಕೌಟುಂಬಿಕ ದೌರ್ಜನ್ಯಕ್ಕೆ ಅಪರಾಧ ಕಾನೂನಿನ ಪರಿಹಾರ, ದೀನದಯಾಳ್‌ ಪುನರ್ವಸತಿ ಯೋಜನೆ ಸೇರಿದಂತೆ ಮಹಿಳೆಯರ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಸಮರ್ಥವಾಗಿ ರೂಪಿಸಿ, ಅನುಷ್ಠಾನ ಮಾಡಿದೆ ಎಂದರು. 

ಇದಲ್ಲದೇ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 5 ವರ್ಷಗಳಲ್ಲಿ ದೇಶವನ್ನು ಸಮಗ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದೆ. ದೇಶದ ಕಟ್ಟಕಡೆ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವ ಹಲವು ಯೋಜನೆ ರೂಪಿಸಿ, ಪರಿಣಾಮಕಾರಿ ಅನುಷ್ಠಾನಕ್ಕೆ ಮಾಡಿದ್ದಾರೆ ಎಂದರು.

ಕೇಂದ್ರ ಕುಡಿವ ನೀರು ಹಾಗೂ ನೈರ್ಮಲ್ಯ ಖಾತೆ ಸಚಿವ ರಮೇಶ ಜಿಗಜಿಣಗಿ ಮಾತನಾಡಿ, ಜಿಲ್ಲೆಯ ಕುಡಿವ ನೀರಿನ ಅಮೃತ ಯೋಜನೆ ಅನುಷ್ಠಾನಕ್ಕೆ 110 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಪಾಸ್‌ಫೋರ್ಟ್‌ ಸೇವಾ ಕೇಂದ್ರ ಸ್ಥಾಪನೆ, ರಾಷ್ಟ್ರೀಯ ಹೆದ್ದಾರಿ 218ರ ಅಗಲೀಕರಣ,
ನಗರದ ರೈಲ್ವೇ ನಿಲ್ದಾಣ ನವೀಕರಣ ಸೇರಿದಂತೆ ಹಲವು ಯೋಜನೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಪರಿಶ್ರಮದಿಂದ ದುಡಿದಿದ್ದೇನೆ ಎಂದರು. 

ಕನ್ನಡಿಗರಿಗೆ ಮೊದಲ ಬಾರಿಗೆ ಕನ್ನಡ ಭಾಷೆಯಲ್ಲೇ ರೈಲ್ವೆ ಪರೀಕ್ಷೆ ಬರೆಯಲು ಮೋದಿ ಸರ್ಕಾರ ಅವಕಾಶ ಕಲ್ಪಿಸುವ ಮೂಲಕ ಪ್ರಾದೇಶಿಕ ಭಾಷೆಗೆ ವಿಶೇಷ ಗೌರವ ನೀಡಿದೆ. ಸ್ವತ್ಛ ಭಾರತ ಗ್ರಾಮೀಣ ಯೋಜನೆ ಆರಂಭಿಸಿ ಪ್ರತಿ ಮನೆಗೆ ವೈಯಕ್ತಿಕ ಶೌಚಾಲಯ ನಿರ್ಮಿಸುವ ಮೂಲಕ ದೇಶದಲ್ಲಿ ಸ್ವತ್ಛತೆಯ ಅಭಿಯಾನ ನಡೆಸಿ ಜನಮನ್ನಣೆ ಗಳಿಸಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿದರು. ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಲ್ಲಮ್ಮ ಜೋಗೂರ, ಕಲಾವತಿ, ಶಕುಂತಲಾ, ವಿಜಯಲಕ್ಷ್ಮೀ ಹಮೀದಖಾನೆ, ಅನುರಾಧಾ ಕಲಾಲ್‌, ಗೀತಾ ಕುಗನೂರ, ಭಾರತಿ ಭುಯ್ನಾರ, ರಜನಿ ಸಂಬಣ್ಣಿ, ಶಾಂತಾ ಉತ್ಲಾಸ್ಕರ್‌, ಗುರುದೇವಿ, ಶಾರದಾ, ಪಾರ್ವತಿ, ಸಾವಿತ್ರಿ, ವಾಣಿ, ಕವಿತಾ, ರೇಣುಕಾ ಬಿಜೆಪಿಯ ಹಲವಾರು ಮಹಿಳಾ ಮೋರ್ಚಾ ಪದಾಧಿಕಾರಿಗಳು ಇದ್ದರು. ಸಂಕಲ್ಪ ಪಾಟೀಲ ಸ್ವಾಗತಿಸಿದರು. ಸುಮಂಗಲಾ ಕೋಟಿ ನೀರೂಪಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.