ಸೆನ್ಸೆಕ್ಸ್‌ 500 ಅಂಕಗಳ ಭಾರೀ ಕುಸಿತ,ನಿಫ್ಟಿ 11,300ರ ಕೆಳಮಟ್ಟಕ್ಕೆ


Team Udayavani, Sep 11, 2018, 4:23 PM IST

sensex-headache-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ ಎರಡನೇ ದಿನವೂ ಇಂದು ಮಂಗಳವಾರ ಕುಸಿದಿದೆ. ನಿನ್ನೆ ಸೋಮವಾರ 468 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದ ಸೆನ್ಸೆಕ್ಸ್‌ ಇಂದು 509.04 ಅಂಕಗಳ ನಷ್ಟವನ್ನು ಅನುಭವಿಸಿ ದಿನದ ವಹಿವಾಟನ್ನು 37,413.13 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 150.60 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,287.50 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಸಮರ ತಾರಕಕ್ಕೆ ಏರುವುದೆಂಬ ಭೀತಿ ಜಾಗತಿಕ ಶೇರು ಮಾರುಕಟ್ಟೆಗಳನ್ನು ಆವರಿಸಿಕೊಂಡಿರುವಂತೆಯೇ ಮುಂಬಯಿ ಶೇರು ಪೇಟೆ ಕೂಡ ಅದೇ ಆತಂಕಕ್ಕೆ ಗುರಿಯಾಯಿತು. 

ಇಂದಿನ ವಹಿವಾಟಿನ ಪ್ರಮುಖ ಲೂಸರ್‌ಗಳು : ಟಿಸಿಎಸ್‌, ಕೋಟಕ್‌ ಬ್ಯಾಂಕ್‌, ಅದಾನಿ ಪೋರ್ಟ್‌, ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಸ್‌ ಬ್ಯಾಂಕ್‌, ಭಾರ್ತಿ ಏರ್‌ ಟೆಲ್‌, ಐಟಿಸಿ, ಟಾಟಾ ಮೋಟರ್‌, ಹೀರೋ ಮೋಟೋ ಕಾರ್ಪ್‌, ಪವರ್‌ ಗ್ರಿಡ್‌, ಟಾಟಾ ಸ್ಟೀಲ್‌ ಶೇ.3.46ರಷ್ಟು ಕುಸಿದವು.  

ಡಾಲರ್‌ ಎದುರು ರೂಪಾಯಿ ಇಂದು 28 ಪೈಸೆಗಳ ನಷ್ಟದೊಂದಿಗೆ 72.73 ಕ್ಕೆ ಕುಸಿಯುವ ಮೂಲಕ ಹೊಸ ತಳಮಟ್ಟವನ್ನು ಕಂಡುಕೊಂಡಿತು. ಕಚ್ಚಾ ತೈಲ ಬೆಲೆ ಕೂಡ ಬ್ಯಾರಲ್‌ಗೆ ಇಂದು 78 ಡಾಲರ್‌ ಮಟ್ಟವನ್ನು ದಾಟಿತು. 

ನಿನ್ನೆ ಸೋಮವಾರದ ಸೆನ್ಸೆಕ್ಸ್‌ ಕುಸಿತದಲ್ಲಿ ಹೂಡಿಕೆದಾರರು 1.96 ಲಕ್ಷ ಕೋಟಿ ರೂ.ನಷ್ಟಕ್ಕೆ ಗುರಿಯಾಗಿದ್ದರು. ಇದೇ ರೀತಿ ಬಿಎಸ್‌ಇ ಲಿಸ್ಟೆಡ್‌ ಶೇರುಗಳ ಮಾರುಕಟ್ಟೆ ಮೌಲ್ಯ 1,96.130.84 ಕೋಟಿ ರೂ ಇದ್ದಲ್ಲಿಂದ 1,55,43,657 ಕೋಟಿ ರೂ. ಮಟ್ಟಕ್ಕೆ ಇಂದು ಮಂಗಳವಾರ ಕುಸಿಯಿತು. 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.