ಮತ್ತೆ ಹೊಳಪು ಪಡೆದ ಚಿನ್ನ : 250 ರೂ. ಜಿಗಿತ, 10 ಗ್ರಾಮಿಗೆ 31,550


Team Udayavani, Sep 29, 2018, 3:47 PM IST

gold-buscuits-700.jpg

ಹೊಸದಿಲ್ಲಿ : ನಿರಂತರ ಮೂರು ದಿನಗಳ ಕಾಲ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಇಂದು ಮತ್ತೆ ತನ್ನ ಹೊಳಪನ್ನು ಪಡೆದುಕೊಂಡಿದೆ. ಹತ್ತು ಗ್ರಾಂ ಶುದ್ಧ ಚಿನ್ನದ ಬೆಲೆ ಇಂದು ಶನಿವಾರ 250 ರೂ. ಜಿಗಿತವನ್ನು ಕಂಡು 31,550 ರೂ. ತಲುಪಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆ ಅವಕಾಶವನ್ನು ಕಂಡಿರುವ ಚಿನ್ನದ ಉದ್ಯಮಿಗಳು ವ್ಯಾಪಕ ಖರೀದಿಯಲ್ಲಿ ತೊಡಗಿಕೊಂಡಿರುವುದು ಕಂಡು ಬಂದಿದೆ. 

ಚಿನ್ನವನ್ನು ಅನುಸರಿಸಿ ಬೆಳ್ಳಿ ಕೂಡ ಇಂದು ಕೆಜಿಗೆ 1,100 ರೂ. ಜಿಗಿತವನ್ನು ಕಂಡು 39,000 ರೂ. ಗಡಿಯನ್ನು ದಾಟಿ ಕೆಜಿಗೆ 39,100 ರೂ. ತಲುಪಿದೆ. ಕೈಗಾರಿಕಾ ಘಟಕಗಳು ಮತ್ತು ನಾಣ್ಯ ಟಂಕಸಾಲೆಯವರಿಂದ ಬಂದ ಉತ್ತಮ ಖರೀದಿಯ ಪರಿಣಾಮವಾಗಿ ಬೆಳ್ಳಿ ಗಮನಾರ್ಹ ಏರಿಕೆಯನ್ನು ಕಂಡಿತು.

ಸಾಗರೋತ್ತರ ಮಾರುಕಟ್ಟೆಯಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿ ಬಂದದ್ದೇ ಚಿನ್ನ ಮತ್ತು ಬೆಳ್ಳಿಯ ಧಾರಣೆಯಲ್ಲಿ ಜಿಗಿತ ಕಂಡು ಬರಲು ಕಾರಣವಾಯಿತೆಂದು ಉದ್ಯಮ ಪರಿಣತರು ಹೇಳಿದ್ದಾರೆ. 

ನ್ಯೂಯಾರ್ಕ್‌ ಮಾರುಕಟ್ಟೆಯಲ್ಲಿ ನಿನ್ನೆ ಶುಕ್ರವಾರ ಚಿನ್ನದ ಧಾರಣೆ ಶೇ.0.83ರಷ್ಟು ಏರಿದ ಪರಿಣಾಮವಾಗಿ ಔನ್ಸ್‌ ಚಿನ್ನದ ಬೆಲೆ 1,192.20 ಡಾಲರ್‌ಗೆ ಏರಿತು. ಬೆಳ್ಳಿ ಕೂಡ ಶೇ.2.85ರ ಏರಿಕೆಯನ್ನು ದಾಖಲಿಸಿ ಔನ್ಸ್‌ಗೆ 14.64 ಡಾಲರ್‌ಗೆ ಜಿಗಿಯಿತು. 

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ  ಶೇ. 99.9 ಮತ್ತು ಶೇ.99.5 ಪರಿಶುದ್ಧತೆಯ 10 ಗ್ರಾಂ ಚಿನ್ನವು ತಲಾ 250 ರೂ. ಜಿಗಿತವನ್ನು ಕಂಡು ಅನುಕ್ರಮವಾಗಿ 31,550 ಮತ್ತು 31,400 ರೂ.ಗೆ ಏರಿತು. ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಚಿನ್ನ ಗ್ರಾಮಿಗೆ 425 ರೂ. ಕುಸಿತವನ್ನು ಕಂಡಿತ್ತು. 

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.