ಬಿಳಿಗಿರಿರಂಗ ವೈದಿಕ ಪರಂಪರೆಯ ಸಾಂಸ್ಕೃತಿಕ ವೀರ


Team Udayavani, Feb 19, 2019, 7:40 AM IST

biligiri.jpg

ಚಾಮರಾಜನಗರ: ಮಂಟೇಸ್ವಾಮಿ, ಮಹದೇಶ್ವರ ಶೈವ ಪರಂಪರೆಯ ಸಾಂಸ್ಕೃತಿಕ ನಾಯಕರಾದರೆ, ಬಿಳಿಗಿರಿರಂಗ ವೈದಿಕ ಪರಂಪರೆಯ ಸಾಂಸ್ಕೃತಿಕ ವೀರ ಎಂದು ಮೈಸೂರು ವಿ.ವಿ. ಜಾನಪದ ವಿಭಾಗ ಮುಖ್ಯಸ್ಥ ಡಾ. ನಂಜಯ್ಯ ಹೊಂಗನೂರು ಅಭಿಪ್ರಾಯಪಟ್ಟರು.

ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಹಮ್ಮಿಕೊಂಡಿರುವ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸೋಮವಾರ ನಡೆದ ಗೋಷ್ಠಿಯಲ್ಲಿ ಬಿಳಿಗಿರಿ ರಂಗನ ಕಾವ್ಯ ಕುರಿತು ಮಾತನಾಡಿದರು.

ಜಿಲ್ಲೆ ಜನಪದ ಮಹಾಕಾವ್ಯಗಳ ಹಾಗೂ ಕೆಲವು ಜನಪ್ರಿಯ ಕಥನ ಕಾವ್ಯಗಳ ತವರೂರಾಗಿದ್ದು, ಇಲ್ಲಿಯ ಮಂಟೇಸ್ವಾಮಿ ಮತ್ತು ಮಹದೇಶ್ವರ ಕರ್ನಾಟಕದ ಪ್ರಸಿದ್ದ ಜನಪದ ಮಹಾಕಾವ್ಯಗಳಾಗಿದ್ದರೆ ಬಿಳಿಗಿರಿ ರಂಗ ಅಷ್ಟೇ ಪ್ರಸಿದ್ದ ಕಥನ ಕಾವ್ಯವಾಗಿದೆ. ಜನಪದ ಪ್ರೇಮ ಕಾವ್ಯವಾಗಿದೆ ಎಂದರು.

ಸೋಲಿಗರ ಅಸ್ಮಿತೆ: ಬಿಳಿಗಿರಿ ರಂಗನ ಕಾವ್ಯ ಸೋಲಿಗರ ಸಾಂಸ್ಕೃತಿಕ ಚರಿತ್ರೆಯನ್ನು ಕಟ್ಟಿಕೊಡುತ್ತದೆ. ಈ ಕಾವ್ಯದಲ್ಲಿ ಸೋಲಿಗ ಸಮುದಾಯದ ಧಾರ್ಮಿಕ, ಸಾಮಾಜಿಕ, ಜೀವನಾವರ್ತನದ ಹಲವಾರು ಆಚರಣೆಗಳು ಅನಾವರಣಗೊಂಡಿದೆ. ಇದರಿಂದಾಗಿ ಸೋಲಿಗರ ಅಸ್ಮಿತೆ ಗುರುತಿಸಬಹುದಾಗಿದೆ ಎಂದು ಅಭಿಪ್ರಾಯಿಸಿದರು.

ಉತ್ತಮ ಸಂಬಂಧ: ಬಿಳಿಗಿರಿರಂಗನ ಕಾವ್ಯವನ್ನು ಹಾಗೂ ಸೋಲಿಗರ ಸಂಸ್ಕೃತಿಯನ್ನು ಕುರಿತು ನಡೆಸಿರುವ ಅಧ್ಯಯನಗಳು ಅಥವಾ ಸಂಶೋಧನೆಗಳಿಂದ ತಿಳಿದಿರುವುದು ಆಯಾ ಕ್ಷೇತ್ರಗಳಲ್ಲಿ ದೈವ, ಸ್ಥಳೀಯ ಜನರರ ನಡುವೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳುವುದಕ್ಕಾಗಿ ಹೆಣ್ಣೊಂದನ್ನು ಕೊಡುವ ಪದ್ಧತಿ ಅನಾದಿಕಾಲದಿಂದಲೂ ಬಂದಿದೆ ಈ ಕಥೆ ಸ್ವಾರಸ್ಯಕರವಾಗಿ ಮೂಡಿಬಂದು ಒಂದು ಕಾವ್ಯದೆತ್ತರಕ್ಕೆ ಬೆಳೆದುನಿಂತಿದೆ ಎಂದು ತಿಳಿಸಿದರು.

ಬಿಳಿಗಿರಿರಂಗ ವೈಷ್ಣವ: ಈ ಕಾವ್ಯ ಶೈವ ಧರ್ಮವನ್ನು ಕೊನೆಗಾಣಿಸಿ ವೈಷ್ಣವ ಧರ್ಮವನ್ನು ಪ್ರತಿಷ್ಠಾಪಿಸುವ ಘಟನೆಯನ್ನು ಸಾಂಕೇತಿಕವಾಗಿ ಕಟ್ಟಿಕೊಡುತ್ತದೆ. ಬಿಳಿಗಿರಿರಂಗ ವೈಷ್ಣವನಾಗಿರುವುದರಿಂದ ಆತ ಸಸ್ಯಾಹಾರಿ.ಇಲ್ಲಿನ ಕಾಡು ಮತ್ತು ನಾಡಿನ ಜನಸಮುದಾಯ ಮಾಂಸಾಹಾರಿಗಳಾಗಿರುವುದರಿಂದ ಪ್ರತಿವರ್ಷ ದೊಡ್ಡಜಾತ್ರೆ ಸಂದರ್ಭದಲ್ಲಿ ಕುರಿ ಕೋಳಿಗಳ ಬಲಿಕೊಟ್ಟು ಹರಿಸೇವೆ ಮಾಡುತ್ತಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಬ್ಬಹಳ್ಳಿ ಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎನ್‌.ಎಸ್‌. ಮಹದೇವಪ್ರಸಾದ್‌ ಆಶಯ ನುಡಿಗಳನ್ನಾಡಿದರು. ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೊಡ್ಡಗವಿಬಸಪ್ಪ  ಮಲೆ ಮಹದೇಶ್ವರ ಕಾವ್ಯ ಗಾಯನ ಮಾಡಿದರೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಸಮುದ್ರ ನಿಂಗಶೆಟ್ಟಿ ಮಂಟೇಸ್ವಾಮಿ ಕಾವ್ಯ ಹಾಡಿದರು.

ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೊಡ್ಡಮೋಳೆ ಎಚ್‌.ಸಣ್ಣಶೆಟ್ಟಿ ಬಿಳಿಗಿರಿರಂಗನ ಕಾವ್ಯವನ್ನು ಹಾಡಿದರು.  ಸಮ್ಮೇಳನಾಧ್ಯಕ್ಷ ಡಾ. ಶಿವರಾಜಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ವಿನಯ್‌, ಚಂದ್ರಶೇಖರ್‌, ಕೊಮಾರನಪುರ ರವಿಕುಮಾರ್‌, ಬಳೇಪೇಟೆ ಪ್ರಸಾದ್‌, ಅರ್ಕಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.