ಮುರಿದು ಬಿದ್ದ ಮರದ ಕೊಂಬೆ: ತಪ್ಪಿದ ಅನಾಹುತ


Team Udayavani, Feb 11, 2019, 7:23 AM IST

muridu.jpg

ಸಂತೆಮರಹಳ್ಳಿ: ಯಳಂದೂರು ಪಟ್ಟಣದ ಸಂತೆಮಾಳದಲ್ಲಿ ಭಾರೀ ಗಾತ್ರದ ಒಣಗಿದ ಅರಳಿ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ಭಾನುವಾರ ಜರುಗಿದೆ. ಇದರಿಂದ ವ್ಯಾಪಾರಿಯೊಬ್ಬರ ಬೈಕ್‌ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ: ಪಟ್ಟಣದಲ್ಲಿ ಪ್ರತಿ ಭಾನುವಾರ ಸಂತೆ ನಡೆಯುತ್ತದೆ. ಸುವರ್ಣಾವತಿ ನದಿದಡದಲ್ಲಿ ಇದಕ್ಕಾಗಿ ಸ್ಥಳವನ್ನು ನಿಗದಿ ಮಾಡಲಾಗಿದೆ. ಇದು ತರಕಾರಿ, ಕಾಯಿಪಲ್ಯಗಳ ಪ್ರಮುಖ ಮಾರುಕಟ್ಟೆಯಾಗಿದೆ. ಪ್ರತಿ ವಾರ ನೂರಾರು ವರ್ತಕರು ಹಾಗೂ ಸಾವಿರಾರು ಗ್ರಾಹಕರು ಇಲ್ಲಿ ವಹಿವಾಟು ನಡೆಸುತ್ತಾರೆ.

ಸಂತೆ ಮೈದಾನದ ಸುತ್ತುಗೋಡೆಗೆ ಹೊಂದಿಕೊಂಡಂತೆ ಬೃಹತ್‌ ಗಾತ್ರದ ಅರಳಿಮರವೂ ಇದೆ. ಆದರೆ ಇದರ ಬಹುತೇಕ ದೊಡ್ಡದೊಡ್ಡ ಕೊಂಬೆಗಳು ಒಣಗಿ ನಿಂತಿವೆ. ಈ ಹಿಂದೆಯೂ ಒಂದು ಕೊಂಬೆ ಬಿದ್ದು ಸುತ್ತುಗೋಡೆಯೇ ಜಖಂಗೊಂಡಿತ್ತು. ಆದರೆ ಆಗ ಸಂತೆ ಇಲ್ಲದ್ದರಿಂದ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಆಗಲೇ ಮರ ತೆರವುಗೊಳಿಸಿಕೊಡಬೇಕು ಎಂದು ಇಲ್ಲಿನ ವರ್ತಕರು ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು ಆದರೂ ಇದರ ತೆರವಿಗೆ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು.

ಭಾನುವಾರ ಸಂತೆಯ ಸಮಯದಲ್ಲೇ ನೀರಿನ ತೊಂಬೆಯ ಬಳಿ ಕೊಂಬೆ ಬಿದ್ದಿದೆ. ಪಕ್ಕದಲ್ಲೇ ಬೈಕ್‌ ಮೇಲೆ ಕುಳಿತಿದ್ದ ವ್ಯಾಪಾರಿ ನಿಂಗರಾಜು ಮೇಲೆ ಬಿದ್ದು ಸಣ್ಣ ಗಾಯಗಳಾಗಿದ್ದು, ಬೈಕ್‌ ಜಖಂಗೊಂಡಿದೆ. ಅಲ್ಲದೆ ಇದರ ಪಕ್ಕದಲ್ಲೇ ವಿದ್ಯುತ್‌ ತಂತಿಯೂ ಹಾದುಹೋಗಿದೆ. ಅದೃಷ್ಟವಶಾತ್‌ ತಂತಿಯ ಮೇಲೆ ಇದು ಬಿದ್ದಿದ್ದರೆ ಭಾರಿ ಪ್ರಮಾಣದ ದುರಂತವೊಂದು ಸಂಭವಿಸುವ ಅಪಾಯವೂ ಇತ್ತು ಎಂದು ವರ್ತಕರಾದ ನಾಗರಾಜು ತಿಳಿಸಿದರು.

ಮೂಲ ಸೌಲಭ್ಯಗಳೇ ಇಲ್ಲ: ಪಟ್ಟಣ ಪಂಚಾಯಿತಿ ವತಿಯಿಂದ ನಡೆಯುವ ಈ ಸಂತೆಯಲ್ಲಿ ಪ್ರತಿ ವಾರವೂ ಸುಂಕವನ್ನು ವಸೂಲಿ ಮಾಡಲಾಗುತ್ತದೆ. ಆದರೆ ಇಲ್ಲಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಸೋತಿದೆ. ಸಂತೆಯ ಮಧ್ಯೆ ಹಾದು ಹೋಗಿರುವ ವಿದ್ಯುತ್‌ ಕಂಬವನ್ನು ತೆರವುಗೊಳಿಸಬೇಕು. ಇದರ ಹಿಂಭಾಗ ಸಾಮೂಹಿಕ ಮಲಮೂತ್ರ ವಿಸರ್ಜನಾ ಸ್ಥಳವಾಗಿ ಮಾರ್ಪಟ್ಟಿದ್ದು ಅನೈರ್ಮಲ್ಯ ತಾಂಡವವಾಡುತ್ತಿದೆ. ಇಲ್ಲಿ ಸ್ವಚ್ಛತೆಗೆ ಆದ್ಯತೆ ನಿಡಬೇಕು. ಕುಡಿಯುವ ನೀರಿನ ತೊಂಬೆ ಇದ್ದರು ಕೆಲವು ಸಂದರ್ಭದಲ್ಲಿ ನೀರೆ ಇರುವುದಿಲ್ಲ.

ಇಲ್ಲಿಗೆ ಸಮರ್ಪಕ ನೀರಿನ ವ್ಯವಸ್ಥೆ ಮಾಡಬೇಕು. ಶನಿವಾರ ರಾತ್ರಿ ವೇಳೆಗೆ ವ್ಯಾಪಾರಿಗಳು ಸಾಮಾನು ಸರಂಜಾಮುಗಳನ್ನು ಇಲ್ಲಿ ಇಳಿಸಿಕೊಳ್ಳುತ್ತಾರೆ. ಆದರೆ ಇರುವ ಹೈಮಾಸ್ಟ್‌ ದೀಪ ಸರಿಯಾಗಿ ಉರಿಯುವುದೇ ಇಲ್ಲ ಹಾಗಾಗಿ ಇದನ್ನು ದುರಸ್ತಿಪಡಿಸಬೇಕು. ವ್ಯಾಪಾರಿಗಳು ಮಳೆ, ಗಾಳಿ, ಬಿಸಿಲಿನಲ್ಲೇ ಪ್ಲಾಸ್ಟಿಕ್‌ ಪರದೆ ಕಟ್ಟಿಕೊಂಡು ವ್ಯಾಪಾರ ಮಾಡುವ ಸ್ಥಿತಿ ಇದ್ದು ಇದಕ್ಕೆ ಸೂಕ್ತ ಛಾವಣಿಯ ವ್ಯವಸ್ಥೆ ಮಾಡಬೇಕು ಎಂಬುದು ಇಲ್ಲಿನ ವ್ಯಾಪಾರಿಗಳಾದ ಮಹಾದೇವಸ್ವಾಮಿ, ನಿಂಗರಾಜು ಸೇರಿದಂತೆ ಹಲವರ ಆಗ್ರಹವಾಗಿದೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.