ಜೇಡ ಪ್ರಪಂಚದ ವಿಸ್ಮಯ ಪ್ರದರ್ಶನ


Team Udayavani, Dec 4, 2017, 5:50 PM IST

list.jpg

ಚಾಮರಾಜನಗರ: ಜೇಡಗಳ ವಿಸ್ಮಯ ಲೋಕವನ್ನು ತೆರೆದಿಡುವ ಅಪರೂಪದ ಜೇಡಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ನಗರದ ರೋಟರಿ ಭವನದಲ್ಲಿ ಭಾನುವಾರ ಏರ್ಪಡಿಸಲಾಗಿತ್ತು. ಮೈಸೂರಿನ ಹೋಮಿಯೋಪತಿ ವೈದ್ಯ ಡಾ.ಅಭಿಜಿತ್‌, ಎಂಜಿನಿಯರ್‌ಗಳಾದ ಸುಮುಖ, ಪವನ್‌, ವಿಪಿನ್‌ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದ 125 ಪ್ರಭೇದಗಳ, 175 ಛಾಯಾಚಿತ್ರಗಳನ್ನು ಇಡೀ ದಿನ ಪ್ರದರ್ಶಿಸಲಾಯಿತು.

ನಗರದ ರೋಟರಿ, ಹೋಮಿಯೋಪತಿ ಸಂಶೋಧನಾ ಕೇಂದ್ರ, ಶಾಂತಲಾ ಕಲಾವಿದರ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಛಾಯಾಗ್ರಾಹಕರಾದ ಗಣೇಶ್‌ ದೀಕ್ಷಿತ್‌ ಹಾಗೂ ರೋಟರಿ ಅಧ್ಯಕ್ಷ ಸುಭಾಷ್‌ ಉದ್ಘಾಟಿಸಿದರು.

ಹೋಮಿಯೋಪತಿ ಸಂಶೋಧನಾ ಕೇಂದ್ರದ ಡಾ. ಗುರುಕಿರಣ್‌, ರಂಗಕರ್ಮಿ ಕೆ.ವೆಂಕಟರಾಜು ಉಪಸ್ಥಿತರಿದ್ದರು. ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸೇರಿ ಸುಮಾರು 600 ಕ್ಕೂ ಹೆಚ್ಚು ಸಾರ್ವಜನಿಕರು ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.

ಪ್ರದರ್ಶನ ಕಡಿಮೆ: ಜೇಡಗಳ ಕುರಿತು ಆಸಕ್ತಿಕರ ಮಾಹಿತಿಗಳನ್ನು ಡಾ. ಅಭಿಜಿತ್‌ ಹಾಗೂ ಸುಮುಖ ನೀಡಿದರು. “ಪಕ್ಷಿಗಳು, ಚಿಟ್ಟೆಗಳ ಬಗ್ಗೆ ಛಾಯಾಚಿತ್ರಗಳನ್ನು ಸೆರೆಹಿಡಿದಿದ್ದೇವೆ. ಪ್ರದರ್ಶನ ಮಾಡಿದ್ದೇವೆ. ನಮ್ಮ ತೋಟದಲ್ಲಿದ್ದ ವೈವಿಧ್ಯಮಯ ಜೇಡಗಳನ್ನು ನೋಡಿದಾಗ ಜೇಡಗಳ ಛಾಯಾಚಿತ್ರ ತೆಗೆಯುವ ಆಸಕ್ತಿ ಮೂಡಿತು. ಅಲ್ಲಿಂದ ಅವುಗಳ ಜೀವನ ಕ್ರಮಗಳನ್ನು ಅಭ್ಯಸಿಸುವ ಪ್ರಯತ್ನ ಮಾಡಿದೆವು.

ಪ್ರಾಣಿ, ಪಕ್ಷಿಗಳ ಛಾಯಾಚಿತ್ರ ಪ್ರದರ್ಶನಗಳಿಗೆ ಹೋಲಿಸಿದರೆ ಜೇಡಗಳ ಬಗ್ಗೆ ಛಾಯಾಚಿತ್ರ ಪ್ರದರ್ಶನ ನಡೆದೇ ಇರಲಿಲ್ಲ. ಹಾಗಾಗಿ ನಾಲ್ವರು ವಿವಿಧ ಸಂದರ್ಭಗಳಲ್ಲಿ ತೆಗೆದ ಜೇಡಗಳ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡಲು ಯೋಚಿಸಿದೆವು’ ಎಂದು ಅಭಿಜಿತ್‌ ತಿಳಿಸಿದರು.

ಈ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಬಿಟ್ಟರೆ, ಇಡೀ ದೇಶದಲ್ಲೇ ಜೇಡಗಳ ಛಾಯಾಚಿತ್ರ ಪ್ರದರ್ಶನ, ಕಾರ್ಯಾಗಾರ ನಡೆದಿದ್ದು ಮೈಸೂರಿನಲ್ಲೇ ಮೊದಲು. ಅದಾದ ಬಳಿಕ ಚಾಮರಾಜನಗರದಲ್ಲಿ ಎರಡನೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಕಾಡಿನಂಥ ಪ್ರದೇಶದಲ್ಲಿ ಒಂದು ಎಕರೆ ಪ್ರದೇಶದಲ್ಲಿ 1 ಲಕ್ಷ ಜೇಡಗಳಿರುತ್ತವೆ. ಒಂದು ಜೇಡ ಒಂದು ಕೀಟ ತಿಂದರೂ, ಆ ಪರಿಸರದಲ್ಲಿ 1 ಲಕ್ಷ ಕೀಟಗಳ ನಿಯಂತ್ರಣ ಆದಂತಾಯಿತು. ಒಂದು ಜೇಡ ತನ್ನ ಬಲೆಯಲ್ಲಿ ಕನಿಷ್ಠ 5 ಕೀಟಗಳನ್ನು ಹಿಡಿದರೂ ಲಕ್ಷಾಂತರ ಕೀಟಗಳ ಸಂಹಾರವಾಗುತ್ತದೆ. ಹೀಗಾಗಿ ಜೇಡಗಳು ರೈತ ಸ್ನೇಹಿ ಎಂದು ವಿವರಿಸಿದರು.

ದೇಶದಲ್ಲಿ ವಿಷಕಾರಿ ಇಲ್ಲ: ಸಾಲ್ಟಿಸೈಡೆ, ಲಿನಿಫಿಡೆ, ಅರಾನಿಡೆ ಎಂಬ ಮೂರು ವಿಧದ ಜೇಡಗಳಿವೆ. ಜೇಡಗಳ ಬಗ್ಗೆ ತಪ್ಪು ಕಲ್ಪನೆ ಬೇಡ. ಇಡೀ ಭಾರತದಲ್ಲಿ ಮಾನವನ ಪ್ರಾಣಕ್ಕೆ ಅಪಾಯ ತರಬಲ್ಲ ವಿಷಕಾರಿ ಜೇಡ ಇಲ್ಲ. ಜೇಡಗಳು ಮಾನವ ಸ್ನೇಹಿಗಳೇ ಹೊರತು, ಅವುಗಳಿಂದ ತೊಂದರೆ ಇಲ್ಲ ಎಂದು ಹೇಳಿದರು.

ಸುಮುಖ ತಂಡದವರು ಶಿವಮೊಗ್ಗದ ಹೊಸನಗರದಲ್ಲಿ 6 ಹೊಸ ಬಗೆಯ ಜೇಡಗಳನ್ನು ಕಂಡುಹಿಡಿದಿದ್ದಾರೆ. ಇದರಲ್ಲಿ ಸಾರ್ಟಿಂಗ್‌ ಹ್ಯಾಟ್‌ ಸ್ಪೈಡರ್‌ ಎಂಬ ಜೇಡ, ವಿಶ್ವದ ಪ್ರಮುಖ ಆವಿಷ್ಕಾರಗಳಲ್ಲೊಂದು ಎಂಬ ಗೌರವಕ್ಕೆ ಪಾತ್ರವಾಗಿದೆ ಎಂದು ಅಭಿಜಿತ್‌ ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.