ಕೆರೆ ಕಟ್ಟೆಗೆ ಬಿಟ್ಟ ಕಬಿನಿ ನೀರು ಕಾವೇರಿ ಪಾಲು


Team Udayavani, Feb 14, 2018, 4:08 PM IST

cham-3.jpg

ಸಂತೆಮರಹಳ್ಳಿ: ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿವ ನೀರಿಗೆ ಯಾವುದೇ ಸಮಸ್ಯೆಯಾಗಬಾರದು ಮತ್ತು ಅಂತರ್ಜಲ ಹೆಚ್ಚಿಸುವ ಸಲುವಾಗಿ ಕಬಿನಿ ಜಲಾಶಯದಿಂದ ನಾಲೆಗಳ ಮೂಲಕ ಕೆರೆಕಟ್ಟೆಗಳಿಗೆ ನೀರು ಹರಿಸಲಾಗುತ್ತಿದೆ. ಆದರೆ, ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನೀರು ಕಾವೇರಿ ನದಿ ಸೇರುತ್ತಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸಂತೆಮರಹಳ್ಳಿ ಗ್ರಾಮ ಸೇರಿದಂತೆ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳು, ಯಳಂದೂರು ತಾಲೂಕಿನ ಕಬಿನಿ ಬಲದಂಡೆ ನಾಲೆಗಳಿಗೆ ತಾತ್ಕಾಲಿಕವಾಗಿ ಹೊಸ ನಿಯಮದ ಪ್ರಕಾರ 10 ದಿನಗಳ ಕಾಲ ಕಬಿನಿ ಡ್ಯಾಂನಿಂದ ನೀರು ಬಿಡಲಾಗಿದೆ. 

ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿವ ನೀರು ಒದಗಿಸುವುದು, ಅಂತರ್ಜಲ ವೃದ್ಧಿಗೆ ಅನುಕೂಲ ವಾಗುವ ಉದ್ದೇಶದಿಂದ ನೀರು ಹರಿಸಲಾಗುತ್ತಿದೆ. ಇದು ಈ ಭಾಗದ ಕೃಷಿಕರಲ್ಲಿ ಮಂದಹಾಸ ಮೂಡಿಸಿತ್ತು. ಆದರೆ, ನೀರು ಮಾತ್ರ ಕೆರೆ ಕಟ್ಟೆಗಳಿಗೆ ಹರಿಯಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. 

ನಾಲೆಯಲ್ಲಿ ಹರಿಯುವ ನೀರು ಹೆಚ್ಚಿನ ಪ್ರಮಾಣದಲ್ಲಿ ಮುಳ್ಳೂರಿನ ಸಮೀಪದಲ್ಲಿರುವ ಕಾವೇರಿ ನದಿಗೆ ಸೇರುತ್ತಿದೆ ಎಂದು ಇರಸವಾಡಿ ಗ್ರಾಮದ ರೈತ ಮಹಾದೇವಶೆಟ್ಟಿ, ನಂಜುಂಡಸ್ವಾಮಿ ಆರೋಪಿಸಿದ್ದಾರೆ.

ಇಳುವರಿ ಹೆಚ್ಚಿಸಿಕೊಳ್ಳಲು ನೆರವು: ಚಾಮರಾ ಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ಅಚ್ಚುಕಟ್ಟು ಪ್ರದೇಶದ ಹತ್ತಾರು ಕೆರೆಗಳು ಇದರ ವ್ಯಾಪ್ತಿಗೆ ಒಳಪಡುತ್ತದೆ. ಈ ಭಾಗದ ರೈತರು ಹೆಚ್ಚಾಗಿ ಮುಸುಕಿನ ಜೋಳ, ರಾಗಿ, ದ್ವಿದಳ ಧಾನ್ಯ ಹಾಗೂ ಕಬ್ಬು ಬೆಳೆದಿದ್ದಾರೆ. ಇಳುವರಿ ಹೆಚ್ಚಿಸಿಕೊಳ್ಳಲು ನೆರವಾಗುವ ಉದ್ದೇಶದಿಂದ ಕಬಿನಿ ಬಲದಂಡೆ ನಾಲೆಯಲ್ಲಿ ನೀರು ಬಿಡಲಾಗಿದೆ.

ಸಂತೆಮರಹಳ್ಳಿ, ಯಳಂದೂರು ಮೂಲಕ ಕೊಳ್ಳೇಗಾಲ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುತ್ತದೆ. ಆದರೆ, ಈ ನೀರು ಕರೆ ಕಟ್ಟೆಗಳಿಗೆ ಸೇರದೆ ನದಿಗೆ ವ್ಯರ್ಥವಾಗಿ ಹರಿದು ಹೋಗುತ್ತಿದೆ.

ಕೆರೆಗಳಿಗೆ ನೀರೇ ಹೋಗುತ್ತಿಲ್ಲ: ಕಬಿನಿ ನಾಲೆಯ ಅಚ್ಚುಕಟ್ಟು ವ್ಯಾಪ್ತಿಗೆ ಒಳಪಡುವ ಅನೇಕ ಕೆರೆಗಳಲ್ಲಿ ಹೂಳು ತುಂಬಿದೆ. ನೀರು ಸಂಗ್ರಹಕ್ಕೆ ನಿರ್ಮಾಣವಾಗಿರುವ ಕಾಲುವೆಗಳು ದುರಸ್ತಿಯಲ್ಲಿದೆ. ಇದು ನೀರು ಸಂಗ್ರಹಕ್ಕೆ ಅಡ್ಡಿಯಾಗಿದೆ. ಅನೇಕ ಕಡೆಗಳಲ್ಲಿ ನಾಲೆಯ ತೂಬುಗಳು ದುರಸ್ತಿಯಾ ಗಬೇಕಿದೆ. ಅನೇಕ ಕಡೆ ನೀರು ವ್ಯರ್ಥವಾಗಿ ನದಿ ಸೇರಿ ತಮಿಳುನಾಡಿನ ಜನತೆಗೆ ಅನುಕೂಲವಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಅನುಕೂಲ ಕಲ್ಪಿಸುವತ್ತ ಗಮನ ಹರಿಸಬೇಕಾಗಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.