ಸಿಲಿಕಾನ್ ಸಿಟಿಗೆ ಆಗಮಿಸಿದ ದೀಪ್ವೀರ್ ದಂಪತಿ ; 21 ಕ್ಕೆ ಅರತಕ್ಷತೆ
Team Udayavani, Nov 20, 2018, 3:22 PM IST
ಮುಂಬಯಿ: ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ಮಂಗಳವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ನವೆಂಬರ್ 21ರಂದು ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಬೆಂಗಳೂರಿನಲ್ಲಿ ಆರತಕ್ಷತೆ ನಡೆಯಲಿದೆ. ಈ ಹಿನ್ನಲೆಯಲ್ಲಿ ನವ ಜೋಡಿ ಕುಟುಂಬ ಸದಸ್ಯರೊಂದಿಗೆ ನಗರಕ್ಕೆ ಆಗಮಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನವ ಜೋಡಿ ಮಾಧ್ಯಮದವರತ್ತ ನಗುನಗುತ್ತಾ ಕೈ ಬೀಸಿದ್ದಾರೆ. ಈ ವೇಳೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಇಟಲಿಯ ಲೇಕ್ ಕೋಮೊದಲ್ಲಿ ಕಳೆದ ಬುಧವಾರ ಸಾರಸ್ವತ ಕೊಂಕಣಿ ಸಂಪ್ರದಾಯದಂತೆ,ಗುರುವಾರ ಸಿಂಧಿ ಸಂಪ್ರದಾಯದ ಪ್ರಕಾರ ಇಬ್ಬರ ಕುಟುಂಬದ ಸದಸ್ಯರು ಮತ್ತು ಆಯ್ದ ನಿಕಟ ಗೆಳೆಯರ ಸಮ್ಮಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.
ನವೆಂಬರ್ 28ರಂದು ಮುಂಬೈನಲ್ಲಿ ಬಾಲಿವುಡ್ ಮಂದಿಗಾಗಿ ಭರ್ಜರಿ ಅರತಕ್ಷತೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು