ಅಬ್ ತಕ್ ಛಪ್ಪನ್ ಖ್ಯಾತಿಯ ಚಿತ್ರ ಕಥೆಗಾರ ರವಿಶಂಕರ್ ಆತ್ಮಹತ್ಯೆ
Team Udayavani, Jul 12, 2018, 1:27 PM IST
ಮಂಬಯಿ: ‘ಅಬ್ ತಕ್ ಛಪ್ಪನ್’ ಖ್ಯಾತಿಯ ಚಿತ್ರ ಕಥೆ ಬರಹಗಾರ ರವಿಶಂಕರ್ ಆಲೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.
ಅಂಧೇರಿಯ ಪಶ್ಚಿಮದ ಸವೆನ್ ಬಂಗ್ಲೋಸ್ ನಿವಾಸಿಯಾಗಿದ್ದ ರವಿಶಂಕರ್ ಬುಧವಾರ ತಡ ರಾತ್ರಿ ವೇಳೆಗೆ ಕಟ್ಟಡದ ಛಾವಣಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.
ಕಾವಲುಗಾರ ಭಾರೀ ಸದ್ದು ಕೇಳಿ ಸ್ಥಳಕ್ಕೆ ತೆರಳಿದಾಗ ರಕ್ತದ ಮಡುವಿನಲ್ಲಿ ರವಿಶಂಕರ್ ಬಿದ್ದಿದ್ದರು. ಕೆಲ ಹೊತ್ತಿನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ರವಿಶಂಕರ್ ಜೊತೆ ತಂದೆ ತಾಯಿ ವಾಸವಾಗಿದ್ದು ಕೆಲ ದಿನಗಳ ಹಿಂದೆ ಮೂಲ ನಿವಾಸ ಪಟ್ನಾಗೆ ತೆರಳಿದ್ದರು. ಜೊತಯಲ್ಲಿದ್ದ ಸಹೋದರ ಘಟನೆ ನಡೆದಾಗ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.
ವರ್ಸೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ಆಲೋಕ್ ಬೆಟ್ಟಿಂಗ್ ನಷ್ಟ ಅನುಭವಿಸಿ ಖನ್ನತೆಗೊಳಗಾಗಿದ್ದು, ಕೆಲ ದಿನಗಳಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ