ಮೊದಲ ದಿನದ ಮುಷರಕ್ಕೆ ಗ್ರಾಹಕ ಸುಸ್ತು


Team Udayavani, May 31, 2018, 1:08 PM IST

chikk-2.jpg

ಚಿಕ್ಕಬಳ್ಳಾಪುರ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ದೇಶದ್ಯಾಂತ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ನೌಕರರು ನಡೆಸುತ್ತಿರುವ ಎರಡು ದಿನಗಳ ಮುಷ್ಕರದ ಬಿಸಿ ಜಿಲ್ಲೆಯಲ್ಲಿ ಮೊದಲ ದಿನವೇ
ಗ್ರಾಹಕರಿಗೆ ತಟ್ಟಿದೆ.

 ಅಖೀಲ ಭಾರತ ಬ್ಯಾಂಕ್‌ ನೌಕರರ ಸಂಘ ಕೈಗೊಂಡಿರುವ ಎರಡು ದಿನಗಳ ಮುಷ್ಕರ ಬೆಂಬಲಿಸಿ ಜಿಲ್ಲೆಯಲ್ಲಿನ ರಾಷ್ಟ್ರೀಕೃತ ಎಲ್ಲಾ ಬ್ಯಾಂಕುಗಳು ಬುಧವಾರ ಕಾರ್ಯ ನಿರ್ವಹಿಸದೇ ಬಾಗಿಲು ಬಂದ್‌ ಮಾಡಿದ್ದ ರಿಂದ ಗ್ರಾಹಕರಿಗೆ ಅಗತ್ಯವಾದ ಬ್ಯಾಂಕ್‌ ಸೇವೆಗಳು ಲಭ್ಯವಾಗದೇ ವಾಣಿಜ್ಯ ವಹಿವಾಟುಗಳಿಗೆ ಹಣ ಹೊಂದಿಸಿಕೊಳ್ಳಲು ಜಿಲ್ಲೆಯ ಜನತೆ ಪರದಾಡುವಂತಾಯಿತು.

ವ್ಯಾಪಾರಕ್ಕೆ ಹೊಡೆತ: ಬ್ಯಾಂಕ್‌ ಮುಷ್ಕರದ ಬಿಸಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ, ಚಿಂತಾ ಮಣಿ, ಗೌರಿಬಿದನೂರು ತಾಲೂಕುಗಳಲ್ಲಿ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಈ ಮೂರು ತಾಲೂಕುಗಳಲ್ಲಿ ಪ್ರತಿ ನಿತ್ಯ ಕೋಟ್ಯಾಂತರ ರೂ, ವಾಣಿಜ್ಯ ವಹಿವಾಟುಗಳು ನಡೆಯುವುದರಿಂದ ಸಹಜವಾಗಿಯೆ ಬ್ಯಾಂಕ್‌ ಮುಷ್ಕರ ವ್ಯಾಪಾರಸ್ಥರಿಗೆ, ರೈತರಿಗೆ ಸಾಕಷ್ಟು ಹೊಡೆತ ಬಿದ್ದಿದೆ. ಇನ್ನೂ ಮುಷ್ಕರ ಜಿಲ್ಲೆಯ ಕೃಷಿ ಚಟುವಟಿಕೆಗಳಿಗೆ ತಡೆ ಯೊಡ್ಡಿದೆ.

ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟದಲ್ಲಿ ರೇಷ್ಮೆಗೂಡು ಖರೀದಿಸುವ ರೀಲರ್‌ಗಳು ರೇಷ್ಮೆ ಬೆಳೆಗಾರರಿಗೆ ಗೂಡು ಖರೀದಿಸಿ ಹಣ ಕೂಡಲು ಬ್ಯಾಂಕ್‌ ಮುಷ್ಕರದ ನೆಪವೊಡ್ಡುತ್ತಿದ್ದಾರೆ. ಇದರಿಂದ ರೇಷ್ಮೆ ಬೆಳೆಗಾರರು ಕೂಡ ಕೈನಲ್ಲಿ ಕಾಸು ನೋಡಿ ದಂತಾಗಿದೆ. ಸದ್ಯ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆ ಗಳು ಚುರುಕು ಗೊಂಡಿದ್ದು ಅದಕ್ಕಾಗಿ ಬ್ಯಾಂಕಿನಲ್ಲಿ ತಮ್ಮ ಹಣವನ್ನೇ ಬಳಸಿ ರೈತರು ಬಿತ್ತನೆಬೀಜ, ರಸಗೊಬ್ಬರ ಖರೀದಿಗೆ ಕಾಸಿಲ್ಲದ ಪರಿಸ್ಥಿತಿ ಒದಗಿದೆ. ಶಾಲೆಗಳಿಗೆ ಡೊನೇಷನ್‌, ಶುಲ್ಕ ಪಾವತಿಗೂ ಸಾಮಾನ್ಯವರ್ಗಕ್ಕೆ ತೊಡಕಾಗಿದೆ.

ವಾಪಸ್ಸು ಹೋದರು!: ಜಿಲ್ಲೆಯ ಗ್ರಾಮೀಣ ಜನತೆ ಬ್ಯಾಂಕ್‌ ಮುಷ್ಕರದ ಅರಿವು ಇಲ್ಲದೇ ಬುಧವಾರ ಬ್ಯಾಂಕ್‌ಗಳ ಕಡೆ ಆಗಮಿಸಿ ಬಳಿಕ ಬಾಗಿಲು ಮುಚ್ಚಿದ್ದನ್ನು ನೋಡಿಕೊಂಡು ವಾಪಸ್ಸು ತೆರಳುತ್ತಿದ್ದ ದೃಶ್ಯಗಳು ಸಾಮಾನ್ಯ ವಾಗಿತ್ತು. ಸ್ತ್ರೀಶಕ್ತಿ ಸಂಘಗಳ ಮಹಿಳೆಯರು ಸಹ ತಮ್ಮ ಸಂಘಗಳ ಉಳಿತಾಯದ ಹಣ ಪಾವತಿಸಲು ಆಗಮಿಸಿ ಮುಷ್ಕರ
ನಡೆಯುತ್ತಿರುವುದನ್ನು ತಿಳಿದು ವಾಪಸ್‌ ತೆರಳಿದರು. ಸದಾ ಗ್ರಾಹಕರ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಬ್ಯಾಂಕ್‌ಗಳು ಮುಷ್ಕರದಿಂದ ಅಕ್ಷರಃ ಬಿಕೋ ಎನ್ನುವಂತಿತ್ತು. ಕೆಲವು ಬ್ಯಾಂಕ್‌ಗಳ ಮುಂದೆ ಮುಷ್ಕರದ ಸೂಚನಾ ಫ‌ಲಕಗಳಿದ್ದರೆ
ಕೆಲವು ಬ್ಯಾಂಕ್‌ಗಳ ಮುಂದೆ ಸೂಚನಾ ಫ‌ಲಕಗಳು ಇರದೇ ಗ್ರಾಹಕರು, ಸಾರ್ವಜನಿಕರು ಗೊಂದಲಕ್ಕೀಡಾದರು.

ಬಾಗಿಲು ಮುಚ್ಚಿ ಕಾರ್ಯ: ಅಖೀಲ ಭಾರತ ಬ್ಯಾಂಕ್‌ ನೌಕರರ ಸಂಘ ಕೆರೆ ನೀಡಿದ್ದ ಎರಡು ದಿನಗಳ ಬ್ಯಾಂಕ್‌ ಮುಷ್ಕರಕ್ಕೆ ಜಿಲ್ಲಾದ್ಯಂತ ಉತ್ತಮ ಬೆಂಬಲ ವ್ಯಕ್ತವಾದರೂ ಕೆಲವು ಬ್ಯಾಂಕ್‌ಗಳ ಅಧಿಕಾರಿ, ಸಿಬ್ಬಂದಿ ಮಾತ್ರ ಬ್ಯಾಂಕ್‌ಗಳನ್ನು ಮುಚ್ಚಿ ಕೊಂಡು ಒಳಗೆ ಕೆಲಸ ಮಾಡಿದ ದೃಶ್ಯಗಳು ಜಿಲ್ಲಾ ಕೇಂದ್ರದಲ್ಲಿ ಕಂಡು ಬಂತು. ನಗರದ ಬಿಬಿ ರಸ್ತೆ ಯಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಮುಷ್ಕರದ ನಡುವೆಯು ಅಧಿಕಾರಿಗಳು ಬಾಗಿಲು ಬಂದ್‌ ಮಾಡಿ ಒಳಗೆ ಕೆಲಸ ನಿರ್ವಹಿಸಿದರು. 

ಮುಷ್ಕರ ಇಂದೂ ಮುಂದುವರಿಕೆ ಎರಡು ದಿನಗಳ ಬ್ಯಾಂಕ್‌ ಮುಷ್ಕರ ಜಿಲ್ಲೆಯಲ್ಲಿ ಗುರುವಾರವು ಸಹ ಮುಂದುವರೆಯಲಿರುವುದರಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಬರೋ ಬ್ಬರಿ 23 ಕ್ಕೂ ಹೆಚ್ಚು ರಾಷ್ಟ್ರೀಕೃತ ಬ್ಯಾಂಕ್‌ಗಳಿದ್ದು 167 ಕ್ಕೂ ಹೆಚ್ಚು ಉಪ ಶಾಖೆಗಳು ಇವೆ. ನಿತ್ಯ ಸಹಸ್ರಾರು ಗ್ರಾಹಕರು ಬ್ಯಾಂಕ್‌ಗಳ ಸೇವೆಯನ್ನು ಅಲಂಬಿಸಿದ್ದಾರೆ. ಇದರಿಂದ ಬ್ಯಾಂಕ್‌ ಮುಷ್ಕರ ಸಹಜವಾಗಿಯೆ ಜಿಲ್ಲೆಯ ಜನತೆ ಪರದಾಡುವಂತಾಗಿದೆ. ಜಿಲ್ಲೆಯ ಹಲವು ಎಟಿಎಂ ಕೇಂದ್ರಗಳಲ್ಲಿ ಬುಧವಾರವೇ ಹಣ ಖಾಲಿಯಾದ ಕಾರಣ ಗ್ರಾಹಕರಿಗೆ ತೊಡಕಾಗಿದೆ.

ಬ್ಯಾಂಕ್‌ಗಳಮುಷ್ಕರದ ಹೈಲೆಟ್ಸ್‌…„ ಬ್ಯಾಂಕ್‌ ಮುಷ್ಕರಕ್ಕೆ ಹೈರಾಣದ ಗ್ರಾಹಕರು „ ಎಟಿಎಂ ಕೇಂದ್ರಗಳಲ್ಲಿ ಹಣಕ್ಕೆ ಬರ ವೇತನ ಪರಿಷ್ಕರಣೆಗೆ ನೌಕರರ ಪಟ್ಟು „ ಇಂದು ಸಹ ಮುಷ್ಕರ ಮುಂದುವರೆರಿಕೆ „ ಇಂದು ಸಹ ಮುಷ್ಕರ ಮುಂದುವರಿಕೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.