ಪ್ರಸಾದ ದುರಂತ: ಕೃಷಿ ಅಧಿಕಾರಿ ಸೇವೆಯಿಂದ ವಜಾ ಮಾಡಿ 


Team Udayavani, Feb 15, 2019, 7:33 AM IST

prasdad.jpg

ಕೊಳ್ಳೇಗಾಲ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇಗುಲ ಪ್ರಸಾದಕ್ಕೆ ಬೇರೆಸಿದ ವಿಷದ ಔಷಧಿ ಪೂರೈಸಿದ ಕೃಷಿ ಅಧಿಕಾರಿ ಸಿದ್ದಪ್ಪಸ್ವಾಮಿ ಅವರನ್ನು ಪ್ರಮುಖ ಆರೋಪಿಯಾಗಿ ಮಾಡಬೇಕು ಮತ್ತು ಅವರನ್ನು ಸೇವೆಯಿಂದ ವಜಾ ಮಾಡುವಂತೆ ಎಸ್ಸಿ, ಎಸ್ಟಿ ಮುಖಂಡರು ಒತ್ತಾಯಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ತಹಶೀಲ್ದಾರ್‌ ಕುನಾಲ್‌ ಅಧ್ಯಕ್ಷತೆಯಲ್ಲಿ ನಡೆದ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ವಿವಿಧ ದಲಿತ ಸಂಘಟನೆ ಮುಖಂಡರು ಒತ್ತಾಯ ಮಾಡಿದರು. ಈ ವೇಳೆ ತಹಶೀಲ್ದಾರ್‌ ಮಾತನಾಡಿ, ದೋಷಾರೋಪ ಪಟ್ಟಿಯನ್ನು ಪೊಲೀಸರು ತಯಾರಿಸುವ ವೇಳೆ ಕ್ರಮ ಕೈಗೊಳ್ಳಲಿದ್ದಾರೆ. ಕಾನೂನುನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖಂಡರಿಗೆ ಹೇಳಿದರು.

ಎಷ್ಟು ಅನುದಾನ ನೀಡಿದ್ದೀರಿ: ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಮತ್ತು ಸೋಮಶೇಖರ್‌ ಮಾತನಾಡಿ, ಸುಳ್ವಾಡಿ ಪ್ರಕರಣದಲ್ಲಿ ಪರಿಶಿಷ್ಟ ಜಾತಿ, ಪಂಗಡದವರೇ ಹೆಚ್ಚು ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ಚಿಕಿತ್ಸೆ ನಂತರವೂ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸರ್ಕಾರ ಯಾವ ಅನುದಾನ ನೀಡುತ್ತಿದೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಅಧಿಕಾರಿ ಜಯಕಾಂತ ಮಾತನಾಡಿ, ವಿಷ ಪ್ರಸಾದ ಸೇವನೆಯಲ್ಲಿ 17 ಜನ ಮೃತಪಟ್ಟಿದ್ದಾರೆ. ಅದರಲ್ಲಿ 10 ಜನರು ಪರಿಶಿಷ್ಟರಾಗಿದ್ದಾರೆ. ಮೃತಪಟ್ಟವರಿಗೆ ತಲಾ 8 ಲಕ್ಷ ರೂ., ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಬಿಡುಗಡೆ ಹೊಂದಿದ 66 ಜನರಿಗೆ ತಲಾ 4 ಲಕ್ಷ ರೂ. ನೀಡಲಾಗಿದೆ ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯಿಂದ ಅಸ್ಪೃಶ್ಯತಾ ಕಾಯ್ದೆಯಡಿಯಲ್ಲಿ ದೂರನ್ನೂ ನೀಡಲಾಗಿದೆ ಎಂದು ಹೇಳಿದರು.

ದೇಗುಲದಲ್ಲಿ ಮೀಸಲಾತಿ: ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಮೀಸಲಾತಿಯಂತೆ ದಲಿತ ಅರ್ಚಕರನ್ನು ನೇಮಕ ಮಾಡಬೇಕು. ಮೀಸಲಾತಿಯಂತೆ ಅಂಗಡಿ ಮಳಿಗೆ ಹಂಚಿಕೆ ಮಾಡಬೇಕೆಂದು ದಲಿತ ಮುಖಂಡ ಸೋಮಶೇಖರ್‌ ಮನವಿ ಮಾಡಿದರು.

ಮಹದೇಶ್ವರ ಬೆಟ್ಟ ಒಂದು ಪ್ರತ್ಯೇಕ ಪ್ರಾಧಿಕಾರವಾಗಿದ್ದು, ಪ್ರಾಧಿಕಾರಕ್ಕೆ ತಿಳಿವಳಿಕೆ ನೀಡಲು  ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಚರ್ಚೆಯಾದ ನಡವಳಿಕೆ ಪತ್ರವನ್ನು ಸಂಬಂಧಿಸಿದ ಪ್ರಾಧಿಕಾರದ ಅಧಿಕಾರಿಗೆ ಸಲ್ಲಿಕೆ ಮಾಡಲಾಗುವುದೆಂದು ತಹಶೀಲ್ದಾರ್‌ ಸಮಜಾಯಿಷಿ ನೀಡಿದರು.

ಗಂಗಾ ಕಲ್ಯಾಣ ಯೋಜನೆ: ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊರೆದಿರುವ ಬಾವಿಗಳಲ್ಲಿ ಸರಿಯಾದ ನೀರು ಸಿಕ್ಕಿಲ್ಲ. ಅಂತಹವರಿಗೆ ಸೂಕ್ತ ಪರಿಹಾರವು ದೊರೆತ್ತಿಲ್ಲ. ಹೆಸರಿಗೆ ಮಾತ್ರ ಗಂಗಾ ಕಲ್ಯಾಣ. ಆದರೆ, ಸಮಾಜದ ಜನರಿಗೆ ಯೋಜನೆಯಿಂದ ಯಾವುದೇ ತರಹದ ಪ್ರತಿಫ‌ಲ ದೊರಕುತ್ತಿಲ್ಲ ಎಂದು ದೂರಿದರು. ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ತಿಳುವಳಿಕೆ ನೀಡುವ ವಿಶ್ವಾಸ ವ್ಯಕ್ತಪಡಿಸಿದರು. 

ತಾಪಂ ಅಧ್ಯಕ್ಷ ರಾಜೇಂದ್ರ, ಸರ್ಕಲ್‌ ಇನ್ಸ್‌ಪೆಕ್ಟರ ಶ್ರೀಕಾಂತ್‌, ವಾಲ್ಮೀಕಿ ಸಂಘದ ಅಧ್ಯಕ್ಷ ಚಿಕ್ಕಲಿಂಗಯ್ಯ, ಬಾಬು ಜಗಜೀವನ ರಾಂ ಸಂಘದ ಅಧ್ಯಕ್ಷ ಬಾಲರಾಜ್‌, ಮುಖಂಡರಾದ ಜಡೇಸ್ವಾಮಿ, ಕೃಷ್ಣ, ರಾಜಶೇಖರ್‌ಮೂರ್ತಿ, ಅಣಗಳ್ಳಿ ಬಸವರಾಜು ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.