ಸಮನ್ವಯ ಸಮಿತಿ ಓಕೆ ಅಂದ್ರೆ HDK ಬದಲು ಸಿದ್ದರಾಮಯ್ಯ ಮತ್ತೆ ಸಿಎಂ?
Team Udayavani, Aug 27, 2018, 12:28 PM IST
ಚಾಮರಾಜನಗರ:ನಾನು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂಬ ಹೇಳಿಕೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಬೆನ್ನಲ್ಲೇ ಮತ್ತೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದರೆ ನಾವೆಲ್ಲ ಅವರ ಬೆಂಬಲ ಇದ್ದೇವೆ ಎಂಬ ಹೇಳಿಕೆಯನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಸೋಮವಾರ ಚಾಮರಾಜನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಭಯ ಪಕ್ಷಗಳ ಸಮನ್ವಯ ಸಮಿತಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬದಲಾಯಿಸಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದರೆ ಅದಕ್ಕೆ ನಾವು ಬದ್ಧ ಎಂದು ತಿಳಿಸಿದ್ದಾರೆ.
ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದರೆ ಸಿಎಂ ಬದಲಾಗಬಹುದು. ಹೈಕಮಾಂಡ್ ಕೂಡಾ ಅದಕ್ಕೆ ಬೆಂಬಲ ಸೂಚಿಸಬೇಕು ಎಂದು ಹೇಳಿದರು.
ಮೈತ್ರಿಕೂಟ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಎಂದು ಘೋಷಿಸಲಾಗಿತ್ತು. ಒಂದು ವರ್ಷದವರೆಗೆ ನನ್ನ ಯಾರೂ ಮುಟ್ಟಲಾರರು ಎಂದು ಕುಮಾರಸ್ವಾಮಿ ಬಹಿರಂಗವಾಗಿ ಹೇಳಿದ್ದರು. ಎಲ್ಲವೂ ಸರಿಯಾಗಿಲ್ಲ, ನಾನು ಸಂತೋಷದಿಂದ ಇಲ್ಲ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಚೆಲುವರಾಯಸ್ವಾಮಿ ಸೇರಿದಂತೆ ಬಹುತೇಕ ಮುಖಂಡರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ