ಅಬ್ ತಕ್ ಛಪ್ಪನ್ ಖ್ಯಾತಿಯ ಚಿತ್ರ ಕಥೆಗಾರ ರವಿಶಂಕರ್ ಆತ್ಮಹತ್ಯೆ
Team Udayavani, Jul 12, 2018, 1:27 PM IST
ಮಂಬಯಿ: ‘ಅಬ್ ತಕ್ ಛಪ್ಪನ್’ ಖ್ಯಾತಿಯ ಚಿತ್ರ ಕಥೆ ಬರಹಗಾರ ರವಿಶಂಕರ್ ಆಲೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.
ಅಂಧೇರಿಯ ಪಶ್ಚಿಮದ ಸವೆನ್ ಬಂಗ್ಲೋಸ್ ನಿವಾಸಿಯಾಗಿದ್ದ ರವಿಶಂಕರ್ ಬುಧವಾರ ತಡ ರಾತ್ರಿ ವೇಳೆಗೆ ಕಟ್ಟಡದ ಛಾವಣಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.
ಕಾವಲುಗಾರ ಭಾರೀ ಸದ್ದು ಕೇಳಿ ಸ್ಥಳಕ್ಕೆ ತೆರಳಿದಾಗ ರಕ್ತದ ಮಡುವಿನಲ್ಲಿ ರವಿಶಂಕರ್ ಬಿದ್ದಿದ್ದರು. ಕೆಲ ಹೊತ್ತಿನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ರವಿಶಂಕರ್ ಜೊತೆ ತಂದೆ ತಾಯಿ ವಾಸವಾಗಿದ್ದು ಕೆಲ ದಿನಗಳ ಹಿಂದೆ ಮೂಲ ನಿವಾಸ ಪಟ್ನಾಗೆ ತೆರಳಿದ್ದರು. ಜೊತಯಲ್ಲಿದ್ದ ಸಹೋದರ ಘಟನೆ ನಡೆದಾಗ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.
ವರ್ಸೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ಆಲೋಕ್ ಬೆಟ್ಟಿಂಗ್ ನಷ್ಟ ಅನುಭವಿಸಿ ಖನ್ನತೆಗೊಳಗಾಗಿದ್ದು, ಕೆಲ ದಿನಗಳಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್