ಬಸ್‌ ಡಿಪೋ ಉದ್ಘಾಟನೆಗೆ ನೀತಿ ಸಂಹಿತೆ ಅಡ್ಡಿ


Team Udayavani, Mar 22, 2019, 11:04 AM IST

vij.jpg

ಇಂಡಿ: ಲೋಕಾರ್ಪಣೆಗೆ ಸಿದ್ಧವಾಗಿದ್ದ ಬಸ್‌ ಡಿಪೋಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ನೀತಿ ಸಂಹಿತೆ ಇರದಿದ್ದರೆ ಈಗಾಗಲೇ ಈ ಬಸ್‌ ಡಿಪೋ ಕಾರ್ಯಾರಂಭ ಮಾಡುತ್ತಿತ್ತು. ಪಟ್ಟಣದಿಂದ ಹಂಜಗಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ನೂತನ ಬಸ್‌ ಡಿಪೋ ಉದ್ಘಾಟನೆಗೆ ಸಜ್ಜಾಗಿ ತಿಂಗಳುಗಳೇ ಕಳೆದಿವೆ. ಈ ಬಸ್‌ ಡಿಪೋ ನಿರ್ಮಾಣ ಮಾಡಬೇಕೆಂಬುದು ತಾಲೂಕಿನ ಜನರ ಬಹು ದಿನಗಳ ಬೇಡಿಕೆಯಾಗಿತ್ತು. ಈ ಹಿಂದೆ 25 ವರ್ಷಗಳ ಹಿಂದೆಯೇ ಪಟ್ಟಣದ ಅಗರಖೇಡ ರಸ್ತೆಯಲ್ಲಿ ಬಸ್‌ ಡಿಪೋ ನಿರ್ಮಾಣ ಮಾಡಬೇಕು ಎಂದು ಅಂದಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಆಸಕ್ತಿ ತೋರಿದ್ದರು. ಆದರೆ ಅಂದು ಜಾಗ ಒದಗಿಸದೇ ಇರುವುದರಿಂದ ಬಸ್‌ ಡಿಪೋ ನಿರ್ಮಾಣ ಇದುವರೆಗೂ ಸಾಧ್ಯವಾಗಿರಲಿಲ್ಲ. ಈಗ ಶಾಸಕ ಯಶವಂತ್ರಾಯಗೌಡ ಪಾಟೀಲ ಅವರ ಶ್ರಮದಿಂದ ಉದ್ಘಾಟನೆಗೆ ಸಜ್ಜಾಗಿದೆ.

ಬಸ್‌ ಡಿಪೋ ನಿರ್ಮಾಣಕ್ಕೆ ಎರಡು ಎಕರೆ ಸರ್ಕಾರಿ ಜಾಗವನ್ನು ಕೆಎಸ್‌ಆರ್‌ಟಿಸಿಗೆ ನೀಡಿದ್ದರ ಪರಿಣಾಮವಾಗಿ ಇಂದು ಬಸ್‌ ಡಿಪೋ ನಿರ್ಮಾಣವಾಗಿದೆ. ಈಗಾಗಲೆ ನೂತನ ಬಸ್‌ ಡಿಪೋದಲ್ಲಿ ರ್‍ಯಾಂಪ್‌, 8 ಸೆಕ್ಯೂರಿಟಿ, 5 ಸಿಬ್ಬಂದಿ,
5 ಮೆಕ್ಯಾನಿಕ್‌ ಕೋಣೆಗಳ ನಿರ್ಮಾಣ ಕಾರ್ಯ ಮುಗಿದಿದೆ. ಡಿಪೋ ಆವರಣದಲ್ಲಿ ಕಾಂಕ್ರೀಟ್‌ ಹಾಕಲಾಗಿದೆ. ಬಣ್ಣ ಹಚ್ಚುವ ಕಾಮಗಾರಿ ಮುಗಿದಿದೆ.

ನಗರ ಸಾರಿಗೆ ಚಿಂತನೆ: ಪಟ್ಟಣದ ಮಧ್ಯಭಾಗದಲ್ಲಿರುವ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿರುವ ಹಳೆಯ ಬಸ್‌ ಡಿಪೋ
ನೂತನ ಬಸ್‌ ಡಿಪೋಗೆ ಸ್ಥಳಾಂತರಗೊಂಡ ಮೇಲೆ ಹಳೆ ಬಸ್‌ ಡಿಪೋವನ್ನು ನಗರ ಸಾರಿಗೆ ಬಸ್‌ ನಿಲ್ದಾಣ ಮಾಡುವ ಉದ್ದೇಶವಿದೆ ಎನ್ನಲಾಗುತ್ತಿದ್ದು, ನಗರ ಸಾರಿಗೆಯಿಂದ ಒಟ್ಟು 10 ಕಿಮೀ ಅಂತರದವರೆಗೆ ನಗರ ಸಾರಿಗೆ ಬಸ್‌
ಸಾರಿಗೆ ವ್ಯವಸ್ಥೆ ಮಾಡಲು ಚಿಂತನೆ ನಡೆದಿದೆ. 

ಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಬಸ್‌ ಡಿಪೋ ನಿರ್ಮಾಣದ ಕಾಮಗಾರಿ ಪೂರ್ಣಗೊಂಡಿದೆ. ನೀತಿ ಸಂಹಿತೆ ಇರುವ ಕಾರಣ ಉದ್ಘಾಟನೆ ಮುಂದೂಡಲಾಗಿದೆ. ನೀತಿ ಸಂಹಿತೆ ಮುಗಿದ ಮೇಲೆ ಡಿಪೋ ಉದ್ಘಾಟನೆ ಮಾಡಿ ಅಲ್ಲಿಂದ ಕಾರ್ಯಾರಂಭ ಮಾಡಲಾಗುವುದು. 
 ವಿ.ಎಲ್‌. ಹತ್ತಳ್ಳಿ, ಘಟಕ ವ್ಯವಸ್ಥಾಪಕ.

ಡಿಪೋ ಸ್ಥಳಾಂತರವಾದರೆ ನಗರ ಸಾರಿಗೆ ಮಾಡಿ 10 ಕಿಮೀ ಒಳಗಿನ ಹಳ್ಳಿಗಳಿಗೆ ನಿರಂತರ ಬಸ್‌ ಸೌಲಭ್ಯ
ಒದಗಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಏನೇನು ಸೌಲಭ್ಯಗಳಿವೆಯೋ ಅವೆಲ್ಲ ಸೌಲಭ್ಯಗಳು ತಾಲೂಕಿಗೆ ಒದಗಿಸಬೇಕು.
  ಶಿವಲಿಂಗಪ್ಪ ಬಿರಾದಾರ, ಸ್ಥಳೀಯರು.

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.