ಜಿಯೋ ಇಂಟರಾಕ್ಟ್; ಲೈವ್ ವಿಡಿಯೋ ಕಾಲ್ ಮಾಡಿ ಬಚ್ಚನ್ ಜತೆ ಮಾತಾಡಿ!


Team Udayavani, May 7, 2018, 1:01 PM IST

Call-Now-New.jpg

ಮುಂಬಯಿ: ಕೃತಕ ಬುದ್ಧಿಮತ್ತೆ (ಎಐ) ಆಧರಿತ ಪ್ರಪಂಚದ ಪ್ರಥಮ ಬ್ರಾಂಡ್ ಎಂಗೇಜ್‌ಮೆಂಟ್ ವೀಡಿಯೋ ವೇದಿಕೆಯಾದ ‘ಜಿಯೋ ಇಂಟರಾಕ್ಟ್’ ಪ್ರಾರಂಭವನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (‘ಜಿಯೋ’) ಘೋಷಿಸಿದೆ.

ಭಾರತದ ನೆಚ್ಚಿನ ಸೆಲೆಬ್ರಿಟಿಗಳೊಡನೆ ನೇರ ವೀಡಿಯೋ ಕಾಲ್ ಸೇರಿದಂತೆ ಹಲವು ವಿಶಿಷ್ಟ ಸೇವೆಗಳನ್ನು ಈ ವೇದಿಕೆಯ ಮೂಲಕ ಒದಗಿಸಲಾಗುವುದು. ಈ ವೇದಿಕೆಯೊಡನೆ ಕೈಜೋಡಿಸಿರುವವರ ಪೈಕಿ ಮೊದಲಿಗರಾದ ಬಾಲಿವುಡ್‌ನ ಹೆಸರಾಂತ ನಟ ಅಮಿತಾಭ್ ಬಚ್ಚನ್ ಈ ಮೂಲಕ ತಮ್ಮ ಮುಂಬರುವ ಚಿತ್ರ ‘102 ನಾಟ್‌ ಔಟ್’ದ ಪ್ರಚಾರವನ್ನು ಅತ್ಯಂತ ವಿನೂತನ ರೀತಿಯಲ್ಲಿ ಕೈಗೊಳ್ಳಲಿದ್ದಾರೆ.    

 186 ಮಿಲಿಯನ್ ಜಿಯೋ ಗ್ರಾಹಕರು ಹಾಗೂ ಇತರ 150 ಮಿಲಿಯನ್ ಸ್ಮಾರ್ಟ್‌ಫೋನ್ ಬಳಕೆದಾರರನ್ನು ತಲುಪಬಲ್ಲ ಜಿಯೋ ಇಂಟರಾಕ್ಟ್, ಚಲನಚಿತ್ರ ಪ್ರಚಾರ ಹಾಗೂ ಬ್ರಾಂಡ್ ಎಂಗೇಜ್‌ಮೆಂಟ್‌ ಚಟುವಟಿಕೆಗಳ ಅತಿದೊಡ್ಡ ವೇದಿಕೆಯಾಗಿ ಬೆಳೆಯುವ ಗುರಿ ಹೊಂದಿದೆ. ಮುಂದಿನ ಕೆಲ ವಾರಗಳಲ್ಲಿ ವೀಡಿಯೋ ಕಾಲ್ ಸೆಂಟರ್, ವೀಡಿಯೋ ಕೆಟಲಾಗ್ ಹಾಗೂ ವರ್ಚುಯಲ್ ಶೋರೂಮ್‌ನಂತಹ ಸೇವೆಗಳನ್ನು ಈ ವೇದಿಕೆಯಲ್ಲಿ ಪರಿಚಯಿಸಲಿರುವ ಜಿಯೋ, ಗ್ರಾಹಕರಿಗೆ ವಿನೂತನ ಅನುಭವ ಕಟ್ಟಿಕೊಡಲಿದೆ.

 ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಎಐ) ಈ ಬಗೆಯಲ್ಲಿ ಬಳಸುತ್ತಿರುವುದು ಪ್ರಪಂಚದಲ್ಲೇ ಇದು ಮೊದಲ ಸಲವಾಗಿದ್ದು ಈ ಪ್ರಯತ್ನ ಬ್ರಾಂಡ್‌ಗಳು ಹಾಗೂ ಗ್ರಾಹಕರ ನಡುವಿನ ಒಡನಾಟಕ್ಕೆ ಹೊಸ ಆಯಾಮ ನೀಡಲಿದೆ.

ಜಿಯೋ ಇಂಟರಾಕ್ಟ್‌ನ ಪ್ರಥಮ ಸೇವೆ  ಲೈವ್ ವೀಡಿಯೋ ಕಾಲ್ ಕುರಿತು:

ಜಿಯೋಇಂಟರಾಕ್ಟ್‌ನ ಪ್ರಥಮ ಕೊಡುಗೆಯಾದ ‘ಲೈವ್ ವೀಡಿಯೋ ಕಾಲ್’ ಸೇವೆ ಬಳಸಿ ಜಿಯೋ ಗ್ರಾಹಕರು ಹಾಗೂ ಇತರ ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ಮೆಚ್ಚಿನ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್‌ರಿಗೆ ನೇರ ವೀಡಿಯೋ ಕಾಲ್ ಮಾಡಬಹುದು. ಈ ಸೌಲಭ್ಯ ಮೇ 4ರಿಂದ ಆರಂಭವಾಗಿದೆ.

ಈ ಮೂಲಕ ಅಮಿತಾಭ್ ಹೊಸ ಚಿತ್ರ ‘102 ನಾಟ್ ಔಟ್’ ಬಗ್ಗೆ ಪ್ರಶ್ನೆಗಳನ್ನು ಕೇಳುವುದಷ್ಟೇ ಅಲ್ಲದೆ ಬುಕ್‌ ಮೈ ಶೋ ಸಹಯೋಗದಲ್ಲಿ ಸಿನಿಮಾ ಟಿಕೇಟುಗಳನ್ನೂ ಕಾಯ್ದಿರಿಸಬಹುದಾಗಿದೆ.

 ಬಳಸುವುದು ಹೇಗೆ:

ಜಿಯೋ‌ ಇಂಟರಾಕ್ಟ್ ಅನುಭವ ಪಡೆದುಕೊಳ್ಳಲು,

1. ಮೈಜಿಯೋ ಆಪ್ ಡೌನ್‌ಲೋಡ್ ಮಾಡಿ ಇನ್‌ಸ್ಟಾಲ್ ಮಾಡಿಕೊಳ್ಳಿ

2. ಆಪ್ ತೆರೆದು ಜಿಯೋಇಂಟರಾಕ್ಟ್ ಐಕನ್ ಮೇಲೆ ಕ್ಲಿಕ್ ಮಾಡಿ

3. ವೀಡಿಯೋ ಕಾಲ್ ಪ್ರಾರಂಭಿಸಿ ಅಮಿತಾಭ್ ಬಚ್ಚನ್‌ರೊಡನೆ ಮಾತನಾಡಿ

4. ‘ಶೇರ್’ ಆಯ್ಕೆ ಬಳಸಿ ವೀಡಿಯೋ ಕಾಲ್ ಅನುಭವವನ್ನು ಮನೆಯವರು ಹಾಗೂ ಮಿತ್ರರೊಡನೆ ಹಂಚಿಕೊಳ್ಳುವುದೂ ಸಾಧ್ಯವಿದೆ.

ವಿಶಿಷ್ಟ ಹಾಗೂ ವಿನೂತನವಾದ ಈ ಸೇವೆ ಶಕ್ತಿಶಾಲಿಯಾದ ಕೃತಕ ಬುದ್ಧಿಮತ್ತೆ (ಎಐ) ವೇದಿಕೆಯ ಮೂಲಕ ಬಳಕೆದಾರರ ಪ್ರಶ್ನೆಗಳನ್ನು ಕೇಳಿಸಿಕೊಂಡು ಅವರಿಗೆ ಸಮರ್ಪಕ ಉತ್ತರಗಳನ್ನು ನೀಡುತ್ತದೆ.

ಅಷ್ಟೇ ಅಲ್ಲದೆ, ಇದರಲ್ಲಿರುವ ಸ್ವಯಂ ಕಲಿಕೆಯ (ಆಟೋ ಲರ್ನಿಂಗ್) ವ್ಯವಸ್ಥೆ ತಾನು ನೀಡುವ ಉತ್ತರಗಳ ನಿಖರತೆಯನ್ನು ಉತ್ತಮಪಡಿಸಿಕೊಳ್ಳಲು ನೆರವಾಗಲಿದೆ. ಜಿಯೋನ ಸದೃಢ ಮೊಬೈಲ್ ವೀಡಿಯೋ ಜಾಲ ಹಾಗೂ 186 ಮಿಲಿಯನ್‌ಗೂ ಹೆಚ್ಚಿನ ಗ್ರಾಹಕ ಬಳಗವನ್ನು ಕೃತಕ ಬುದ್ಧಿಮತ್ತೆ (ಎಐ) ಹಾಗೂ ಸ್ವಯಂಕಲಿಕೆಯಂತಹ (ಮಶೀನ್ ಲರ್ನಿಂಗ್) ಹೊಸ ತಂತ್ರಜ್ಞಾನಗಳೊಡನೆ ಪರಿಣಾಮಕಾರಿಯಾಗಿ ಬಳಸುವ ಮೂಲಕ ಜಿಯೋ ಇಂಟರಾಕ್ಟ್ ಉದ್ದಿಮೆಗಳಿಗಾಗಿ ಬ್ರಾಂಡ್ ಎಂಗೇಜ್‌ಮೆಂಟ್‌ನ ವಿಶಿಷ್ಟ ಮಾರ್ಗವೊಂದನ್ನು ಒದಗಿಸಿದೆ.

VCBaaS (ವೀಡಿಯೋ ಕಾಲ್ ಬಾಟ್ ಆಸ್ ಅ ಸರ್ವಿಸ್) ಎಂದು ಗುರುತಿಸಲಾಗಿರುವ ಜಿಯೋಇಂಟರಾಕ್ಟ್ ವೇದಿಕೆಯು ಕೃತಕ ಬುದ್ಧಿಮತ್ತೆ ಹಾಗೂ ವೀಡಿಯೋ ಕಾಲ್ ತಂತ್ರಜ್ಞಾನಗಳನ್ನು ಎಲ್ಲರಿಗೂ ಸರಳವಾಗಿ ತಲುಪಿಸುವ ಮೂಲಕ ಪರಿಣಾಮಕಾರಿ ಬ್ರಾಂಡ್ ಎಂಗೇಜ್‌ಮೆಂಟ್‌‌ ಚಟುವಟಿಕೆಗಳನ್ನು ಸಾಧ್ಯವಾಗಿಸಲಿದೆ. ಉದ್ದಿಮೆಗಳು ಹಾಗೂ ಗ್ರಾಹಕರ ನಡುವಿನ ಸಂವಹನದಲ್ಲಿ (B2C) ಈ ತಂತ್ರಜ್ಞಾನ ದೊಡ್ಡಪ್ರಮಾಣದಲ್ಲಿ ಪ್ರಯೋಜನಕ್ಕೆ ಬರುವ ನಿರೀಕ್ಷೆಯಿದೆ. ಈ ವೇದಿಕೆಯನ್ನು ಬಳಸಿ ವರ್ಚುಯಲ್ ಶೋರೂಮ್, ಉತ್ಪನ್ನಗಳ ಪ್ರಾತ್ಯಕ್ಷಿಕೆ, ಇ ಕಾಮರ್ಸ್ ಆರ್ಡರಿಂಗ್ ಕಾರ್ಟ್‌ನಂತಹ ಅನ್ವಯಗಳನ್ನು ರೂಪಿಸುವ ಹೊಸ ಅವಕಾಶವೂ ತಂತ್ರಜ್ಞರಿಗೆ ದೊರಕಲಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.