ಉತ್ಪನ್ನ ಖರೀದಿಗೂ ಮುನ್ನ ಪರಿಶೀಲಿಸಿ, ಪ್ರಶ್ನಿಸಿ


Team Udayavani, Mar 17, 2019, 7:43 AM IST

uttpanna.jpg

ಸಂತೆಮರಹಳ್ಳಿ: ತಂತ್ರಜ್ಞಾನ ಯುಗದಲ್ಲಿ ಹೆಚ್ಚು ಗ್ರಾಹಕರು ಮೋಸ ಹೋಗುತ್ತಿದ್ದಾರೆ. ಇದಕ್ಕೆ ನಾವು ಉತ್ಪನ್ನ ಖರೀದಿಗೆ ಮುನ್ನ ಪರಿಶೀಲಿಸಿ, ಪ್ರಶ್ನಿಸುವುದನ್ನು ಕಲಿಯಬೇಕು ಎಂದು ಸಿವಿಲ್‌ ನ್ಯಾಯಾಧೀಶ ಎನ್‌.ಶರತ್‌ಚಂದ್ರ ಸಲಹೆ ನೀಡಿದರು.

ಪಟ್ಟಣದ ಸಿವಿಲ್‌ ಕೋರ್ಟ್‌ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಪೊಲೀಸ್‌ ದೂರು ಪ್ರಾಧಿಕಾರದ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಗ್ರಾಹಕರ ಹಗಲುದರೋಡೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಗ್ರಾಹಕನೂ ಖರೀದಿಯಲ್ಲಿ ಪ್ರಚಾರದ ಭರಾಟೆಗೆ ಜೋತು ಬೀಳದೆ ಗುಣಮಟ್ಟ ಹಾಗೂ ಸರಿಯಾದ ಬೆಲೆಯನ್ನು ಅರಿತುಕೊಳ್ಳಬೇಕು. ಒಂದು ವೇಳೆ ಅವನಿಗೆ ತೊಂದರೆಯಾದಲ್ಲಿ ಗ್ರಾಹಕರ ವ್ಯಾಜ್ಯ ಪರಿಹಾರ ಕೇಂದ್ರದಕ್ಕೆ ನೇರವಾಗಿ ದೂರು ನೀಡಿ ನ್ಯಾಯ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. 

ಪೊಲೀಸ್‌ ಇಲಾಖೆಯಲ್ಲಿ ದೂರುದಾರನಿಗೆ ಇಲಾಖೆಯ ಸಿಬ್ಬಂದಿಯಿಂದಲೇ ಅನೇಕ ಬಾರಿ ಮೋಸ ಮಾಡುವ ಸಂಭವವಿರುತ್ತದೆ. ಅಂತಹ ನೊಂದ ವ್ಯಕ್ತಿಯು ನೇರವಾಗಿ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರನ್ನು ಸಲ್ಲಿಸಬಹುದು. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವಿನ ಕೊರತೆ ಹೆಚ್ಚಾಗಿದೆ. ಈ ಬಗ್ಗೆ ಜ್ಞಾನ ಬೆಳೆಸಿಕೊಳ್ಳಬೇಕು. ಆದರೆ, ವಿನಾ ಕಾರಣ ವೈಯಕ್ತಿಕ ಕಾರಣಗಳಿಗೆ ಇದರ ದುರುಪಯೋಗ ಮಾಡಿಕೊಳ್ಳಬಾರದು ಎಂದರು.

ವಿತರಕ ಹಾಗೂ ವರ್ತಕರಿಂದ ಮೋಸ: ವಕೀಲ ಬಿ.ಎಂ.ಮಹದೇವಸ್ವಾಮಿ ಮಾತನಾಡಿ, ದೇಶದಲ್ಲಿ ಶೇ.70 ರೈತರೇ ಇದ್ದಾರೆ. ಇಲ್ಲಿ ಇವರೇ ಉತ್ಪಾದಕರಾಗಿದ್ದಾರೆ. ಇವರು ಉತ್ಪಾದಿಸಿ ವಸ್ತುಗಳನ್ನು ಬಳಕೆದಾರ ಖರೀದಿ ಮಾಡಿ ವಸ್ತುಗಳನ್ನು ಉತ್ಪಾದಿಸುತ್ತಾನೆ. ಇವನ ಉತ್ಪನ್ನವನ್ನು ವಿತರಕನು ವರ್ತಕನ ಮೂಲಕ ಮಾರಾಟ ಮಾಡುತ್ತಾನೆ.

ಆದರೆ, ಇವರಿಬ್ಬರಿಂದಲೇ ಗ್ರಾಹಕರಿಗೆ ಹೆಚ್ಚು ಮೋಸವಾಗುತ್ತದೆ. ಹಾಗಾಗಿ ಗ್ರಾಹಕ ಸದಾ ಎಚ್ಚರಿಕೆಯಿಂದ ಇರಬೇಕು ಎಂದು ವಿವರಿಸಿದರು. ಗರಿಷ್ಠ ಮಾರಾಟ ಬೆಲೆಯಲ್ಲೂ ಚೌಕಾಸಿ ಮಾಡುವುದನ್ನು ಕಲಿಯಬೇಕು. ಯಾವುದೇ ಕಾರಣಕ್ಕೂ ರಸೀದಿ ಇಲ್ಲದೆ ವಸ್ತುಗಳನ್ನು ಖರೀದಿಸಬಾರದು.

ಅವನಿಗೆ ಮೋಸವಾದಲ್ಲಿ 5 ಲಕ್ಷ ರೂ. ಒಳಗಿನ ವ್ಯಾಜ್ಯವನ್ನು ಜಿಲ್ಲಾ ಗ್ರಾಹಕರ ವೇದಿಕೆ, 5 ಲಕ್ಷ ರೂ.ಗೂ ಹೆಚ್ಚು 20 ಲಕ್ಷ ರೂ.ಗಳಿಗಿಂತ ಕಡಿಮೆ ಮೊತ್ತದ ವ್ಯಾಜ್ಯಗಳನ್ನು ರಾಜ್ಯ ಗ್ರಾಹಕರ ವೇದಿಕೆ ಹಾಗೂ 20 ಲಕ್ಷ ರೂ. ಗಳಿಗಿಂತ ಹೆಚ್ಚಿನ ಮೊತ್ತದ ಹಣದ ಪರಿಹಾರಕ್ಕಾಗಿ ರಾಷ್ಟ್ರೀಯ ಗ್ರಾಹಕರ ಆಯೋಗದ ಮೂಲಕ ಪರಿಹಾರ ಪಡೆದುಕೊಳ್ಳಲು ಅವಕಾಶವಿದೆ. ಇದರಲ್ಲಿ ನೇರವಾಗಿ ಗ್ರಾಹಕನೇ ದೂರು ಸಲ್ಲಿಸುವ ವಿಶೇಷ ಅವಕಾಶವಿದೆ.

ಇಲ್ಲಿ ಹೆಚ್ಚು ವಿಳಂಬಲ್ಲದೆ ನ್ಯಾಯ ಲಭಿಸುತ್ತದೆ. ಹಾಗಾಗಿ ನಾವು ಖರೀದಿ ಮಾಡುವ ಪ್ರತಿಯೊಂದು ವಸ್ತುಗಳಿಗೂ ನಿಗದಿತ ದಾಖಲೆಗಳನ್ನು ಇಟ್ಟುಕೊಳ್ಳಬೇಕೆಂದು ಸಲಹೆ ನೀಡಿದರು. ವಕೀಲ ಸಂಘದ ಅಧ್ಯಕ್ಷ ಕೆ.ಬಿ.ಶಶಿಧರ್‌, ವಕೀಲ ಎಂ.ಮಾದೇಶ್‌ ಮಾತನಾಡಿದರು. ವಕೀಲ ಸಂಘದ ಪ್ರತಿಮಾದೇವಿ, ಕಾಂತರಾಜು, ಎಂ.ನಾಗರಾಜು, ಸಂಪತ್ತು, ಕುಮಾರಸ್ವಾಮಿ, ಮಂಜುಳಾ, ವಿನಾಯಕ, ರಾಜೇಶ್‌, ಹರಿಶ್ಚಂದ್ರ, ಗುರು, ರಂಗಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.