ಕರ್ನಾಟಕ ವಿಭಜನೆ ಹೇಳಿಕೆಗಳ ವಿರುದ್ಧ ಅರೆಬೆತ್ತಲೆ ಪ್ರತಿಭಟನೆ


Team Udayavani, Aug 2, 2018, 12:50 PM IST

2-aa-a_1.jpg

ಚಾಮರಾಜನಗರ: ಅಖಂಡ ಕರ್ನಾಟಕವನ್ನು ಒಡೆಯುವ ಹೇಳಿಕೆಗಳನ್ನು ನೀಡುತ್ತಿರುವ ಕನ್ನಡ ದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಗೇಟ್‌ ಮುಂಭಾಗದಲ್ಲಿ ಅರೆಬೆತ್ತಲೆಯಾಗಿ ಉರುಳುಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. 

ಜಿಲ್ಲಾಡಳಿತ ಭವನದ ಗೇಟ್‌ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯ ವಿಭಜನೆ ಮಾಡಲು ಮುಂದಾಗಿರುವ ಕನ್ನಡ ವಿರೋಧಿಗಳಿಗೆ ಧಿಕ್ಕಾರ ಕೂಗಿದರು. ಉರುಳುಸೇವೆ ಮಾಡಿದ ಪ್ರತಿಭಟನಾಕಾರರು ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲ ರಾಜಕಾರಣಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜ್ಯ ವಿಭಜನೆ ಮಾತನಾಡುತ್ತಿದ್ದಾರೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಕರ್ನಾಟಕ ಏಕೀಕರಣದ ಬಗ್ಗೆ ಕನಿಷ್ಠ ತಿಳಿವಳಿಕೆಯೂ ಇಲ್ಲದವರು ಇಂತಹ ಕೆಲಸ ಮಾಡುತ್ತಿರುವುದು ಶೋಚನೀಯ.

ಲಕ್ಷಾಂತರ ಜನರ ಹೋರಾಟದ ಫ‌ಲವಾಗಿ ಕರ್ನಾಟಕ ಏಕೀಕರಣವಾಗಿ ಅಖಂಡ ಕರ್ನಾಟಕ ರಚನೆಯಾಗಿ ಇಂದು ರಾಜ್ಯ ಬಹಳ ಸುಭಿಕ್ಷವಾಗಿದೆ. ಇಂತಹ ಸಂದರ್ಭದಲ್ಲಿ  ಕುಂಟು ನೆಪ ಹೇಳಿಕೊಂಡು ಕರ್ನಾಟಕ ಭಜನೆಗೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯವಾದದ್ದು ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸೇನಾಪಡೆಯ ಗೌರವ ಅಧ್ಯಕ್ಷ ಶಾ. ಮುರಳಿ, ನಿಜಧ್ವನಿ ಗೋಂದರಾಜು, ಪಣ್ಯದಹುಂಡಿ ರಾಜು, ಚಾ.ಹ. ಶಿವರಾಜ್‌, ಗು.ಪುರುಷೋತ್ತಮ, ತಾಂಡವಮೂರ್ತಿ, ಎಂ.ಶಿವು, àರಭದ್ರ, ಶಿವಶಂಕರ್‌, ಚಾ.ಸಿ.ಸಿದ್ದರಾಜು, ನಾಗರಾಜ್‌ ಟೈಲರ್‌ ಇತರರು ಭಾಗವಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.