ಫಿಲ್ಮ್ ಛೇಂಬರ್ ಮುಂಭಾಗ ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ!
Team Udayavani, Apr 7, 2018, 3:02 PM IST
ಹೈದರಾಬಾದ್:ತೆಲುಗು ಸಿನಿಮಾ ರಂಗದಲ್ಲಿನ ಕಾಸ್ಟಿಂಗ್ ಕೌಚ್(ಲೈಂಗಿಕ ಕಿರುಕುಳ) ನಿಲ್ಲಿಸಬೇಕೆಂದು ಆಗ್ರಹಿಸಿ ತೆಲುಗು ನಟಿ ಶ್ರೀರೆಡ್ಡಿ ಶನಿವಾರ ಬೆಳಗ್ಗೆ ತೆಲುಗು ಫಿಲ್ಮ್ ಛೇಂಬರ್ ಮುಂಭಾಗ ಅರೆನಗ್ನವಾಗಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ತದನಂತರ ಪೊಲೀಸರು ನಟಿ ಶ್ರೀರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡಿದ್ದರು.
ತೆಲುಗು ಸಿನಿಮಾದ ಹಲವಾರು ನಿರ್ಮಾಪಕರು ಮತ್ತು ನಿರ್ದೇಶಕರು ಲೈಂಗಿಕ ಕಿರುಕುಳ ನೀಡಿರುವುದಾಗಿ ಶ್ರೀರೆಡ್ಡಿ ಆರೋಪಿಸಿದ್ದಾರೆ. ಏತನ್ಮಧ್ಯೆ ಈಗಾಗಲೇ ಮೂರು ಸಿನಿಮಾಗಳಲ್ಲಿ ನಟಿಸಿರುವ ಶ್ರೀರೆಡ್ಡಿಗೆ ಸಿನಿಮಾ ಕಲಾವಿದರ ಸಂಘದ(ಎಂಎಎ) ಸದಸ್ಯತ್ವ ನೀಡಲು ನಿರಾಕರಿಸಲಾಗಿದೆ.
ಸಿನಿಮಾದಲ್ಲಿ ಅವಕಾಶ ಕೊಡುವ ಮುನ್ನ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಲು ತೆಲುಗು ಸಿನಿಮಾ ರಂಗದ ಹಲವು ಮಂದಿ ಬೇಡಿಕೆ ಇಟ್ಟಿದ್ದರು. ಅದರಂತೆ ಫೋಟೋ ಮತ್ತು ವಿಡಿಯೋ ಕಳುಹಿಸಿರುವುದಾಗಿ ಶ್ರೀರೆಡ್ಡಿ ತಿಳಿಸಿದ್ದಾರೆ. ಆದರೆ ನಗ್ನ ಪೋಟೋ ಮತ್ತು ವಿಡಿಯೋ ನೋಡಿದರೆ ವಿನಃ ಸಿನಿಮಾದಲ್ಲಿ ನಟಿಸಲು ಯಾವುದೇ ಅವಕಾಶ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
ಅಷ್ಟೇ ಅಲ್ಲ ತನ್ನಿಂದ ಲೈವ್ ನಗ್ನ ವಿಡಿಯೋಕ್ಕಾಗಿ ಬೇಡಿಕೆ ಇಟ್ಟಿದ್ದರು. ಸಿನಿಮಾಗಳಲ್ಲಿ ನಟಿಸುವ ನಟಿಯರಿಗೆ ಲೈಂಗಿಕ ಕಿರುಕುಳ ನೀಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಇಂತಹ ಕಾಸ್ಟಿಂಗ್ ಕೌಚ್ ತೆಲುಗು ಸಿನಿಮಾ ರಂಗದಲ್ಲಿ ನಿಲ್ಲಬೇಕೆಂದು ಶ್ರೀರೆಡ್ಡಿ ಆಗ್ರಹಿಸಿದ್ದಾರೆ.
ಸಿನಿಮಾ ರಂಗದಲ್ಲಿನ ಕಾಸ್ಟಿಂಗ್ ಕೌಚ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀರೆಡ್ಡಿ ಬೆಳಗ್ಗೆ ಸಲ್ವಾರ್ ಕಮೀಜ್ ಹಾಕಿಕೊಂಡು ಫಿಲ್ಮ್ ಛೇಂಬರ್ ಎದುರು ಬಂದಿದ್ದು, ಬಳಿಕ ವಿಡಿಯೋ ಕ್ಯಾಮರಾದ ಎದುರಲ್ಲೇ ತನ್ನ ಬಟ್ಟೆಯನ್ನು ಕಳಚಿ, ಕೈಯನ್ನು ಎದೆಗೆ ಅಡ್ಡ ಹಿಡಿದು, ಅಂಡರ್ ವೇರ್ ನಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು.! ನನ್ನ ನೋವನ್ನು ಹೊರಹಾಕಲು ನನಗೆ ಉಳಿದಿರುವ ದಾರಿ ಇದೊಂದೇ. ಒಂದು ವೇಳೆ ತೆಲುಗು ನಿರ್ಮಾಪಕರು ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡದೆ ಹೋದರೆ ಮುಂದೆ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು