ಫಿಲ್ಮ್ ಛೇಂಬರ್ ಮುಂಭಾಗ ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ!
Team Udayavani, Apr 7, 2018, 3:02 PM IST
ಹೈದರಾಬಾದ್:ತೆಲುಗು ಸಿನಿಮಾ ರಂಗದಲ್ಲಿನ ಕಾಸ್ಟಿಂಗ್ ಕೌಚ್(ಲೈಂಗಿಕ ಕಿರುಕುಳ) ನಿಲ್ಲಿಸಬೇಕೆಂದು ಆಗ್ರಹಿಸಿ ತೆಲುಗು ನಟಿ ಶ್ರೀರೆಡ್ಡಿ ಶನಿವಾರ ಬೆಳಗ್ಗೆ ತೆಲುಗು ಫಿಲ್ಮ್ ಛೇಂಬರ್ ಮುಂಭಾಗ ಅರೆನಗ್ನವಾಗಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ತದನಂತರ ಪೊಲೀಸರು ನಟಿ ಶ್ರೀರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡಿದ್ದರು.
ತೆಲುಗು ಸಿನಿಮಾದ ಹಲವಾರು ನಿರ್ಮಾಪಕರು ಮತ್ತು ನಿರ್ದೇಶಕರು ಲೈಂಗಿಕ ಕಿರುಕುಳ ನೀಡಿರುವುದಾಗಿ ಶ್ರೀರೆಡ್ಡಿ ಆರೋಪಿಸಿದ್ದಾರೆ. ಏತನ್ಮಧ್ಯೆ ಈಗಾಗಲೇ ಮೂರು ಸಿನಿಮಾಗಳಲ್ಲಿ ನಟಿಸಿರುವ ಶ್ರೀರೆಡ್ಡಿಗೆ ಸಿನಿಮಾ ಕಲಾವಿದರ ಸಂಘದ(ಎಂಎಎ) ಸದಸ್ಯತ್ವ ನೀಡಲು ನಿರಾಕರಿಸಲಾಗಿದೆ.
ಸಿನಿಮಾದಲ್ಲಿ ಅವಕಾಶ ಕೊಡುವ ಮುನ್ನ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಲು ತೆಲುಗು ಸಿನಿಮಾ ರಂಗದ ಹಲವು ಮಂದಿ ಬೇಡಿಕೆ ಇಟ್ಟಿದ್ದರು. ಅದರಂತೆ ಫೋಟೋ ಮತ್ತು ವಿಡಿಯೋ ಕಳುಹಿಸಿರುವುದಾಗಿ ಶ್ರೀರೆಡ್ಡಿ ತಿಳಿಸಿದ್ದಾರೆ. ಆದರೆ ನಗ್ನ ಪೋಟೋ ಮತ್ತು ವಿಡಿಯೋ ನೋಡಿದರೆ ವಿನಃ ಸಿನಿಮಾದಲ್ಲಿ ನಟಿಸಲು ಯಾವುದೇ ಅವಕಾಶ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
ಅಷ್ಟೇ ಅಲ್ಲ ತನ್ನಿಂದ ಲೈವ್ ನಗ್ನ ವಿಡಿಯೋಕ್ಕಾಗಿ ಬೇಡಿಕೆ ಇಟ್ಟಿದ್ದರು. ಸಿನಿಮಾಗಳಲ್ಲಿ ನಟಿಸುವ ನಟಿಯರಿಗೆ ಲೈಂಗಿಕ ಕಿರುಕುಳ ನೀಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಇಂತಹ ಕಾಸ್ಟಿಂಗ್ ಕೌಚ್ ತೆಲುಗು ಸಿನಿಮಾ ರಂಗದಲ್ಲಿ ನಿಲ್ಲಬೇಕೆಂದು ಶ್ರೀರೆಡ್ಡಿ ಆಗ್ರಹಿಸಿದ್ದಾರೆ.
ಸಿನಿಮಾ ರಂಗದಲ್ಲಿನ ಕಾಸ್ಟಿಂಗ್ ಕೌಚ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀರೆಡ್ಡಿ ಬೆಳಗ್ಗೆ ಸಲ್ವಾರ್ ಕಮೀಜ್ ಹಾಕಿಕೊಂಡು ಫಿಲ್ಮ್ ಛೇಂಬರ್ ಎದುರು ಬಂದಿದ್ದು, ಬಳಿಕ ವಿಡಿಯೋ ಕ್ಯಾಮರಾದ ಎದುರಲ್ಲೇ ತನ್ನ ಬಟ್ಟೆಯನ್ನು ಕಳಚಿ, ಕೈಯನ್ನು ಎದೆಗೆ ಅಡ್ಡ ಹಿಡಿದು, ಅಂಡರ್ ವೇರ್ ನಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು.! ನನ್ನ ನೋವನ್ನು ಹೊರಹಾಕಲು ನನಗೆ ಉಳಿದಿರುವ ದಾರಿ ಇದೊಂದೇ. ಒಂದು ವೇಳೆ ತೆಲುಗು ನಿರ್ಮಾಪಕರು ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡದೆ ಹೋದರೆ ಮುಂದೆ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ