ನಿರಂತರ 4ನೇ ಬಾರಿಗೆ ಆರ್‌ಬಿಐ ಬಡ್ಡಿದರ ಬದಲಾವಣೆ ಇಲ್ಲ


Team Udayavani, Apr 5, 2018, 3:26 PM IST

RBI-700.jpg

ಹೊಸದಿಲ್ಲಿ : 2019ರ ಹಣಕಾಸು ವರ್ಷದ ಮೊದಲ ದ್ವೆ„ಮಾಸಿಕ ಹಣಕಾಸು ನೀತಿಯನ್ನು ಇಂದು ಪ್ರಕಟಿಸಿರುವ ಆರ್‌ಬಿಐ ನಿರಂತರ ನಾಲ್ಕನೇ ಬಾರಿಗೆ ತನ್ನ ಬಡ್ಡಿದರಗಳನ್ನು ಯಥಾವತ್ತಾಗಿ ಉಳಿಸಿಕೊಂಡಿದೆ. ಹಾಗಾಗಿ ಬ್ಯಾಂಕ್‌ ಸಾಲಗಾರರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ.

ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ರಿಪೋ ದರವನ್ನು ಈಗಿನ ಶೇ.6ರಲ್ಲೂ, ರಿವರ್ಸ್‌ ರಿಪೋ ದರವನ್ನು  ಈಗಿನ ಶೇ.5.75ರಲ್ಲೂ  ಯಥಾವತ್‌ ಉಳಿಸಿಕೊಳ್ಳಲು ನಿರ್ಧರಿಸಿತು. 

ಈ ಬಡ್ಡಿ ದರಗಳನ್ನು ಯಥಾವತ್‌ ಉಳಿಸಿಕೊಳ್ಳಲು 5-1 ಮತಗಳಲ್ಲಿ ತೀರ್ಮಾನಿಸಲಾಯಿತು. ದೇಶದ ಆರ್ಥಿಕತೆಯು ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಪರಿಗಣಿಸಿ ಅಗತ್ಯ ಬೆಂಬಲ ನೀಡುವ ನಿಟ್ಟಿನಲ್ಲಿ ಬಡ್ಡಿ ದರಗಳನ್ನು ಯಥಾವತ್‌ ಉಳಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ಸಮಿತಿ ಹೇಳಿದೆ. 

ಆರ್‌ಬಿಐ ಕಳೆದ ವರ್ಷ ಆಗಸ್ಟ್‌ನಲ್ಲಿ ಶೇ.0.25ರಷ್ಟು ಕಡಿತ ಮಾಡುವ ಮೂಲಕ ರಿಪೋ ದರವನ್ನು ಶೇ.6ಕ್ಕೆ ಇಳಿಸಿತ್ತು. 2015ರಲ್ಲಿ ಅಸಾಮಾನ್ಯ ಕಡಿಮೆ ಹಣದುಬ್ಬರದ ಲಾಭವನ್ನು ಎತ್ತಿಕೊಂಡು ಆರ್‌ಬಿಐ ಒಟ್ಟಾರೆಯಾಗಿ 200 ಮೂಲಾಂಕದಷ್ಟು ಬಡ್ಡಿ ದರ ಕಡಿತ ಮಾಡಿತ್ತು. 

2018-19ರ ಸಾಲಿನ ಮೊದಲ ಅರೆ ವರ್ಷದಲ್ಲಿ ಹಣದುಬ್ಬರವು ಶೇ.4.7 – ಶೇ.5.1ರ ಒಳಗೆ ಮತ್ತು ಎರಡನೇ ಅರೆ ವರ್ಷದಲ್ಲಿ ಶೇ.4.4ರ ಹಣದುಬ್ಬರ ಇರುವುದೆಂದು ಆರ್‌ಬಿಐ ತನ್ನ ತಾಜಾ ಹಣಕಾಸು ನೀತಿಯಲ್ಲಿ ಅಂದಾಜಿಸಿದೆ. 

ಅಂತೆಯೇ ಜಿಡಿಪಿ 2019ರ ಹಣಕಾಸು ವರ್ಷದಲ್ಲಿ ಶೇ.7.4ಕ್ಕೆ ಹಿಗ್ಗುವುದೆಂದು ಅಂದಾಜಿಸಿದೆ. 2017-18ರಲ್ಲಿ ಜಿಡಿಪಿ ಶೇ.6.6 ರಲ್ಲಿ ದಾಖಲಾಗಿದೆ. ಹಾಲಿ ಹಣಕಾಸು ಸಾಲಿನ ಮೊದಲ ಅರೆ ವರ್ಷದಲ್ಲಿ ಜಿಡಿಪಿ ಶೇ.7.3 -ಶೇ. 7.4ರಲ್ಲೂ ಎರಡನೇ ಅರೆ ವರ್ಷದಲ್ಲಿ ಶೇ.7.3 – ಶೇ.7.6ರಲ್ಲೂ ದಾಖಲಾಗುವ ನಿರೀಕ್ಷೆಯನ್ನು ಆರ್‌ಬಿಐ ಹೊಂದಿರುವುದಾಗಿ ಹಣಕಾಸು ನೀತಿ ಹೇಳಿದೆ.  

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.