ನಗದು ಲಭ್ಯತೆಯ ಆರ್ಬಿಐ ಕ್ರಮ: ಸೆನ್ಸೆಕ್ಸ್ 299 ಅಂಕ ದಿಢೀರ್ ಜಿಗಿತ
Team Udayavani, Oct 1, 2018, 4:30 PM IST
ಮುಂಬಯಿ : ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ನಗದು ಲಭ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆರ್ಬಿಐ ಕೆಲವು ಕ್ರಮಗಳನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಇಂದು ಸೋಮವಾರ ಮಧ್ಯಾಹ್ನದ ಬಳಿಕ ತೇಜಿಯ ವಾತಾವರಣ ಕಂಡು ಬಂದು ಸೆನ್ಸೆಕ್ಸ್ 299 ಅಂಕಗಳ ಏರಿಕೆಯೊಂದಿಗೆ 36,526.14 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 77.85 ಅಂಕಗಳ ಮುನ್ನಡೆಯನ್ನು ದಾಖಲಿಸಿದ ದಿನದ ವಹಿವಾಟನ್ನು 11,008.30 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಮುಂಬರುವ ಹಬ್ಬದ ಋತುವಿನಲ್ಲಿ ಕಂಡು ಬರಲಿರುವ ಹಣದ ಬೇಡಿಕೆಯನ್ನು ಪೂರೈಸಲು ಅಕ್ಟೋಬರ್ನಲ್ಲಿ ತಾನು ಸರಕಾರಿ ಬಾಂಡ್ಗಳನ್ನು ಖರೀದಿಸುವ ಮೂಲಕ 36,000 ಕೋಟಿ ರೂ.ಗಳನ್ನು ದೇಶದ ಆರ್ಥಿಕ ವ್ಯವಸ್ಥೆಗೆ ಹರಿಯಬಿಡುವುದಾಗಿ ಆರ್ಬಿಐ ಪ್ರಕಟಿಸಿತು. ಶೇರು ಮಾರುಕಟ್ಟೆಗೆ ಈ ಪ್ರಕಟನೆ ಚೇತೋಹಾರಿಯಾಯಿತು.
ಇದರ ಬೆನ್ನಿಗೇ ಸರಕಾರ ಇಂದು ರಾಷ್ಟ್ರೀಯ ನ್ಯಾಯ ಮಂಡಳಿಯನ್ನು ಸಂಪರ್ಕಿಸಿ ಹಣಕಾಸು ಬಿಕ್ಕಟ್ಟಿಗೆ ಗುರಿಯಾಗಿರುವ ಐಎಲ್ ಆ್ಯಂಡ್ ಎಫ್ಎಸ್ ಕಂಪೆನಿಯ ಆಡಳಿತೆಯಲ್ಲಿ ಬದಲಾವಣೆಯನ್ನು ಕೋರಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,855 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,046 ಶೇರುಗಳು ಮುನ್ನಡೆ ಕಂಡವು; 1,620 ಶೇರುಗಳು ಹಿನ್ನಡೆಗೆ ಗುರಿಯಾದವು; 189 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..