ವಸ್ತುಗಳು ಖರೀದಿಸುವಾಗ ಬಿಲ್‌ ಕಡ್ಡಾಯವಾಗಿ ಪಡೆಯಿರಿ


Team Udayavani, Mar 17, 2019, 7:43 AM IST

vastugalu.jpg

ಕೊಳ್ಳೇಗಾಲ: ವೈಜ್ಞಾನಿಕ ಯುಗದಲ್ಲಿ ಐಶಾರಾಮಿ ವಸ್ತುಗಳನ್ನು ಖರೀದಿಸುವಾಗ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಬಿಲ್‌ ಪಡೆದುಕೊಳ್ಳಬೇಕೆಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಎಸ್‌.ಜೆ.ಕೃಷ್ಣ ಸಲಹೆ ನೀಡಿದರು.

ನಗರದ ಮುಡಿಗುಂಡ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯ್ತಿ, ಜಿಲ್ಲಾಡಳಿತ, ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ವಸ್ತುಗಳನ್ನು ಮಾರುಕಟ್ಟೆಗಳಲ್ಲಿ ಖರೀದಿಸುವಾಗ ಎಚ್ಚರವಹಿಸಬೇಕು, ವ್ಯಾಪಾರದಲ್ಲಿ ಮೋಸವಾದಾಗ ವಸ್ತುಗಳ ಖರೀದಿಯಲ್ಲಿ ನಿಮಗೆ ಮೋಸವಾಗಿದ್ರೆ ತಮ್ಮ ಹಕ್ಕುಗಳನ್ನು ಚಲಾಯಿಸಲು ರಶೀದಿ ಇರಲೇಬೇಕು. ಆಗ ವಸ್ತುಗಳು ನಿಷ್ಕ್ರಿಯವಾದಾಗ ಅಂಗಡಿ ಮಾಲಿಕ ನೀಡಿದ ಬಿಲ್‌ನ ಆಧಾರದ ಮೇಲೆ ಗ್ರಾಹಕ ವೇದಿಕೆಯಲ್ಲಿ ದೂರು ಸಲ್ಲಿಸಿ, ನ್ಯಾಯ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು. 

ತೂಕ ಮತ್ತು ಅಳತೆ: ಅಂಗಡಿ ಮತ್ತು ಮಾರುಕಟ್ಟೆಗಳಲ್ಲಿ ಸಾಮಗ್ರಿಗಳನ್ನು ಖರೀದಿಸುವಾಗ ಅದರ ಗುಣಮಟ್ಟ ಮತ್ತು ಅಳತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು. ಅಳತೆಯಲ್ಲಿ ಏರುಪೇರಾದಲ್ಲಿ ಕೂಡಲೇ ಸಂಬಂಧಿಸಿದ ಸರ್ಕಾರಿ ಆಹಾರ ಇಲಾಖೆ ಅಥವಾ ತೂಕ ಮತ್ತು ಅಳತೆ ಇಲಾಖೆ ಅಧಿಕಾರಿಗಳ ಗಮನ ಸೆಳೆಯಬೇಕು ಎಂದು ಹೇಳಿದರು. 

ತೆರಿಗೆ: ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಜಿಎಸ್‌ಟಿ ಜಾರಿಗೆ ತಂದಿದ್ದು, ಇದರಿಂದ ತಪ್ಪಿಸಿಕೊಳ್ಳಲು ಬಿಲ್‌ ಪಡೆಯದೇ ವಸ್ತುಗಳನ್ನು ಖರೀದಿಸಿದಾಗ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಸಲುವಾಗಿ ಗ್ರಾಹಕರು ಕಡ್ಡಾಯವಾಗಿ ಬಿಲ್‌ ಪಡೆದು ಸಾಮಗ್ರಿಗಳ ಖರೀದಿ ಮೂಲಕ ಸರ್ಕಾರಕ್ಕೆ ತೆರಿಗೆ ನೀಡಬೇಕು ಎಂದು ಹೇಳಿದರು.

ಸುಳ್ಳು ಭರವಸೆಗಳಿಗೆ ವ್ಯಾಮೋಹಕ್ಕೆ ಒಳಗಾಗಬಾರದು. ಇದನ್ನು ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರು ಅರ್ಥ ಮಾಡಿಕೊಂಡು ಮಾರುಕಟ್ಟೆಯ ಸಾಮಗ್ರಿಗಳನ್ನು ಖರೀದಿಸುವಂತಾಗಬೇಕು. ಆಗ ಮಾತ್ರ ಗ್ರಾಹಕರ  ಹೋರಾಟ ಸಾರ್ಥಕವಾಗಲಿದೆ ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಡಿ.ಎಸ್‌.ಬಸವರಾಜು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ರೀತಿಯಲ್ಲಿ ಗ್ರಾಹಕರಿಗೆ ಜಾಗೃತಿ ಮೂಡಿಸುತ್ತಿದೆ. ಯಾವುದೇ ವಸ್ತುಗಳನ್ನು ಖರೀದಿಸುವ ವೇಳೆ ತೆರಿಗೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದು.

ರಶೀದಿಯನ್ನು ಕಡ್ಡಾಯವಾಗಿ ಪಡೆದುಕೊಂಡಾಗ ಮಾತ್ರ ಗ್ರಾಹಕರ ದಿನಾಚರಣೆ ಸಾರ್ಥಕವಾಗಲಿದೆ ಎಂದರು. ಪ್ರಧಾನ ಸಿವಿಲ್‌ ನ್ಯಾಯಾಧೀಶ ಟಿ.ಶ್ರೀಕಾಂತ್‌, ಜಿಲ್ಲಾ ಆಹಾರ ಸಹಾಯಕ ನಿರ್ದೇಶಕ ಲಿಂಗರಾಜು, ಸರ್ಕಾರಿ ಐಟಿಐ ಕಾಲೇಜು ಪ್ರಾಂಶುಪಾಲ ಗೋವಿಂದರಾಜು, ಸರ್ಕಾರಿ ಅಭಿಯೋಜಕ ನಾಗೇಶ್‌ ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.