ಸಮನ್ವಯ ಸಮಿತಿ ಓಕೆ ಅಂದ್ರೆ HDK ಬದಲು ಸಿದ್ದರಾಮಯ್ಯ ಮತ್ತೆ ಸಿಎಂ?
Team Udayavani, Aug 27, 2018, 12:28 PM IST
ಚಾಮರಾಜನಗರ:ನಾನು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂಬ ಹೇಳಿಕೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಬೆನ್ನಲ್ಲೇ ಮತ್ತೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದರೆ ನಾವೆಲ್ಲ ಅವರ ಬೆಂಬಲ ಇದ್ದೇವೆ ಎಂಬ ಹೇಳಿಕೆಯನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಸೋಮವಾರ ಚಾಮರಾಜನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಭಯ ಪಕ್ಷಗಳ ಸಮನ್ವಯ ಸಮಿತಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬದಲಾಯಿಸಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದರೆ ಅದಕ್ಕೆ ನಾವು ಬದ್ಧ ಎಂದು ತಿಳಿಸಿದ್ದಾರೆ.
ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದರೆ ಸಿಎಂ ಬದಲಾಗಬಹುದು. ಹೈಕಮಾಂಡ್ ಕೂಡಾ ಅದಕ್ಕೆ ಬೆಂಬಲ ಸೂಚಿಸಬೇಕು ಎಂದು ಹೇಳಿದರು.
ಮೈತ್ರಿಕೂಟ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಎಂದು ಘೋಷಿಸಲಾಗಿತ್ತು. ಒಂದು ವರ್ಷದವರೆಗೆ ನನ್ನ ಯಾರೂ ಮುಟ್ಟಲಾರರು ಎಂದು ಕುಮಾರಸ್ವಾಮಿ ಬಹಿರಂಗವಾಗಿ ಹೇಳಿದ್ದರು. ಎಲ್ಲವೂ ಸರಿಯಾಗಿಲ್ಲ, ನಾನು ಸಂತೋಷದಿಂದ ಇಲ್ಲ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಚೆಲುವರಾಯಸ್ವಾಮಿ ಸೇರಿದಂತೆ ಬಹುತೇಕ ಮುಖಂಡರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್