Cash-for-tweet ಕುಟುಕು ಕಾರ್ಯಾಚರಣೆ: ಸಿಕ್ಕಿಬಿದ್ದ ನಟ-ನಟಿಯರು


Team Udayavani, Feb 20, 2019, 6:01 AM IST

vivek-oberoi-700.jpg

ಹೊಸದಿಲ್ಲಿ : ರಾಜಕೀಯ ಪಕ್ಷಗಳಿಂದ ಅಪಾರ ಮೊತ್ತದ ಹಣ ಪಡೆದು ಅವುಗಳ ಪರವಾಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಚುನಾವಣಾ ಪ್ರಚಾರಾಭಿಯಾನ ಕೈಗೊಳ್ಳುವ ಡೀಲ್‌ ಗೆ 30ಕ್ಕೂ ಅಧಿಕ ಭಾರತೀಯ ಸಿನೆಮಾ ಮತ್ತು ಟಿವಿ ನಟ-ನಟಿಯರು ಒಪ್ಪಿಕೊಂಡಿರುವುದು ಇದೀಗ ಕುಟುಕು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 

ರಾಜಕೀಯ ಪಕ್ಷಗಳು ತೆರಿಗೆ ಒಳಪಡದಂತೆ ನಗದು ರೂಪದಲ್ಲಿ ತಮಗೆ ಹಣ ಪಾವತಿಸಬೇಕು ಎಂದು ಈ ನಟ-ನಟಿಯರು ಕೇಳಿಕೊಂಡಿದ್ದು ಈ ಮೂಲಕ ಅವರ ಈ ಅಕ್ರಮ ಸಂಭಾವನೆ ಕಾಳಧನವಾಗಲಿದೆ. 

ಈ ರೀತಿಯ ಒಪ್ಪಂದವನ್ನು ರಾಜಕೀಯ ಪಕ್ಷಗಳೊಂದಿಗೆ ಮಾಡಿಕೊಂಡಿರುವ ಮತ್ತು ಕುಟುಕು ಕಾರ್ಯಾಚರಣೆಯ ಕ್ಯಾಮೆರಾದಲ್ಲಿ ಸೆರೆ ಸಿಕ್ಕ ನಟ-ನಟಿಯರೆಂದರೆ ವಿವೇಕ್‌ ಒಬೆರಾಯ್‌, ಶಕ್ತಿ ಕಪೂರ್‌, ಜಾಕಿ ಶ್ರಾಫ್, ಆಮಿಷಾ ಪಟೇಲ್‌, ಮಹಿಮಾ ಚೌಧರಿ ಮತ್ತು ಸೋನು ಸೂದ್‌; ಗಾಯಕರ ಪೈಕಿ ಕೈಲಾಶ್‌ ಖೇರ್‌, ಅಭಿಜಿತ್‌ ಮತ್ತು ಮಿಕಾ ಅವರ ಹೆಸರು ಕೂಡ ಬಹಿರಂಗವಾಗಿದೆ.

ಸುದ್ದಿ ವೆಬ್‌ ಸೈಟ್‌ ಕೋಬ್ರಾ ಪೋಸ್ಟ್‌ ಕಳೆದ ವರ್ಷ ಮೂರು – ನಾಲ್ಕು ತಿಂಗಳ ಅವಧಿಯಲ್ಲಿ ನಡೆಸಿದ್ದ ಕ್ಯಾಮೆರಾ ಕುಟುಕು ಕಾರ್ಯಾಚರಣೆಯಲ್ಲಿ ಈ ನಟ-ನಟಿಯರು ಕ್ಯಾಶ್‌ ಫಾರ್‌ ಟ್ವೀಟ್‌ ಕೊಡುಗೆಯನ್ನು ಸ್ವೀಕರಿಸಿರುವುದು ದಾಖಲಾಗಿದೆ.  

ಕೋಬ್ರಾ ಪೋಸ್ಟ್‌ ನಿನ್ನೆ ಮಂಗಳವಾರ ಬಿಡುಗಡೆ ಮಾಡಿದ್ದ ‘ಆಪರೇಶನ್‌ ಕರೋಕೆ’ ಶೀರ್ಷಿಕೆಯ ಕುಟುಕು ಕಾರ್ಯಾಚರಣೆಯ ವಿಡಿಯೋ ಡಾಕ್ಯುಮೆಂಟರಿ ಇದೀಗ ರಾಜಕೀಯ ವಲಯಗಳಲ್ಲಿ ಸಂಚಲನ ಉಂಟುಮಾಡಿದೆ. 

ನಟ – ನಟಿಯರು ಮಾತ್ರವಲ್ಲದೆ ಡ್ಯಾನ್ಸರ್‌ಗಳು, ಸಿಂಗರ್‌ ಗಳು, ಮಾಡೆಲ್‌ಗ‌ಳು ಮುಂತಾಗಿ ಹಲವು ಬಗೆಯ ಕಲಾವಿದರು ಈ ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುವುದನ್ನು ವಿಡಿಯೋ ಡಾಕ್ಯುಮೆಂಟರಿಯಲ್ಲಿ ದಾಖಲಿಸಲಾಗಿದೆ. 

ಕಾಂಗ್ರೆಸ್‌, ಬಿಜೆಪಿ, ಆಮ್‌ ಆದ್ಮಿ ಪಾರ್ಟಿಯ ಏಜಂಟರುಗಳು ಈ ಕಲಾವಿದರಿಗೆ ಶೇ.10ರಿಂದ 20ರಷ್ಟು ಮುಂಗಡ ಹಣವನ್ನು ಚೆಕ್‌ ಅಥವಾ ಬ್ಯಾಂಕ್‌ ವರ್ಗಾವಣೆ ಮೂಲಕ ಮತ್ತು ಉಳಿದ ಮೊತ್ತವನ್ನು ನಗದು ರೂಪದಲ್ಲಿ ಪಾವತಿಸುವ ಕೊಡುಗೆಯನ್ನು ನೀಡಲಾಗಿದ್ದು ಅವರದನ್ನು ಸ್ವೀಕರಿಸಿರುವುದು ದಾಖಲಾಗಿದೆ. 

ವಿಶೇಷವೆಂದರೆ ರಾಜಕೀಯ ಪಕ್ಷಗಳ ಏಜಂಟರುಗಳ ಈ ಕೊಡುಗೆಯನ್ನು ತಿರಸ್ಕರಿಸಿದವರೆಂದರೆ ವಿದ್ಯಾ ಬಾಲನ್‌, ರಜಾ ಮುರಾದ್‌, ಅರ್ಷದ್‌ ವಾರ್ಸಿ, ಮತ್ತು ಟಿವಿ ನಟ ಸೌಮ್ಯ ಟಂಡನ್‌. 

ನಟ – ನಟಿಯರ ಬ್ರ್ಯಾಂಡ್‌ ವ್ಯಾಲ್ಯೂಗೆ ಅನುಗುಣವಾಗಿ ತಲಾ ಮೆಸೇಜ್‌ಗೆ 2 ಲಕ್ಷ ದಿಂದ 20 ಲಕ್ಷ ರೂ. ವರೆಗೆ ಹಣ ನೀಡುವ ಕೊಡುಗೆಯನ್ನು ಏಜಂಟರು ನೀಡಿದ್ದರು. ಟ್ಟಿಟರ್‌ ನಲ್ಲಿ ಅಪಾರ ಸಂಖ್ಯೆ ಹಿಂಬಾಲಕರನ್ನು ಹೊಂದಿರುವ ಕೆಲವು ಸೆಲೆಬ್ರಿಟಿಗಳಿಗೆ 20 ಕೋಟಿ ರೂ. ಕೊಡುಗೆಯನ್ನೂ ನೀಡಲಾಗಿತ್ತು. 

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.