ಅಬ್ ತಕ್ ಛಪ್ಪನ್ ಖ್ಯಾತಿಯ ಚಿತ್ರ ಕಥೆಗಾರ ರವಿಶಂಕರ್ ಆತ್ಮಹತ್ಯೆ
Team Udayavani, Jul 12, 2018, 1:27 PM IST
ಮಂಬಯಿ: ‘ಅಬ್ ತಕ್ ಛಪ್ಪನ್’ ಖ್ಯಾತಿಯ ಚಿತ್ರ ಕಥೆ ಬರಹಗಾರ ರವಿಶಂಕರ್ ಆಲೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.
ಅಂಧೇರಿಯ ಪಶ್ಚಿಮದ ಸವೆನ್ ಬಂಗ್ಲೋಸ್ ನಿವಾಸಿಯಾಗಿದ್ದ ರವಿಶಂಕರ್ ಬುಧವಾರ ತಡ ರಾತ್ರಿ ವೇಳೆಗೆ ಕಟ್ಟಡದ ಛಾವಣಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.
ಕಾವಲುಗಾರ ಭಾರೀ ಸದ್ದು ಕೇಳಿ ಸ್ಥಳಕ್ಕೆ ತೆರಳಿದಾಗ ರಕ್ತದ ಮಡುವಿನಲ್ಲಿ ರವಿಶಂಕರ್ ಬಿದ್ದಿದ್ದರು. ಕೆಲ ಹೊತ್ತಿನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ರವಿಶಂಕರ್ ಜೊತೆ ತಂದೆ ತಾಯಿ ವಾಸವಾಗಿದ್ದು ಕೆಲ ದಿನಗಳ ಹಿಂದೆ ಮೂಲ ನಿವಾಸ ಪಟ್ನಾಗೆ ತೆರಳಿದ್ದರು. ಜೊತಯಲ್ಲಿದ್ದ ಸಹೋದರ ಘಟನೆ ನಡೆದಾಗ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.
ವರ್ಸೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ಆಲೋಕ್ ಬೆಟ್ಟಿಂಗ್ ನಷ್ಟ ಅನುಭವಿಸಿ ಖನ್ನತೆಗೊಳಗಾಗಿದ್ದು, ಕೆಲ ದಿನಗಳಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ