ಚಿರತೆ ಓಡಾಟ: ಬೆಚ್ಚಿಬಿದ್ದ ಗ್ರಾಮಸ್ಥರು


Team Udayavani, Feb 10, 2019, 7:20 AM IST

chirate.jpg

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್‌ ಕಾಲೇಜು ಎದುರಿನ ಅಶ್ವಿ‌ನಿ ಬಡಾವಣೆ ಹಾಗೂ ಮಡಹಳ್ಳಿ ರಸ್ತೆ ಹಾಗೂ ಮಹದೇವಪ್ರಸಾದ್‌ ಬಡಾವಣೆಯ ಸುತ್ತಮುತ್ತ ಚಿರತೆಯ ಓಡಾಟ ಹೆಚ್ಚಾಗಿದ್ದು, ಬೇಲಿಯ ಪೊದೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ಬಡಾವಣೆಯ ನಿವಾಸಿಗಳು ಭಯಭೀತರಾಗಿದ್ದು, ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಮಡಹಳ್ಳಿ ರಸ್ತೆಯಲ್ಲಿ ಹಾದು ಹೋಗಿರುವ ಹಳ್ಳದಲ್ಲಿ ಗಿಡಗಂಟಿಗಳು ಬೆಳೆದು ಭಾರೀ ಗಾತ್ರದ ಪೊದೆಗಳಾಗಿವೆ. ಇದರ ಇಕ್ಕೆಲಗಳಲ್ಲಿಯೂ ಇತ್ತೀಚೆಗೆ ಬಡಾವಣೆಗಳಲ್ಲಿ ಅಲ್ಲಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಚಿರತೆಯು ದಾಳಿ ಮಾಡುವ ಭೀತಿಯಿಂದ ಮನೆಯ ಬಾಗಿಲು ತೆರೆಯಲು ಹಾಗೂ ಕತ್ತಲಾದ ನಂತರ ಹೊರಬರಲು ಹೆದರುತ್ತಿದ್ದಾರೆ.

ಕಳೆದ ಫೆ. 3ರಂದು ಪಟ್ಟಣದ ಅಶ್ವಿ‌ನಿ ಬಡಾವಣೆಯ ಬಸವಣ್ಣ ಎಂಬುವವರ ಮನೆಯ ಸಮೀಪದಲ್ಲಿ ಚಿರತೆಯೊಂದು ಕರುವೊಂದನ್ನು ತಿಂದುಹಾಕಿತ್ತು. ಅಲ್ಲದೇ ಮರುದಿನ ಸಮೀಪದ ಮಹದೇವಪ್ರಸಾದ್‌ ನಗರದಲ್ಲಿ ಮನೆಯ ಮುಂದೆ ಕಟ್ಟಿಹಾಕಿದ್ದ ಇನ್ನೊಂದು ಕರುವನ್ನು ಕೊಂದು ಹಾಕಿದ್ದ‌ರಿಂದ ನಾಗರಿಕರು ಮತ್ತಷ್ಟು ಭೀತಿಗೊಳಗಾಗಿದ್ದಾರೆ.

ಶುಕ್ರವಾರ ಮಡಹಳ್ಳಿ ರಸ್ತೆಯಲ್ಲಿರುವ ಕಲ್ಯಾಣ ಮಂಟಪಕ್ಕೆ ಬಂದಿದ್ದ ಜನರು ಸಂಜೆ ವೇಳೆ ಚಿರತೆಯೊಂದು ಹಳ್ಳದತ್ತ ಸಾಗಿದ್ದನ್ನು ಕಂಡು ಆತಂಕಕ್ಕೊಳಗಾಗಿದ್ದಾರೆ. ಈ ರಸ್ತೆಯಲ್ಲಿ ಹೆಚ್ಚಿನ ವಾಹನ ಸಂಚಾರವಿದ್ದು ಕಾನ್ವೆಂಟ್, ಪದವಿ ಕಾಲೇಜು, ನ್ಯಾಯಾಲಯ ಸಮುಚ್ಛಯ ಹಾಗೂ ಕಲ್ಯಾಣ ಮಂಟಪಗಳಿವೆ.

ಈ ಮಾರ್ಗದಲ್ಲಿ ಮಡಹಳ್ಳಿ, ಹೊನ್ನಶೆಟ್ಟರಹುಂಡಿ, ಹೊಂಗಹಳ್ಳಿ, ಬರಗಿ ಮುಂತಾದ ಗ್ರಾಮಗಳಿಗೆ ತೆರಳುವ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಭಯಪಡುತ್ತಿದ್ದಾರೆ. ಸುತ್ತಲೂ ಜಮೀನಿನಿದ್ದು, ಅಲ್ಲಿ ಮನೆಕಟ್ಟಿಕೊಂಡು ವಾಸಿಸುತ್ತಿರುವ ರೈತರೂ ತಮ್ಮ ಹಾಗೂ ಜಾನುವಾರುಗಳ ರಕ್ಷಣೆಯ ಬಗ್ಗೆ ಚಿಂತೆಗೊಳಗಾಗಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.