ಮುಂಬಯಿ ಶೇರು ಪೇಟೆಯಲ್ಲಿ ಎಚ್ಚರಿಕೆಯ ನಡೆ; ಟಿಸಿಎಸ್ ವಿಕ್ರಮ
Team Udayavani, Apr 20, 2018, 5:25 PM IST
ಮುಂಬಯಿ : ಮುಂಬಯಿ ಶೇರು ಪೇಟೆಯಲ್ಲಿ ಇಂದು ಶುಕ್ರವಾರ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಕಾರಣ ಸೆನೆಕ್ಸ್11.71 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 34,415.58 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 1.25 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು10,564.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಹಾಗಿದ್ದರೂ ಸೆನ್ಸೆಕ್ಸ್ ಮತ್ತು ನಿಫ್ಟಿ ಸಾಪ್ತಾಹಿಕ ನೆಲೆಯಲ್ಲಿ ನಿರಂತರ ನಾಲ್ಕನೇ ವಾರ ತಮ್ಮ ಮುನ್ನಡೆಯನ್ನು ಕಾಯ್ದುಕೊಂಡವು. ವಾರದ ನೆಲೆಯಲ್ಲಿ ಸೆನ್ಸೆಕ್ಸ್ 222.93 ಅಂಕ ಸಂಪಾದಿಸಿದೆಯಾದರೆ ನಿಫ್ಟಿ 83.45 ಅಂಕಗಳನ್ನು ಸಂಪಾದಿಸಿತು.
ಭಾರತದ ಅಗ್ರ ಸಾಫ್ಟ್ ವೇರ್ ಕಂಪೆನಿ ಟಿಸಿಎಸ್ನ ಮಾರುಕಟ್ಟೆ ಬಂಡವಳೀಕರ್ ಶತಕೋಟಿ ಡಾಲರ್ ಆಗಿದ್ದು ಈ ಸಾಧನೆಯನ್ನು ಮಾಡಿರುವ ಭಾರತದ ಮೊದಲ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾದುದು ಇಂದು ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಸಂಚಲನ ಉಂಟು ಮಾಡಿತು.
ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಇಂದು ಶುಕ್ರವಾರದ ವಹಿವಾಟು ಕೊನೆಗೊಂಡಾಗ ಟಿಸಿಎಸ್ ಶೇರು ಧಾರಣೆ ಶೇ.6.43ರಷ್ಟು ಏರಿ 3,395.90 ರೂ. ಮಟ್ಟಕ್ಕೆ ತಲುಪಿತು.
ಮಾರ್ಚ್ 2018ಕ್ಕೆ ಕೊನೆಗೊಂಡ ತ್ತೈಮಾಸಿಕದಲ್ಲಿ ಟಿಸಿಎಸ್ ಕಂಪೆನಿಯ ಕನ್ಸಾಲಿಡೇಟೆಡ್ ನಿವ್ವಳ ಲಾಭ 6,904 ಕೋಟಿ ರೂ. (ಶೇ.4.4ರ ಏರಿಕೆ) ಏರಿದ್ದು ಕಂಪೆನಿಯ 1 : 1 ರ ಪ್ರಮಾಣದಲ್ಲಿ ಬೋನಸ್ ಶೇರು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ