ಧ್ರುವನಾರಾಯಣ ಜತೆ ಒಳ ಒಪ್ಪಂದ ಇಲ್ಲ


Team Udayavani, Mar 18, 2019, 7:15 AM IST

chamaraja.jpg

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಹೇಶಣ್ಣ, ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಧ್ರುವನಾರಾಯಣ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾತಾಡುತ್ತಾರೆ. ಹೀಗೆ ಮಾತಾಡುವವರು ಅನ್ಯಾಯಕಾರರು. ಕಾಂಗ್ರೆಸ್‌ ಜೊತೆ ಒಪ್ಪಂದವೇ? ಈ ಗುಮಾನಿ ನಂಬಬೇಡಿ. ಬಿಎಸ್‌ಪಿ ಚಳವಳಿಗೆ ದ್ರೋಹ ಮಾಡೋದು ಒಂದೇ. ನನ್ನ ತಾಯಿಗೆ ದ್ರೋಹ ಮಾಡೋದು ಒಂದೇ ಎಂದು ಶಾಸಕ ಎನ್‌. ಮಹೇಶ್‌ ಹೇಳಿದರು.

ನಗರದ ತಾಲೂಕು ಕಚೇರಿ ಪಕ್ಕದ ಮೈದಾನದಲ್ಲಿ ಭಾನುವಾರ  ಆಯೋಜಿಸಲಾಗಿದ್ದ ಬಿಎಸ್‌ಪಿ ಕಾರ್ಯಕರ್ತರ ಸಮಾವೇಶ ಹಾಗೂ ಕಾನ್ಶಿರಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾಟ್ಸಾಪ್‌, ಫೇಸ್‌ಬುಕ್‌ನಲ್ಲಿ ಏನೇನೋ ಬರೆದುಕೊಳ್ಳುತ್ತಾರೆ, ಬರೆದುಕೊಳ್ಳಲಿ. ಆನೆ ಮುಂದೆ ಹೋಗುತ್ತಿದ್ದರೆ ನಾಯಿ ಬೊಗಳುತ್ತದೆ.

ಬೊಗಳಿಕೊಳ್ಳಲಿ ಎಂದು ಅವರು ಕಿಡಿಕಾರಿದರು. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ಅವರನ್ನು ಗೆಲ್ಲಿಸುವ ಕೆಲಸ ಮಾಡೋಣ. ಕೊಳ್ಳೇಗಾಲ ವಿಧಾನಸಭೆಯಲ್ಲಿ ಗೆಲ್ಲಿಸಿದಂತೆ ಲೋಕಸಭಾ ಕ್ಷೇತ್ರದಲ್ಲೂ ಬಿಎಸ್‌ಪಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನ: ಕಾಂಗ್ರೆಸ್‌ಗಿಂತ 5 ಜನ ಹೆಚ್ಚು ಎಂಪಿಗಳು ಬಿಎಸ್‌ಪಿಯಿಂದ ಗೆಲ್ಲುತ್ತಾರೆ. ಈ ಬಾರಿ ಕಾಂಗ್ರೆಸ್‌ 60 ಸ್ಥಾನ ದಾಟಲ್ಲ. ಬಿಎಸ್‌ಪಿ 65 ಎಂಪಿ ಸ್ಥಾನ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಎಂಪಿಗಳನ್ನು ಗೆಲ್ಲಿಸುತ್ತೇವೆ. ಮೈಸೂರು-ಹಾಸನವನ್ನೂ ಗೆಲ್ಲಿಸಲು ಯತ್ನಿಸುತ್ತಿದ್ದೇವೆ. ಒಳೇಟು ನೀಡುತ್ತೇವೆ ಎಂದು  ಮಹೇಶ್‌ ತಿಳಿಸಿದರು.

ನಮಗೆ 37 ಲಕ್ಷ ರೂ. ಸಾಕು: ಚುನಾವಣಾ ಆಯೋಗ, ಒಬ್ಬ ಲೋಕಸಭಾ ಅಭ್ಯರ್ಥಿ 70 ಲಕ್ಷ ರೂ. ಖರ್ಚು ಮಾಡಬಹುದು ಎಂದು ಹೇಳಿದೆ. ಆದರೆ ಬಿಎಸ್‌ಪಿ ಅಭ್ಯರ್ಥಿಗೆ  ಬೇಕಾಗಿರುವುದು 37 ಲಕ್ಷ ರೂ. ಮಾತ್ರ ಎಂದು ಶಾಸಕ ಎನ್‌. ಮಹೇಶ್‌ ಹೇಳಿ ಪಕ್ಷದ ಖರ್ಚಿನ ವಿವರ ನೀಡಿದರು.

18.50 ಲಕ್ಷ ರೂ. ಬೂತ್‌ ಖರ್ಚು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ 1852 ಬೂತ್‌ಗಳಿವೆ. ಒಂದೊಂದು ಬೂತ್‌ಗೆ ಖರ್ಚಿಗಾಗಿ ಕಾರ್ಯಕರ್ತರಿಗೆ 1 ಸಾವಿರ ಕೊಡುತ್ತೇವೆ. ಇನ್ನುಳಿದ  18.50 ಲಕ್ಷ ರೂ. ಕಾರು, ಬಾವುಟ, ಇತ್ಯಾದಿ ಪ್ರಚಾರಕ್ಕೆ ಬಳಸಲಾಗುವುದು. 37 ಲಕ್ಷ ರೂ.ಗಳಲ್ಲಿ ನಾವು ಚುನಾವಣೆ ಗೆಲ್ಲಬಹುದು ಎಂದು ಮಹೇಶ್‌ ಕಾರ್ಯಕರ್ತರಿಗೆ ಹೇಳಿದರು.

ಕಿಸಾನ್‌ ಸಮ್ಮಾನ್‌ ಮೋಸದ ಯೋಜನೆ: ಕಿಸಾನ್‌ ಸಮ್ಮಾನ್‌ ಎಂಬುದು  ಮೋಸದ ಯೋಜನೆಯಾಗಿದೆ. ಈ ಯೋಜನೆಯಲ್ಲಿ ವರ್ಷಕ್ಕೆ 6 ಸಾವಿರ ರೂ. ಕೊಡುತ್ತಾರಂತೆ. ಮೂರು ಕಂತಿನಲ್ಲಿ 2 ಸಾವಿರ ರೂ. ನೀಡಲಾಗುತ್ತದಂತೆ. ನರೇಂದ್ರಮೋದಿಯವರಿಗೆ ಇದನ್ನು ಹೇಳಿಕೊಟ್ಟವರು ಕಾಂಗ್ರೆಸ್‌ನವರು.

ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ನಿಗಮಗಳನ್ನು ಬಳಸಿಕೊಂಡು 15 ಸಾವಿರದಿಂದ 30 ಸಾವಿರ ರೂ. ಸಾಲವನ್ನು ಮತದಾರರಿಗೆ ಕೊಡಿಸಿದರು. ಒಂದು ಮನೆಗೆ 30 ಸಾವಿರ ರೂ. ನೀಡಿದರೆ ಅವರು ಓಟು ಯಾರಿಗೆ ಹಾಕ್ತಾರೆ?

ಇದನ್ನು ನೋಡಿಕೊಂಡು ಮೋದಿಯವರು ಚುನಾವಣೆ ಸಂದರ್ಭದಲ್ಲಿ ರೈತರ ಖಾತೆಗೆ 2 ಸಾವಿರ ರೂ. ಹಾಕುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಕೊಟ್ಟರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಹೀಗೆ ಯೋಜನೆಯ ಹೆಸರಿನಲ್ಲಿ ಹಣ ಹಾಕಿದರೆ ಸಮಸ್ಯೆಯಿಲ್ಲ ಎಂಬ ಕಾರಣಕ್ಕೆ  ರೈತರ ಖಾತೆಗೆ 2 ಸಾವಿರ ರೂ. ಹಾಕುತ್ತಿದ್ದಾರೆ ಎಂದು ಮಹೇಶ್‌ ಟೀಕಿಸಿದರು. 

ಟಾಪ್ ನ್ಯೂಸ್

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.