ಮುಂಬಯಿ ಶೇರು: 2019ರ ಹೊಸ ವರ್ಷಕ್ಕೆ ಶುಭಾರಂಭ; 186 ಅಂಕ ಜಂಪ್
Team Udayavani, Jan 1, 2019, 11:17 AM IST
ಮುಂಬಯಿ : 2019ರ ಹೊಸ ವರ್ಷದ ಇಂದಿನ ಮೊದಲ ದಿನವಾದ ಮಂಗಳವಾರ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 186 ಅಂಕಗಳ ಉತ್ತಮ ಜಿಗತವನ್ನು ದಾಖಲಿಸಿ 36,254.57 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆಶಾದಾಯಕವಾಗಿ ಕೊನೆಗೊಳಿಸುವುದರೊಂದಿಗೆ ಹೊಸ ವರ್ಷಕ್ಕೆ ಶುಭಾರಂಭ ನೀಡಿತು.
ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ತೀವ್ರ ಹಿನ್ನಡೆ ಕಂಡಿದ್ದ ಮುಂಬಯಿ ಶೇರು ಅನಂತರ ಆರ್ಬಿಐ ನೀಡಿದ ಧನಾತ್ಮಕ ಪ್ರತಿಕ್ರಿಯೆಯಿಂದ ಹುರುಪು ಪಡೆಯಿತು. ದೇಶದ ಸಾರ್ವಜನಿಕ ರಂಗದ ಬ್ಯಾಂಕುಗಳು ಈಗ ಚೇತರಿಕೆಯ ಹಾದಿಯಲ್ಲಿ ಸಾಗುತ್ತಿದ್ದು ಅವುಗಳ ಮೇಲಿನ ಅನುತ್ಪಾದಕ ಆಸ್ತಿಯ ಒತ್ತಡ ಕಡಿಮೆಯಾಗುತ್ತಿದೆ ಎಂದು ಆರ್ಬಿಐ ಹೇಳಿದುದು ಮುಂಬಯಿ ಶೇರು ಪೇಟೆಯಲ್ಲಿ ಹೊಸ ವಿಶ್ವಾಸ ತುಂಬಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 47.55 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,910.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಬ್ಯಾಂಕ್ ಶೇರುಗಳು ಮಾತ್ರವಲ್ಲದೆ ಟೆಲಿಕಾಂ, ಐಟಿ, ಆಟೋ ಮತ್ತು ಫಾರ್ಮಾ ಕ್ಷೇತ್ರದ ಶೇರುಗಳು ಉತ್ತಮ ಬೇಡಿಕೆಯನ್ನು ಪಡೆದವು.
ಎಚ್ ಡಿ ಎಫ್ ಸಿ ಬ್ಯಾಂಕ್, ಎಸ್ಬಿಐ, ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಹೀರೋ ಮೋಟೋಕಾರ್ಪ್, ಟಾಟಾ ಮೋಟರ್, ಸನ್ ಫಾರ್ಮಾ, ಬಜಾಜ್ ಫಿನಾನ್ಸ್, ಟಿಸಿಎಸ್, ಪವರ್ ಗ್ರಿಡ್, ಐಟಿಸಿ, ಬಜಾಜ್ ಆಟೋ, ಮಾರುತಿ, ಕೋಲ್ ಇಂಡಿಯಾ, ಲಾರ್ಸನ್, ಆರ್ಐಎಲ್ ಶೇರುಗಳು ಶೇ.1.3ರ ಏರಿಕೆಯನ್ನು ದಾಖಲಿಸಿದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,701 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,445 ಕಂಪೆನಿಗಳು ಮುನ್ನಡೆ ಸಾಧಿಸಿದವು; 1.105 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 151 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ