ಮೈತ್ರಿ ಸರ್ಕಾರ ರಚನೆ ಗುಟ್ಟು ಅರ್ಥವಾಗುತ್ತಿಲ್ಲ: ಸುಧಾಕರ್‌


Team Udayavani, Jun 21, 2018, 11:17 AM IST

chikkaballapura.jpg

ಚಿಕ್ಕಬಳ್ಳಾಪುರ: ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿರುವ ಕುಮಾರಸ್ವಾಮಿ ಅದೃಷ್ಟದ ರಾಜಕಾರಣಿಯಾಗಿದ್ದಾರೆ. ಆದರೆ ರಾಜ್ಯದಲ್ಲಿ ಅತಿ ಕಡಿಮೆ ಸೀಟು ಪಡೆದಿರುವ ಜೆಡಿಎಸ್‌ನೊಂದಿಗೆ ನಮ್ಮ ಪಕ್ಷ ಮೈತ್ರಿ ಸರ್ಕಾರ ರಚನೆ ಮಾಡಿರುವ ಗುಟ್ಟು ನನಗೆ ಇನ್ನೂ ಅರ್ಥವಾಗಿಲ್ಲ. ಅದರ ಹುಡುಕಾಟದಲ್ಲಿ ಇದ್ದೇನೆ
ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ತಾಲೂಕಿನ ಸುದ್ದಹಳ್ಳಿಯಲ್ಲಿ ಬುಧವಾರ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಕೋಚಿಮುಲ್‌ ನೆರವಿನೊಂದಿಗೆ 10.50 ಲಕ್ಷ ರೂ, ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿರುವ ಅಮೃತ ಭವನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ನಮಗೆ 35 ಸೀಟು ಬಂದಿವೆ. ನಿಮ್ಮ ಪಕ್ಷದವರೇ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನಮ್ಮ ಪಕ್ಷದ ನಾಯಕರಿಗೆ ಹೇಳಿದ್ದರಂತೆ. ಆದರೂ ನಮ್ಮ ಪಕ್ಷದ ನಾಯಕರು ಜೆಡಿಎಸ್‌ ಪಕ್ಷಕ್ಕೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದಾರೆ. ನನಗೆ ಇಂದಿಗೂ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಗ ಗುಟ್ಟು ತಿಳಿಯುತ್ತಿಲ್ಲ ಎಂದರು.

ಹಿಂಬಾಗಿಲ ಓಡಾಟ: ರಾಜ್ಯದ ಸಮ್ಮಿಶ್ರ ಸರ್ಕಾರ ಒಳ್ಳೆ ಆಡಳಿತ ನೀಡುವ ಭರವಸೆ ನನಗಿದೆ. ಜಿಲ್ಲೆಯ
ಅಭಿವೃದ್ಧಿಗೂ ಸಂಪೂರ್ಣ ಸಹಕಾರ ನೀಡುವುದಾಗಿ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ನಮ್ಮ
ಸರ್ಕಾರ ಇದ್ದಾಗ ಎಲ್ಲಾ ಕೆಲಸ ಕಾರ್ಯಗಳಿಗೆ ಮುಂಬಾಗಲಿನಿಂದ ಬಂದು ಹೋಗುತ್ತಿದ್ದವು. ಈಗ
ಹಿಂಬಾಗಲಿಂದ ಬಂದು ಹೋಗಬೇಕಿದೆ. ಆದರೂ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದ ಸಮನ್ವಯ
ಸಮಿತಿ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿರುವುದರಿಂದ ಮೈತ್ರಿ ಸರ್ಕಾರ ಸುಗಮವಾಗಿ ನಿರೀಕ್ಷೆಯಂತೆ ಉತ್ತಮ ಕೆಲಸಗಳನ್ನು ಮಾಡುವ ಭರವಸೆ ನನಗಿದೆ ಎಂದರು.

ಬೇಸರ: ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಜನಪರ ಆಡಳಿತ ನೀಡಿತು. ಹಿಂದೆ ಯಾವ ಸರ್ಕಾರ, ಸಿಎಂ ಕೊಡದಷ್ಟು ಸಾಮಾಜಿಕ ನ್ಯಾಯಕ್ಕೆ ಸಿದ್ದರಾಮಯ್ಯ ಒತ್ತು ಕೊಟ್ಟರು. ಆದರೂ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಪಕ್ಷದ ಕೈ ಹಿಡಿಯಲಿಲ್ಲ. ಅನೇಕ ಉತ್ತಮ ಕಾರ್ಯಕ್ರಮಗಳ ಬಳಿಕವೂ ಕಳೆದ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋತಿದ್ದು ಏಕೆ ಎಂದು ನನಗೂ ಇನ್ನೂ ಅರ್ಥ ಮಾಡಿಕೊಳ್ಳಲಿಕ್ಕೆ ಆಗಲಿಲ್ಲ ಎಂದು ಸುಧಾಕರ್‌ ತೀವ್ರ ಬೇಸರ ವ್ಯಕ್ತಪಡಿಸಿದರು.

ಹೈನುಗಾರಿಕೆಗೆ ಒತ್ತು: ಇಂದು ಉನ್ನತ ಶಿಕ್ಷಣ ಪಡೆದವರೂ ಕೂಡ ಹೈನುಗಾರಿಕೆ ಕಡೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಕನಿಷ್ಠ ಎರಡು ಸೀಮೆ ಹಸು ಇಟ್ಟುಕೊಂಡರೆ ತಿಂಗಳಿಗೆ 15 ರಿಂದ 20 ಸಾವಿರ ರೂ, ಸಂಪಾದನೆ ಮಾಡಬಹುದು. ಹೈನುಗಾರಿಕೆ ರೈತನಿಗೆ ಸ್ವಾವಲಂಬಿ ಜತೆಗೆ ಸ್ವಾಭಿಮಾನದ ಬದುಕು ಕಲ್ಪಿಸಿ ಕೊಟ್ಟಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೈತರು ಉತ್ಪಾದಿಸುವ ಪ್ರತಿ ಲೀ.ಹಾಲಿಗೆ 5 ರೂ, ಪ್ರೋತ್ಸಾಹ ಧನ ನೀಡಿ ರೈತರಿಗೆ ಉತ್ತೇಜನ ನೀಡಿದರು. ಆದೇ ರೀತಿ ಮುಂದಿನ ದಿನಗಳಲ್ಲಿ ಹೈನುಗಾರಿಕೆಗೆ ಹೆಚ್ಚು ಪ್ರೋತ್ಸಾಹ, ಬೆಂಬಲ ನೀಡಲಾಗುವುದೆಂದ ಶಾಸಕ ಡಾ.ಕೆ.ಸುಧಾಕರ್‌. ಸದ್ಯ ತಾಲೂಕಿಲ್ಲಿ 160 ಹಾಲು ಉತ್ಪಾದಕರ ಸಹಕಾರ ಸಂಘಗಳು ಇವೆ. ಅವು 200 ದಾಟಿದ ನಂತರ ಕ್ಷೇತ್ರಕ್ಕೆ ಸಂಬಂದಪಟ್ಟ ಇಲಾಖೆ ಸಚಿವರನ್ನು ಕರೆದು ಬೃಹತ್‌ ಕಾರ್ಯಕ್ರಮ ರೂಪಿಸಲಾಗುವುದೆಂದರು.

ಇದೇ ವೇಳೆ ಕೋಚಿಮುಲ್‌ ನಿರ್ದೇಶಕ ಕೆ.ವಿ. ನಾಗರಾಜ್‌, ಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷೆ ಲಲಿತಾ, ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ, ಮಿಲ್ಟನ್‌ ವೆಂಕಟೇಶ್‌, ಸುಧಾ ವೆಂಕಟೇಶ್‌, ಶಂಕರ್‌, ನಾರಾಯಣಸ್ವಾಮಿ, ಮಂಜುನಾಥ, ಕೋಚಿಮುಲ್‌ ಅಧಿಕಾರಿಗಳಾದ ಡಾ. ವಿ.ಎಂ.ರಾಜು. ಡಾ.ಕೆ.ಜಿ. ಈಶ್ವರಯ್ಯ ಸೇರಿದಂತೆ ಇತರರು ಹಾಜರಿದ್ದರು. 

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಆಗುವುದು ಖಚಿತ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

ಡಾ.ಕೆ.ಸುಧಾಕರ್‌, ಶಾಸಕ. 

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.