ಜಿಯೋ ಇಂಟರಾಕ್ಟ್; ಲೈವ್ ವಿಡಿಯೋ ಕಾಲ್ ಮಾಡಿ ಬಚ್ಚನ್ ಜತೆ ಮಾತಾಡಿ!


Team Udayavani, May 7, 2018, 1:01 PM IST

Call-Now-New.jpg

ಮುಂಬಯಿ: ಕೃತಕ ಬುದ್ಧಿಮತ್ತೆ (ಎಐ) ಆಧರಿತ ಪ್ರಪಂಚದ ಪ್ರಥಮ ಬ್ರಾಂಡ್ ಎಂಗೇಜ್‌ಮೆಂಟ್ ವೀಡಿಯೋ ವೇದಿಕೆಯಾದ ‘ಜಿಯೋ ಇಂಟರಾಕ್ಟ್’ ಪ್ರಾರಂಭವನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (‘ಜಿಯೋ’) ಘೋಷಿಸಿದೆ.

ಭಾರತದ ನೆಚ್ಚಿನ ಸೆಲೆಬ್ರಿಟಿಗಳೊಡನೆ ನೇರ ವೀಡಿಯೋ ಕಾಲ್ ಸೇರಿದಂತೆ ಹಲವು ವಿಶಿಷ್ಟ ಸೇವೆಗಳನ್ನು ಈ ವೇದಿಕೆಯ ಮೂಲಕ ಒದಗಿಸಲಾಗುವುದು. ಈ ವೇದಿಕೆಯೊಡನೆ ಕೈಜೋಡಿಸಿರುವವರ ಪೈಕಿ ಮೊದಲಿಗರಾದ ಬಾಲಿವುಡ್‌ನ ಹೆಸರಾಂತ ನಟ ಅಮಿತಾಭ್ ಬಚ್ಚನ್ ಈ ಮೂಲಕ ತಮ್ಮ ಮುಂಬರುವ ಚಿತ್ರ ‘102 ನಾಟ್‌ ಔಟ್’ದ ಪ್ರಚಾರವನ್ನು ಅತ್ಯಂತ ವಿನೂತನ ರೀತಿಯಲ್ಲಿ ಕೈಗೊಳ್ಳಲಿದ್ದಾರೆ.    

 186 ಮಿಲಿಯನ್ ಜಿಯೋ ಗ್ರಾಹಕರು ಹಾಗೂ ಇತರ 150 ಮಿಲಿಯನ್ ಸ್ಮಾರ್ಟ್‌ಫೋನ್ ಬಳಕೆದಾರರನ್ನು ತಲುಪಬಲ್ಲ ಜಿಯೋ ಇಂಟರಾಕ್ಟ್, ಚಲನಚಿತ್ರ ಪ್ರಚಾರ ಹಾಗೂ ಬ್ರಾಂಡ್ ಎಂಗೇಜ್‌ಮೆಂಟ್‌ ಚಟುವಟಿಕೆಗಳ ಅತಿದೊಡ್ಡ ವೇದಿಕೆಯಾಗಿ ಬೆಳೆಯುವ ಗುರಿ ಹೊಂದಿದೆ. ಮುಂದಿನ ಕೆಲ ವಾರಗಳಲ್ಲಿ ವೀಡಿಯೋ ಕಾಲ್ ಸೆಂಟರ್, ವೀಡಿಯೋ ಕೆಟಲಾಗ್ ಹಾಗೂ ವರ್ಚುಯಲ್ ಶೋರೂಮ್‌ನಂತಹ ಸೇವೆಗಳನ್ನು ಈ ವೇದಿಕೆಯಲ್ಲಿ ಪರಿಚಯಿಸಲಿರುವ ಜಿಯೋ, ಗ್ರಾಹಕರಿಗೆ ವಿನೂತನ ಅನುಭವ ಕಟ್ಟಿಕೊಡಲಿದೆ.

 ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಎಐ) ಈ ಬಗೆಯಲ್ಲಿ ಬಳಸುತ್ತಿರುವುದು ಪ್ರಪಂಚದಲ್ಲೇ ಇದು ಮೊದಲ ಸಲವಾಗಿದ್ದು ಈ ಪ್ರಯತ್ನ ಬ್ರಾಂಡ್‌ಗಳು ಹಾಗೂ ಗ್ರಾಹಕರ ನಡುವಿನ ಒಡನಾಟಕ್ಕೆ ಹೊಸ ಆಯಾಮ ನೀಡಲಿದೆ.

ಜಿಯೋ ಇಂಟರಾಕ್ಟ್‌ನ ಪ್ರಥಮ ಸೇವೆ  ಲೈವ್ ವೀಡಿಯೋ ಕಾಲ್ ಕುರಿತು:

ಜಿಯೋಇಂಟರಾಕ್ಟ್‌ನ ಪ್ರಥಮ ಕೊಡುಗೆಯಾದ ‘ಲೈವ್ ವೀಡಿಯೋ ಕಾಲ್’ ಸೇವೆ ಬಳಸಿ ಜಿಯೋ ಗ್ರಾಹಕರು ಹಾಗೂ ಇತರ ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ಮೆಚ್ಚಿನ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್‌ರಿಗೆ ನೇರ ವೀಡಿಯೋ ಕಾಲ್ ಮಾಡಬಹುದು. ಈ ಸೌಲಭ್ಯ ಮೇ 4ರಿಂದ ಆರಂಭವಾಗಿದೆ.

ಈ ಮೂಲಕ ಅಮಿತಾಭ್ ಹೊಸ ಚಿತ್ರ ‘102 ನಾಟ್ ಔಟ್’ ಬಗ್ಗೆ ಪ್ರಶ್ನೆಗಳನ್ನು ಕೇಳುವುದಷ್ಟೇ ಅಲ್ಲದೆ ಬುಕ್‌ ಮೈ ಶೋ ಸಹಯೋಗದಲ್ಲಿ ಸಿನಿಮಾ ಟಿಕೇಟುಗಳನ್ನೂ ಕಾಯ್ದಿರಿಸಬಹುದಾಗಿದೆ.

 ಬಳಸುವುದು ಹೇಗೆ:

ಜಿಯೋ‌ ಇಂಟರಾಕ್ಟ್ ಅನುಭವ ಪಡೆದುಕೊಳ್ಳಲು,

1. ಮೈಜಿಯೋ ಆಪ್ ಡೌನ್‌ಲೋಡ್ ಮಾಡಿ ಇನ್‌ಸ್ಟಾಲ್ ಮಾಡಿಕೊಳ್ಳಿ

2. ಆಪ್ ತೆರೆದು ಜಿಯೋಇಂಟರಾಕ್ಟ್ ಐಕನ್ ಮೇಲೆ ಕ್ಲಿಕ್ ಮಾಡಿ

3. ವೀಡಿಯೋ ಕಾಲ್ ಪ್ರಾರಂಭಿಸಿ ಅಮಿತಾಭ್ ಬಚ್ಚನ್‌ರೊಡನೆ ಮಾತನಾಡಿ

4. ‘ಶೇರ್’ ಆಯ್ಕೆ ಬಳಸಿ ವೀಡಿಯೋ ಕಾಲ್ ಅನುಭವವನ್ನು ಮನೆಯವರು ಹಾಗೂ ಮಿತ್ರರೊಡನೆ ಹಂಚಿಕೊಳ್ಳುವುದೂ ಸಾಧ್ಯವಿದೆ.

ವಿಶಿಷ್ಟ ಹಾಗೂ ವಿನೂತನವಾದ ಈ ಸೇವೆ ಶಕ್ತಿಶಾಲಿಯಾದ ಕೃತಕ ಬುದ್ಧಿಮತ್ತೆ (ಎಐ) ವೇದಿಕೆಯ ಮೂಲಕ ಬಳಕೆದಾರರ ಪ್ರಶ್ನೆಗಳನ್ನು ಕೇಳಿಸಿಕೊಂಡು ಅವರಿಗೆ ಸಮರ್ಪಕ ಉತ್ತರಗಳನ್ನು ನೀಡುತ್ತದೆ.

ಅಷ್ಟೇ ಅಲ್ಲದೆ, ಇದರಲ್ಲಿರುವ ಸ್ವಯಂ ಕಲಿಕೆಯ (ಆಟೋ ಲರ್ನಿಂಗ್) ವ್ಯವಸ್ಥೆ ತಾನು ನೀಡುವ ಉತ್ತರಗಳ ನಿಖರತೆಯನ್ನು ಉತ್ತಮಪಡಿಸಿಕೊಳ್ಳಲು ನೆರವಾಗಲಿದೆ. ಜಿಯೋನ ಸದೃಢ ಮೊಬೈಲ್ ವೀಡಿಯೋ ಜಾಲ ಹಾಗೂ 186 ಮಿಲಿಯನ್‌ಗೂ ಹೆಚ್ಚಿನ ಗ್ರಾಹಕ ಬಳಗವನ್ನು ಕೃತಕ ಬುದ್ಧಿಮತ್ತೆ (ಎಐ) ಹಾಗೂ ಸ್ವಯಂಕಲಿಕೆಯಂತಹ (ಮಶೀನ್ ಲರ್ನಿಂಗ್) ಹೊಸ ತಂತ್ರಜ್ಞಾನಗಳೊಡನೆ ಪರಿಣಾಮಕಾರಿಯಾಗಿ ಬಳಸುವ ಮೂಲಕ ಜಿಯೋ ಇಂಟರಾಕ್ಟ್ ಉದ್ದಿಮೆಗಳಿಗಾಗಿ ಬ್ರಾಂಡ್ ಎಂಗೇಜ್‌ಮೆಂಟ್‌ನ ವಿಶಿಷ್ಟ ಮಾರ್ಗವೊಂದನ್ನು ಒದಗಿಸಿದೆ.

VCBaaS (ವೀಡಿಯೋ ಕಾಲ್ ಬಾಟ್ ಆಸ್ ಅ ಸರ್ವಿಸ್) ಎಂದು ಗುರುತಿಸಲಾಗಿರುವ ಜಿಯೋಇಂಟರಾಕ್ಟ್ ವೇದಿಕೆಯು ಕೃತಕ ಬುದ್ಧಿಮತ್ತೆ ಹಾಗೂ ವೀಡಿಯೋ ಕಾಲ್ ತಂತ್ರಜ್ಞಾನಗಳನ್ನು ಎಲ್ಲರಿಗೂ ಸರಳವಾಗಿ ತಲುಪಿಸುವ ಮೂಲಕ ಪರಿಣಾಮಕಾರಿ ಬ್ರಾಂಡ್ ಎಂಗೇಜ್‌ಮೆಂಟ್‌‌ ಚಟುವಟಿಕೆಗಳನ್ನು ಸಾಧ್ಯವಾಗಿಸಲಿದೆ. ಉದ್ದಿಮೆಗಳು ಹಾಗೂ ಗ್ರಾಹಕರ ನಡುವಿನ ಸಂವಹನದಲ್ಲಿ (B2C) ಈ ತಂತ್ರಜ್ಞಾನ ದೊಡ್ಡಪ್ರಮಾಣದಲ್ಲಿ ಪ್ರಯೋಜನಕ್ಕೆ ಬರುವ ನಿರೀಕ್ಷೆಯಿದೆ. ಈ ವೇದಿಕೆಯನ್ನು ಬಳಸಿ ವರ್ಚುಯಲ್ ಶೋರೂಮ್, ಉತ್ಪನ್ನಗಳ ಪ್ರಾತ್ಯಕ್ಷಿಕೆ, ಇ ಕಾಮರ್ಸ್ ಆರ್ಡರಿಂಗ್ ಕಾರ್ಟ್‌ನಂತಹ ಅನ್ವಯಗಳನ್ನು ರೂಪಿಸುವ ಹೊಸ ಅವಕಾಶವೂ ತಂತ್ರಜ್ಞರಿಗೆ ದೊರಕಲಿದೆ.

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.