ಇಂಡಿ ತಾಲೂಕಾಸ್ಪತ್ರೆಯಲ್ಲಿ ಅವ್ಯವಸ್ಥೆ


Team Udayavani, Mar 19, 2019, 11:30 AM IST

vij-1.jpg

ಇಂಡಿ: ಜಿಲ್ಲೆಯವರೇ ಆರೋಗ್ಯ ಸಚಿವರಾದರೂ ಆಸ್ಪತ್ರೆಗಳು ಮಾತ್ರ ಸುಧಾರಣೆಯಾಗದೆ ಹಾಗೇ ಉಳಿಯುತ್ತಿವೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯ ಇದುವರೆಗೂ ಬಗೆಹರಿದಿಲ್ಲ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು ರೋಗಿಗಳು ರಾತ್ರಿ ಸಮಯದಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇನ್ನು ಇದ್ದ ಕೆಲ ವೈದ್ಯರು ಸಹ ಸರಿಯಾಗಿ ಕಾರ್ಯ ಮಾಡುತ್ತಿಲ್ಲ. ಬೆಳಗ್ಗೆ ಬಂದು ಒಂದು ಗಂಟೆ ಕುಳಿತುಕೊಂಡು ಹೋಗುತ್ತಾರೆ. ಅವರಿಗೆ ಯಾರೂ ಏನೂ ಹೇಳಲ್ಲ. ಹೀಗಾಗಿ ರೋಗಿಗಳಿಗೆ ತೊಂದರೆಯಾಗುತ್ತದೆ.

ತೀವ್ರ ನಿಗಾ ಘಟಕ ಇಲ್ಲ. ಹೆಣ್ಣು ಮಕ್ಕಳ ಹೆರಿಗೆ ಮಾಡಿಸಿಕೊಳ್ಳಲು ಒಬ್ಬರೂ ಹೆರಿಗೆ ತಜ್ಞರಿಲ್ಲ. ಹೆರಿಗೆಗೆ ಸಹ ವಿಜಯಪುರ, ಸೊಲ್ಲಾಪುರ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇಲ್ಲಿದೆ. ಹೆಸರಿಗೆ 100 ಹಾಸಿಗೆ ಆಸ್ಪತ್ರೆಯಾಗಿದ್ದರೂ ಸಿಬ್ಬಂದಿಗಳು
ಇರದೇ ಇರುವುದರಿಂದ ರೋಗಿಗಳು ಮತ್ತೆ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ.

ಸಿಬ್ಬಂದಿಗಿಲ್ಲ ವಸತಿ ಗೃಹ: ಈ ಹಿಂದೆ ಹಳೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ವಸತಿ ಗೃಹಗಳಿದ್ದು ಅವುಗಳನ್ನು ದುರಸ್ತಿ ಮಾಡಿಸಿಲ್ಲ.
ಮೇಲಿನ ಹಂಚುಗಳು ಬೀಳುತ್ತಿವೆ. ಅಂತಹ ಮನೆಗಳಲ್ಲಿಯೇ ಸಿಬ್ಬಂದಿ ವಾಸವಿದ್ದಾರೆ. ಹೆರಿಗೆಗೆ ಸಂಬಂಧಿಸಿದಂತೆ ಹೆರಿಗೆ ತಜ್ಞರೆ ಇಲ್ಲ.
12 ನರ್ಸಗಳಿದ್ದು, ಮೂವರು ನರ್ಸಗಳು ಹೆರಿಗೆ ಮಾಡಿಕೊಳ್ಳುತ್ತಾರೆ. ಆಸ್ಪತ್ರೆಗೆ ಅವಶ್ಯವಿರುವಷ್ಟು ನರ್ಸಗಳು ಇದ್ದರೂ ರಾತ್ರಿ ಸಮಯದಲ್ಲಿ ಬಂದ ರೋಗಿಗಳು ಮತ್ತು ಹೆರಿಗೆಗಾಗಿ ಬಂದ ಮಹಿಳೆಯರಿಂದ ನರ್ಸಗಳು ದುಡ್ಡು ಪಡೆಯುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಖಾಲಿ ಹುದ್ದೆಗಳು: ಹೊರ ಗುತ್ತಿಗೆ ಆಧಾರದ ಮೇಲೆ 9 ಜನ ಕಾರ್ಯ ನಿರ್ವಹಿಸುತ್ತಿದ್ದು, ಗ್ರುಪ್‌ಡಿ ನೌಕರರು ಒಟ್ಟು 30 ಜನ ಬೇಕು.
ಆದರೆ ಈಗ ನಾಲ್ವರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು 26 ಖಾಲಿ ಇವೆ. ಕಚೇರಿಗೆ ಒಂದು ಎಫ್‌ಡಿಸಿ, ಒಂದು ಎಸ್‌ಡಿಸಿ ಹಾಗೂ
ಒಂದು ಡಾಟಾ ಆಪರೇಟರ್‌ ಹುದ್ದೆ ಖಾಲಿ ಇವೆ. ಇಬ್ಬರು ವೈದ್ಯರು ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. 
„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.