ಹನೂರು : ಬಸ್ ಪಲ್ಟಿ; ಮಹಿಳೆಯ ಕೈ ತುಂಡು, ಹಲವರಿಗೆ ಗಾಯ
Team Udayavani, Aug 11, 2018, 11:55 AM IST
ಚಾಮರಾಜನಗರ : ಭೀಮನ ಅಮಾವಾಸ್ಯೆಗೆಂದು ಮಹದೇಶ್ವರಕ್ಕೆ ತೆರಳುತ್ತಿದ್ದ ಭಕ್ತರಿದ್ದ ಮಿನಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಎದುರಿನಿಂದ ಬರುತ್ತಿದ್ದ ಇನ್ನೊಂದು ವಾಹನಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸಂಭವಿಸಿದ ಈ ಅವಘಡದಲ್ಲಿ ಹನೂರಿನ ಬೊಪ್ಪೆ ಗೌಡನಪುರ ನಿವಾಸಿ ಅಮ್ಮಣ್ಣಿಯಮ್ಮ (55) ಎನ್ನುವವರ ಕೈ ತುಂಡಾಗಿದೆ. ಹಲವರು ಸಣ್ಣ ಪುಟ್ಟ ಗಾಯಗಳಿಗೊಳಗಾಗಿದ್ದಾರೆ.
ಗಾಯಾಳಾಗಿದ್ದ ಅಮ್ಮಣ್ಣಿಯಮ್ಮ ನರಳುತ್ತಿದ್ದರೂ ಯಾರೂ ಮಾನವೀಯತೆ ತೋರದೆ ಆಸ್ಪತ್ರೆಗೆ ಕರೆದೊಯ್ಯಲಿಲ್ಲ. ಅಪಘಾತವಾಗಿ ಒಂದೂವರೆ ಗಂಟೆ ಕಳೆದ ಬಳಿಕ ಅಂಬುಲೆನ್ಸ್ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು