ಹುಲಿ ಯೋಜನೆಗೆ ಬೆಟ್ಟ ಸೇರಿಸಬೇಡಿ


Team Udayavani, Feb 23, 2019, 7:29 AM IST

huli-yoj.jpg

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರಬೆಟ್ಟ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಅರಣ್ಯ ಎಂದು ಘೋಷಿಸಬಾರದೆಂದು ಒತ್ತಾಯಿಸಿ ಜಿಲ್ಲಾ ಬುಡಕಟ್ಟು ಗಿರಿಜನರ ಅಭಿವೃದ್ಧಿ ಸಂಘದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟಿಸಿದರು. ಸಾಂಪ್ರದಾಯಿಕ ಉಡುಗೆ ತೊಡುಗೆ ಧರಿಸಿ, ಬುಡಕಟ್ಟು ನೃತ್ಯ ಪ್ರದರ್ಶಿಸಿದರು.

3,500 ಕುಟುಂಬ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಮುಖಂಡ ಡಾ. ಸಿ. ಮಾದೇಗೌಡ ಮಾತನಾಡಿ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮ ವ್ಯಾಪ್ತಿಗೆ ಬೈಲೂರು, ಪಿ.ಜಿ.ಪಾಳ್ಯ, ಲೊಕ್ಕನಹಳ್ಳಿ, ದಿನ್ನಹಳ್ಳಿ, ಶಾಗ್ಯ, ಮೀಣ್ಯಂ, ಪೊನ್ನಾಚಿ, ಮಾರ್ಟಳ್ಳಿ ಗ್ರಾಮಗಳು ಒಳಪಡಲಿವೆ. ಈ ಎಲ್ಲಾ ಗ್ರಾಮಗಳಲ್ಲಿ 3,500 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿನ ಜನತೆಗೆ ಶತಮಾನಗಳಿಂದಲೂ ಗೆಡ್ಡೆಗೆಣಸು, ಸೊಪ್ಪು, ಸೆದೆ ಸಂಗ್ರಹ ಮಾಡಿ, ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಅರಣ್ಯವಾಗಿ ಘೋಷಣೆ ಮಾಡಲು ರಾಷ್ಟ್ರೀಯ ಹುಲಿ ಯೋಜನಾ ಪ್ರಾಧಿಕಾರಕ್ಕೆ ವರದಿ ಕಳುಹಿಸಿದೆ. ಇದು ಸರಿಯಲ್ಲ ಎಂದು ದೂರಿದರು. ಪರಿಸರವಾದಿಗಳೆಂದು ಹೇಳಿಕೊಂಡು ಕೆಲವರು ಲಾಭದ ಉದ್ದೇಶದಿಂದ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳು ಜಾಸ್ತಿಯಿವೆ ಎಂದು ಸುಳ್ಳು ವರದಿ ನೀಡಿ, ಅರಣ್ಯವಾಸಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದರು.

ಸಭೆ ಕರೆಯಿರಿ: ಪ್ರಾಧಿಕಾರಕ್ಕೆ ವರದಿ ಕಳುಹಿಸಿಕೊಡುವ ಮೊದಲು ರಾಜ್ಯ ಸರ್ಕಾರವು ಅರಣ್ಯದಂಚಿನಲ್ಲಿರುವ ಗ್ರಾಮ ಅರಣ್ಯಸಮಿತಿ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಗ್ರಾಮ ಅರಣ್ಯಸಮಿತಿ ಜತೆ ಚರ್ಚಿಸದೇ ಮಹದೇಶ್ವರ ಬೆಟ್ಟವನ್ನು ಹುಲಿ ಯೋಜನೆಗೆ ಸೇರಿಸಲು ಹೊರಟಿರುವುದರಿಂದ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತದೆ ಎಂದರು.

2006 ರ ಅರಣ್ಯಹಕ್ಕು ಕಾಯಿದೆಯಡಿ ಸೋಲಿಗರ 533 ಕುಟುಂಬಗಳಿಗೆ 1143 ಎಕರೆ ಭೂಮಿಯನ್ನು ಒಡೆತನಕ್ಕೆ ಲಭ್ಯವಿದೆ.  25 ಅರಣ್ಯ ಹಕ್ಕು ಸಮಿತಿಗಳು ಸಮುದಾಯ ಅರಣ್ಯ ಹಕ್ಕುಪತ್ರ ಪಡೆದಿವೆ. ಈಗಾಗಲೇ ಅರಣ್ಯ ಸಂರಕ್ಷಣೆ, ನಿರ್ವಹಣೆ, ಕಿರುಅರಣ್ಯ ಉತ್ಪನ್ನ ಸಂಗ್ರಹ ಮಾಡುವ ಮೂಲಕ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.  

ಇಂಥ ಪರಿಸ್ಥಿತಿಯಲ್ಲಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ ಇರುವುದಿಲ್ಲ. ನಮ್ಮನ್ನು ಈಗಿರುವ ಜಾಗದಿಂದ ಸ್ಥಳಾಂತರಿಸುವ ಕೆಲಸವೂ ನಡೆಯಲಿದೆ. ಆದ್ದರಿಂದ ಮದದೇಶ್ವರಬೆಟ್ಟ ವನ್ಯಧಾಮವನ್ನು ಹುಲಿ ಯೋಜನೆಗೆ ಸೇರಿಸಬಾರದು ಎಂದು ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲಾ ಪ್ರತಿಭಟನಾನಿರತರು ಬಾಯಿ, ತಲೆಗೆ ಹಸಿರು ಬಣ್ಣದ ಪಟ್ಟಿ ಕಟ್ಟಿಕೊಂಡಿದ್ದರು. ಗಿರಿಜನರ ತಂಡವೊಂದು ತಲೆಗೆ ಹಸಿರು ಎಲೆಯ ಕಿರೀಟ, ಮೈಗೆ ವಿಭೂತಿ ಬಳಿದುಕೊಂಡು ನಗಾರಿ, ತಮಟೆ ನೃತ್ಯ ಮಾಡಿ  ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಬುಡಕಟ್ಟು ಸಂಘದ ಮುಖಂಡರಾದ ಸಿ.ಮಾದಪ್ಪ, ಮುತ್ತಯ್ಯ, ರಾಜೇಗೌಡ, ಕೋಣೂರೇಗೌಡ, ಎಂ.ಜಡೇಸ್ವಾಮಿ, ಮಹದೇವ, ವಿಠಲ. ದೊಡ್ಡಯ್ಯ, ರಂಗೂಗೌಡ, ಸೋಮಶೇಖರ್‌, ವಿಜಯಕುಮಾರ್‌, ಕುನ್ನಮರಿಗೌಡ ಇತರರಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.