ಕಬೀರ ನಾಯಕಿ ಸನುಷಾಗೆ ರೈಲಿನಲ್ಲಿ ಲೈಂಗಿಕ ಕಿರುಕುಳ!
Team Udayavani, Feb 2, 2018, 10:37 AM IST
ತಿರುವನಂತಪುರಂ: ದಕ್ಷಿಣ ಭಾರತದ ನಟಿ ಸನುಷಾಗೆ ರೈಲಿನಲ್ಲಿ ಸಹಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ನಸುಕಿನ ವೇಳೆ ನಡೆದಿದೆ.
ಕಣ್ಣೂರಿನಿಂದ ತಿರುವನಂತಪುರಂಗೆ ಮಾವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎಸಿ ಕೋಚ್ನಲ್ಲಿ ಮಲಗಿದ್ದ ಸನುಷಾ ಮೇಲೆ ಕಾಮುಕ ಕೈಹಾಕಿದ್ದಾನೆ. ಕೂಡಲೆ ಕಾಮುಕನನ್ನು ಹಿಡಿದ ಸನುಷಾ ಜೋರಾಗಿ ಕಿರುಚಿಕೊಂಡಿದ್ದಾರೆ.
ಕಿರುಚಾಟ ಕೇಳಿ ಪಕ್ಕದ ಬೋಗಿಯಲ್ಲಿದ್ದ ಚಿತ್ರಕಥೆಗಾರ ಆರ್.ಉನ್ನಿ ಮತ್ತು ರಂಜಿತ್ ಎಂಬಾತ ಓಡಿ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ರೈಲ್ವೇ ಪೊಲೀಸರು 40 ರ ಹರೆಯದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಕನ್ಯಾಕುಮಾರಿಯ ಚಿನ್ನದ ವ್ಯಾಪಾರಿ ಆಂಟೋ ಬೋಸ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ತ್ರಿಶ್ಯೂರ್ನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.
ಕಾಮುಕರಿಗೆ ಪಾಠ ಆಗಬೇಕು
‘ನಾನು ಈ ವಿಚಾರವನ್ನು ನನ್ನಲ್ಲೇ ಇಟ್ಟು ಸುಮ್ಮನಿರಬಹುದಿತ್ತು. ಆದರೆ ಇಂತಹದ್ದು ಮುಂದುವರಿಯಬಾರದು. ಕಾಮುಕರಿಗೆ ತಕ್ಕ ಪಾಠ ಆಗಬೇಕು. ಕಾಮುಕನಿಗೆ ಶಿಕ್ಷೆಯಾಗಬೇಕು ಎಂದು ಆತನನ್ನು ಹಿಡಿದು ಕೊಟ್ಟಿದ್ದೇನೆ’ ಎಂದು ಸನುಷಾ ಹೇಳಿದ್ದಾರೆ.
ಸನುಷಾ ಧೈರ್ಯ ಸಾಹಸಕ್ಕೆ ಸಾಮಾಜಿಕ ತಾಣದಲ್ಲಿ ಹಲವು ಮಹಿಳೆಯರು ಬೆಂಬಲ ವ್ಯಕ್ತಪಡಿಸಿದ್ದು ಕಾಮುಕರಿಕೆ ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ. ಹಲವರು ರೈಲು ಪ್ರಯಾಣದಲ್ಲಿ ತಾವು ಅನುಭವಿಸಿದ ಕಿರುಕುಳದ ಬಗ್ಗೆಯೂ ಬರೆದುಕೊಂಡಿದ್ದಾರೆ.
ಚತುರ್ಭಾಷಾ ನಟಿಯಾಗಿರುವ ಸನುಷಾ ಬಾಲನಟಿಯಾಗಿ ಚಿತ್ರ ರಂಗ ಪ್ರವೇಶಿಸಿದ್ದರು. ಧಾರಾವಾಹಿಗಳಲ್ಲೂ ನಟಿಸಿರುವ ಅವರು ಮಲಯಾಳಂ, ತಮಿಳು ಮತ್ತು ತೆಲುಗಿನ 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಕನ್ನಡದ ಶಿವರಾಜ್ ಕುಮಾರ್ ಅವರ ‘ಸಂತೆಯಲ್ಲಿ ನಿಂತ ಕಬೀರ’ ಚಿತ್ರದಲ್ಲಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ