ಮೀನು ಹಿಡಿಯುತ್ತಿದ್ದ ಕೈಗಳಲ್ಲಿ ದೇಶ ರಕ್ಷಣೆಯ ಬಂದೂಕು


Team Udayavani, Feb 25, 2019, 1:00 AM IST

army.jpg

ಮಲ್ಪೆ: ಮಲ್ಪೆ ಬಂದರಿನಲ್ಲಿ ದೋಣಿಯಿಂದ ಮೀನು ಇಳಿಸುತ್ತಿದ್ದ, ನಾಡ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಮೀನು ಹಿಡಿಯುತ್ತಿದ್ದ ವಸಂತ ಅಮೀನ್‌ ಇಂದು ಬಂದೂಕು ಹಿಡಿದು ದೇಶ ಕಾಯುವ ಯೋಧರಾಗಿದ್ದಾರೆ. 

ಸಿಪಾಯಿ ಯಾಗಿ ಸುದೀರ್ಘ‌ 17 ವರ್ಷಗಳನ್ನು ಕಳೆದಿದ್ದಾರೆ. ಉಡುಪಿ ತಾಲೂಕಿನ ತೊಟ್ಟಂ ವಡಭಾಂಡೇಶ್ವರ ಬೇಬಿ ಅಮೀನ್‌ ಮತ್ತು ಕೃಷ್ಣಪ್ಪ ಕೋಟ್ಯಾನ್‌ ದಂಪತಿಯ ಐವರು ಮಕ್ಕಳ ಪೈಕಿ ವಸಂತ ಅಮೀನ್‌ ಮೂರನೆಯವರು. ಮೀನುಗಾರ ಕುಟುಂಬ. ವಸಂತರು ವಡಭಾಂಡೇಶ್ವರ ಗಾಂಧಿ ಶತಾಬ್ದಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪೂರೈಸಿದ ಬಳಿಕ ಕುಲಕಸುಬಿಗೆ ಹೆಗಲು ಕೊಟ್ಟರು. ಸುಮಾರು 6 ವರ್ಷ ಮಲ್ಪೆಯ ಮೀನುಗಾರಿಕೆ ಬಂದರಿನಲ್ಲಿ “ಕನ್ನಿ  ಕೆಲಸ’, ಅಂದರೆ ಬೋಟಿನಿಂದ ಮೀನು ಇಳಿಸುವ ಕಾಯಕಕ್ಕೆ ಸೇರಿಕೊಂಡರು. ಜತೆಗೆ ನಾಡದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಮೀನು ಹಿಡಿಯುತ್ತಿದ್ದರು. ವಸಂತ ಅಮೀನರಿಗೆ ಎಳವೆಯಿಂದಲೇ ಸೇನೆ ಎಂದರೆ ಆಸಕ್ತಿ, ಕುತೂಹಲ. ಮಿಲಿಟರಿ ಸೇರುವ ಆಸೆ ಆಗಲೇ ಇತ್ತು. ದೊಡ್ಡವರಾದ ಮೇಲೆ ಏನಾಗುತ್ತೀರಿ ಎಂದು ಮೇಷ್ಟ್ರು ಕೇಳಿದ ಪ್ರಶ್ನೆಗೆ “ದೇಶ ಸೇವೆ ಮಾಡುವ ಯೋಧನಾಗುತ್ತೇನೆ’ ಎಂದು ಉತ್ತರಿಸುತ್ತಿದ್ದ ಬಾಲಕ.

ಗೆಳೆಯರ ಪ್ರೋತ್ಸಾಹ
ಶಿಕ್ಷಣವನ್ನು ಪ್ರೌಢಶಾಲೆ ಹಂತದಲ್ಲಿ ನಿಲ್ಲಿಸಿ ಕಾಯಕದಲ್ಲಿ ತೊಡಗಿದ್ದ ವಸಂತರು ಸೈನಿಕನಾಗುವ ಬಯಕೆಯನ್ನು ಗೆಳೆಯರಲ್ಲಿ ಆಗಾಗ ಹೇಳಿಕೊಳ್ಳು ತ್ತಿದ್ದರು. ಆದರೆ ಸ್ಪಷ್ಟ ದಾರಿ ಗೊತ್ತಿರಲಿಲ್ಲ. ಒಂದು ದಿನ ಪತ್ರಿಕೆಯಲ್ಲಿ  ಪ್ರಕಟವಾಗಿದ್ದ ಸೇನಾ ನೇಮಕಾತಿ ರ್ಯಾಲಿಯ ಬಗ್ಗೆ ಸ್ನೇಹಿತ ಶೈಲೇಶ್‌ ಕುಮಾರ್‌ ಗಮನ ಸೆಳೆದರು. ಅದಕ್ಕೆ ಬೇಕಾದ ಅರ್ಜಿಯನ್ನು ಅವರೇ ತಂದು ಭರ್ತಿ ಮಾಡಿ ಕಳುಹಿಸಿಕೊಟ್ಟಿದ್ದರು.
ವಸಂತ ಅಮೀನ್‌ 2002ರ ಜೂನ್‌ನಲ್ಲಿ ಮೈಸೂರಿನಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಭಾಗ
ವಹಿಸಿ ಮೊದಲ ಸುತ್ತಿನಲ್ಲೇ ಆಯ್ಕೆಯಾದರು. ಬಳಿಕ ಜಮ್ಮುವಿನ ನುಡಂಪೂರಿನಲ್ಲಿ ತರಬೇತಿ ಪಡೆದು, ಅಲ್ಲೇ ಸೇನೆಗೆ ನಿಯೋಜನೆಗೊಂಡರು. ಆ ಬಳಿಕ ಪಶ್ಚಿಮ ಬಂಗಾಲ, ಮಿಜೋರಾಂ, ಅಸ್ಸಾಂಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈಗ ಐದು ವರ್ಷಗಳಿಂದ ಗುಜರಾತಿನ ಗಾಂಧಿನಗರದಲ್ಲಿದ್ದಾರೆ.

ಉಗ್ರರ ಜತೆ ಸೆಣಸಾಟದ ನೆನಪು
2004ರ ಆಗಸ್ಟ್‌  14ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಘಟನೆ. ಶಿಬಿರದಲ್ಲಿದ್ದಾಗ ರಾತ್ರಿ ಸುಮಾರು 11 ಗಂಟೆ ವೇಳೆಗೆ ಉಗ್ರರು ಹಠಾತ್ತನೆ ಗುಂಡಿನ ದಾಳಿ ಆರಂಭಿಸಿದರು. ನಾವು ತತ್‌ಕ್ಷಣ ಪ್ರತಿದಾಳಿ ನಡೆಸಿದೆವು. ಸುತ್ತಲೂ ಪೂರ್ತಿ ಕತ್ತಲು, ಏನೂ ಕಾಣಿಸುತ್ತಿರಲಿಲ್ಲ. ಕೇವಲ ಗುಂಡು ಸಿಡಿಯುವುದು ಮಾತ್ರ ಕಾಣಿಸುತ್ತಿತ್ತು. ನಾವು ಸುಮಾರು 20 ಮಂದಿ ಯೋಧರಿದ್ದೆವು. ಒಂದೂವರೆ ಗಂಟೆ ಕಾಲ ಗುಂಡಿನ ಚಕಮಕಿ ನಡೆಯಿತು. ಉಗ್ರರು ಕೊನೆಗೆ ಪಲಾಯನ ಹೂಡಿದರು – ಇದು ವಸಂತ ಅಮೀನ್‌ ಅವರ ರಣಾಂಗಣದ ನೆನಪು.
ಮತ್ತೂಂದು ಘಟನೆ 2018ರದು. ನವೆಂಬರ್‌ ತಿಂಗಳಿನಲ್ಲಿ ಛತ್ತೀಸ್‌ಗಢದಲ್ಲಿ ಚುನಾವಣಾ ಕರ್ತವ್ಯ ದಲ್ಲಿದ್ದೆವು. ಅಲ್ಲಿನ ಕಾಂಚೇರ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಮ್ಮನ್ನು ನಿಯೋಜಿಸಲಾಗಿತ್ತು. ನದಿ ಸಮೀಪದ ಅದು ನಕ್ಸಲ್‌ ಬಾಧಿತ ಪ್ರದೇಶ. ಬೆಳಗ್ಗೆ ನಾವು ಮತದಾನ ಕೇಂದ್ರಕ್ಕೆ ಹೋಗಬೇಕೆನ್ನುವಾಗ ನಕ್ಸಲರು ಬಾಂಬ್‌ ಸಿಡಿಸಿ ಗುಂಡಿನ ದಾಳಿ ನಡೆಸಿದರು. ನಾವು ಪ್ರತ್ಯುತ್ತರಿಸಿದೆವು. ಈ ವೇಳೆ ನಮ್ಮ ಕಮಾಂಡರ್‌ಗೆ ಗುಂಡು ತಗುಲಿ ನೆಲಕ್ಕುರುಳಿದರು. ಗುಂಡಿನ ದಾಳಿ ಮುಂದುವರಿದಿದ್ದುದರಿಂದ ಅವ ರನ್ನು ರಕ್ಷಿಸಲಾಗಲಿಲ್ಲ. ದಾಳಿ ನಿಂತಾಗ ಕಮಾಂಡರ್‌ ಹುತಾತ್ಮರಾಗಿದ್ದರು- ಈಗಲೂ ವಸಂತ ಅಮೀನರಿಗೆ ನೋವಾಗಿ ಕಾಡುವ ಘಟನೆಯಿದು. 

ನನಗೂ ಸೈನ್ಯಕ್ಕೆ ಸೇರಬೇಕೆಂದು ಆಸೆಯಾಗುತ್ತದೆ
ಯೋಧನ ಪತ್ನಿ ಎನ್ನುವುದಕ್ಕೆ ಹೆಮ್ಮೆಯಾಗುತ್ತಿದೆ. ಜನರು ಗೌರವದಿಂದ ಕಾಣುತ್ತಾರೆ, ಮಾತನಾಡು ತ್ತಾರೆ. ಆಗ ನಾನೂ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕಿತ್ತು ಅನಿಸುತ್ತದೆ. ಮದುವೆಯಾಗಿ 10 ವರ್ಷ ಆಗುತ್ತಾ ಬಂತು. ಇದುವರೆಗೆ ಒಮ್ಮೆಯೂ ಪತಿಯ ಜತೆಯಲ್ಲಿ ಮಗಳು ತನ್ವಿಯ ಹುಟ್ಟುಹಬ್ಬ, ಮದುವೆ ವರ್ಷಾಚರಣೆ ಅಥವಾ ದೀಪಾವಳಿ ಆಚರಿಸಲಾಗಲಿಲ್ಲ. ಹುಟ್ಟುಹಬ್ಬ ಆಚರಿಸುವ ವೇಳೆ “ಡ್ಯಾಡಿ ಬರುವುದಿಲ್ಲವಾ’ ಎಂದು ಮಗಳು ಕೇಳುವಾಗ ಸ್ವಲ್ಪ ದುಃಖವಾಗುತ್ತದೆ.
– ರೋಶಿನಿ, ವಸಂತ ಅವರ ಪತ್ನಿ

ಜನ ಗೌರವವೇ ಹೆಮ್ಮೆ
ಶಾಲಾ ದಿನಗಳಿಂದಲೇ 
ಸೇನೆ ಸೇರುವ ಬಯಕೆ ಇತ್ತು. ಆದರೆ ದಾರಿ ತಿಳಿದಿರಲಿಲ್ಲ.ಬಡತನದಿಂದಾಗಿ ಶಿಕ್ಷಣ ವನ್ನು ಮೊಟುಕುಗೊಳಿಸಿ ಕುಲಕಸುಬು ಮಾಡುತ್ತಿದ್ದೆ. ಸೇನೆ ಸೇರುವ ಬಾಲ್ಯದ ಬಯಕೆ ನನ್ನ ಕೈ ಹಿಡಿಯಿತು. ಈಗ ನಾಲ್ಕು ಜನ ನನ್ನನ್ನು  ಗೌರವದಿಂದ ಕಾಣುತ್ತಾರೆ, ಅದೇ ನನಗೆ ಹೆಮ್ಮೆ.
-ವಸಂತ ಅಮೀನ್‌, ಭಾರತೀಯ ಯೋಧ

ಖುಷಿ ಮತ್ತು ಹೆದರಿಕೆ
ಮಗ ನಮ್ಮಿಂದ ದೂರ ಹೋಗಿ ಅಂತಹ ಕೆಲಸಕ್ಕೆ ಸೇರುವ ಬಗ್ಗೆ ಮೊದಲು ಅಸಮಾಧಾನವಿತ್ತು. ಈಗ ಸೈನಿಕನಾಗಿ ದೇಶ ಸೇವೆ ಮಾಡುತ್ತಿದ್ದಾನೆ ಎಂಬ ಬಗ್ಗೆ ಹೆಮ್ಮೆಯಿದೆ. ಜತೆಗೆ, ಕೆಲವು ಘಟನೆಗಳ ಬಗ್ಗೆ ಕೇಳುವಾಗ ಮಗ ಹೇಗಿದ್ದಾನೋ ಏನು ಮಾಡುತ್ತಿದ್ದಾನೋ ಎಂದು ಹೆದರಿಕೆಯೂ ಆಗುತ್ತದೆ.
– ಬೇಬಿ ಅಮೀನ್‌, ವಸಂತ ಅಮೀನರ ತಾಯಿ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.