600 ಕೋಟಿ ರೂ. ಸಿನಿಮಾ ಮೋಹನ್ ಲಾಲ್ ಸಿನಿ ಬದುಕಿನ ಕೊನೆ ಚಿತ್ರ?
Team Udayavani, Jan 11, 2017, 12:25 PM IST
ತಿರುವನಂತಪುರಂ: 3 ದಶಕಗಳ ಕಾಲ ಮಲಯಾಳಂ ಸಿನಿಮಾ ರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮೆರೆದಿದ್ದ ಖ್ಯಾತ ನಟ ಮೋಹನ್ ಲಾಲ್ ಅವರು ಸಿನಿ ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಮನೋರಮಾ ವರದಿ ಪ್ರಕಾರ, ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾವೇ ಮೋಹನ್ ಲಾಲ್ ವೃತ್ತಿ ಬದುಕಿನ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿದೆ.
ಕಾದಂಬರಿಕಾರ ಎಂ.ಟಿ. ವಾಸುದೇವ್ ನಾಯರ್ ವಿರಚಿತ “ರಂಡಮ್ ಓಝಾಮ್’ ಕಾದಂಬರಿಯಾಧರಿತ ಚಿತ್ರ ಇದಾಗಿದೆ. 2017ರ ಅಂತ್ಯಕ್ಕೆ ಚಿತ್ರ ಸೆಟ್ಟೇರಲಿದೆ. ಈ ಸಿನಿಮಾದ ನಂತರ ಮೋಹನ್ ಲಾಲ್ ನಿವೃತ್ತಿಯಾಗಲಿದ್ದಾರೆ ಎಂದು ವರದಿ ವಿವರಿಸಿದೆ.
“ರಂಡಮ್ ಓಝಾಮ್’ ಮಹಾಭಾರತಕಥೆಯನ್ನೊಳಗೊಂಡಿರುವ ಕಾದಂಬರಿಯಾಗಿದೆ. ಈ ಸಿನಿಮಾ ಜಗತ್ತನ್ನೇ ಬೆಚ್ಚಿಬೀಳಿಸಲಿದೆ ಅಂತೆ. ಮೋಲಿವುಡ್ ನಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲ ಹಿಂದಿ, ಕನ್ನಡ, ತಮಿಳು ಹಾಗೂ ತೆಲುಗು ಸಿನಿಮಾದಲ್ಲೂ ತಮ್ಮ ಛಾಪನ್ನು ಮೂಡಿಸಿರುವ ಹಿರಿಮೆ ಅವರದ್ದು.
ಇತ್ತೀಚೆಗೆ ಬಿಡುಗಡೆಯಾಗಿರುವ ಒಪ್ಪಂ, ಪುಲಿಮುರುಗನ್ ಸಿನಿಮಾ ಕೂಡಾ ಮೋಹನ್ ಲಾಲ್ ಸಿನಿ ಬದುಕಿಗೆ ಹೊಸ ಭಾಷ್ಯೆ ಬರೆದಿದೆ. ಭಾರತೀಯ ಚಿತ್ರರಂಗಕ್ಕೆ ಲಾಲ್ ಕೊಡುವೆ ಅಪಾರ, ಅವರು ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು – ಎರಡು ಅತ್ಯುತ್ತಮ ನಟ ಪ್ರಶಸ್ತಿಗಳು, ಒಂದು ವಿಶೇಷ ಜ್ಯೂರಿ ಪ್ರಶಸ್ತಿ ಮತ್ತು ಒಂದು ಅತ್ಯುತ್ತಮ ಚಿತ್ರಕ್ಕಾಗಿ ಪ್ರಶಸ್ತಿ (ನಿರ್ಮಾಪಕರಾಗಿ) ಮೊದಲಾದವನ್ನು ಪಡೆದಿದ್ದಾರೆ. ಕೇರಳದ ಯಾವುದೇ ನಟರಿಗಿಂತ ಹೆಚ್ಚು ಬಾರಿ ಅಂದರೆ ಆರು ಬಾರಿ ಅತ್ಯುತ್ತಮ ನಟ ಕೇರಳ ರಾಜ್ಯ ಪ್ರಶಸ್ತಿಯನ್ನು ಮೋಹನ್ಲಾಲ್ ತಮ್ಮದಾಗಿಸಿಕೊಂಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ೨೦೦೧ರಲ್ಲಿ ಭಾರತ ಸರ್ಕಾರ ಮೋಹನ್ಲಾಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ