ಎಲ್ಲೇ ಹೋದರೂ ಐಟಿಯವ್ರು ಬಿಡಲ್ಲ!


Team Udayavani, Dec 25, 2017, 6:00 AM IST

IT.jpg

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ನೋಟಿಸ್‌ ತಲುಪಬಾರದು ಎಂದು ವಿಳಾಸ ಮರೆ ಮಾಚಿದ್ದೀರಾ? ಇದುವರೆಗೆ ಹಾಗೆ 
ಮಾಡಿ ತಪ್ಪಿಸಿಕೊಂಡು ಬಚಾವಾದವರಿಗೆ ಇನ್ನು ಕಷ್ಟ ಖಚಿತ. ನಿಗದಿತ ತೆರಿಗೆದಾರ ನೀಡಿದ ವಿಳಾಸ ಸರಿಯೋ ತಪ್ಪೋ ಎನ್ನುವುದನ್ನು ಆದಾಯ ತೆರಿಗೆ ಇಲಾಖೆ ಇತರ ಮೂಲಗಳಿಂದಲೂ ಖಚಿತಪಡಿಸಿ ಕೊಳ್ಳಬಹುದು. ಅದಕ್ಕೆ ಸಂಬಂಧಿಸಿದ ನಿಯಮ ಗಳನ್ನು ಕೇಂದ್ರ ಸರಕಾರ ಮಾರ್ಪಾಡು ಮಾಡಿ ಆದೇಶ ಹೊರಡಿಸಿದೆ. ಬ್ಯಾಂಕ್‌, ವಿಮೆ, ಅಂಚೆ ಕಚೇರಿ, ಸಹಕಾರ ಸಂಘಗಳು, ನಗರ ಸಭೆ, ಪುರಸಭೆ, ಮಹಾನಗರ ಪಾಲಿಕೆ ಸಹಿತ ಸ್ಥಳೀಯ ಸಂಸ್ಥೆಗಳ ಮೂಲಕ ವಿಳಾಸ ಖಚಿತ ಪಡಿಸಿಕೊಂಡು ನೋಟಿಸ್‌ ನೀಡುವಂಥ ಅವಕಾಶವನ್ನು ಕೇಂದ್ರ ಕಲ್ಪಿಸಿಕೊಟ್ಟಿದೆ.

ಸದ್ಯ ಇರುವ ನಿಯಮ ಪ್ರಕಾರ, ಪಾನ್‌ ಕಾರ್ಡ್‌ ನಲ್ಲಿರುವ ವಿಳಾಸಕ್ಕೆ ಮಾತ್ರ ತೆರಿಗೆ ತಪ್ಪಿಸಿದ ಬಗ್ಗೆ ಪ್ರಶ್ನೆ ಮಾಡಿ ನೋಟಿಸ್‌ ನೀಡಲಾಗುತ್ತಿತ್ತು. ಹೆಚ್ಚಿನ ಸಂದರ್ಭಗಳಲ್ಲಿ ಪಾನ್‌ನಲ್ಲಿರುವ ವಿಳಾಸಕ್ಕೂ ತೆರಿಗೆದಾರ ವಾಸವಾಗಿರುವ ವಿಳಾಸಕ್ಕೂ ವ್ಯತ್ಯಾಸ ಇರುತ್ತಿತ್ತು. ಹೀಗಾಗಿ ನೋಟಿಸ್‌ ನೀಡಿದರೂ ಅದು ತಪ್ಪಿತಸ್ಥರಿಗೆ ತಲುಪುತ್ತಿರಲಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತೆರಿಗೆ ಇಲಾಖೆ ಹಿರಿಯ ಅಧಿಕಾರಿ, “ಕೆಲವು ಬಾರಿ ತೆರಿಗೆದಾರ ನಿಜವಾದ ಕಾರಣದಿಂದ ವಿಳಾಸ ಬದಲಿಸಿರುವ ಸಾಧ್ಯತೆ ಇರುತ್ತದೆ ಅಥವಾ ನೋಟಿಸ್‌ನಿಂದ ತಪ್ಪಿಸಿಕೊಳ್ಳಲು ಸುಳ್ಳು ವಿಳಾಸ ನೀಡಿರಬಹುದು. ಹೀಗಾಗಿ ಅಂಥವರ ಪತ್ತೆ ನಿಯಮ ಗಳಲ್ಲಿ ಬದಲು ಮಾಡಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.

ಡಿ.20ರಂದು ಈ ಬಗ್ಗೆ ನಿರ್ಧಾರ ಕೈಗೊಂಡು ಪ್ರಕಟನೆ ಹೊರಡಿಸಲಾಗಿದೆ ಎಂದಿದ್ದಾರೆ ಅವರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡ್ರೈವಿಂಗ್‌ ಲೈಸನ್ಸ್‌, ಮತದಾರರ ಗುರುತಿನ ಚೀಟಿಯಲ್ಲಿನ ವಿಳಾಸಗಳ ಮೂಲಕವೂ ನೋಟಿಸ್‌ ನೀಡಲು ವಿಳಾಸ ಪತ್ತೆಹಚ್ಚುವಂಥ ನಿಯಮ ಇದಾಗಿದೆ.

ಏಕೆ ಇಂಥ ನಿಯಮ?
ತೆರಿಗೆ ವಂಚನೆ ಮಾಡುವವರ ಕೈಯಿಂದ ಕೋಟ್ಯಂತರ ರೂ. ಮೌಲ್ಯದ ಮೊತ್ತ ಬಾಕಿ ಇರುತ್ತದೆ. ಅಂಥವರ ವಿರುದ್ಧ  ಕ್ರಮ ಕೈಗೊಳ್ಳಲು ನಿಜವಾದ ವಿಳಾಸ ಪತ್ತೆ ಹಚ್ಚುವ ಅಗತ್ಯವಿರುತ್ತದೆ. ಹೀಗಾಗಿ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಕ್ರಮದಿಂದ ಇಲಾಖೆಗೆ ನಿಜವಾಗಿಯೂ ತೆರಿಗೆದಾರ ತಪ್ಪಿಸಿ ಕೊಳ್ಳಲು ಮುಂದಾಗಿದ್ದರೆ ಆತನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಹೆಚ್ಚಿನ ಅಧಿಕಾರ ಇರುತ್ತದೆ. ಈ ಮೂಲಕ ಕೇಂದ್ರದ ಬೊಕ್ಕಸಕ್ಕೆ ನಷ್ಟವಾಗುವುದನ್ನೂ ತಪ್ಪಿಸಬಹುದಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.