22 ಕೋಟಿ ವೆಚ್ಚದ ಜಿಲ್ಲಾಸ್ಪತ್ರೆಯಲ್ಲಿ ಸಿಗಲ್ಲ ಬಿಸಿನೀರು!


Team Udayavani, Jul 12, 2018, 3:33 PM IST

chikk-b-3.gif

ಚಿಕ್ಕಬಳ್ಳಾಪುರ: ಜಿಲ್ಲೆಯ ಬಡ ರೋಗಿಗಳ ಪಾಲಿಗೆ ಸ್ವರ್ಗವಾಗಬೇಕಿದ್ದ ಜಿಲ್ಲಾಸ್ಪತ್ರೆ ಉದ್ಘಾಟನೆಗೊಂಡದಾಗಿ
ನಿಂದಲೂ ಒಂದಲ್ಲ ಒಂದು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದು, ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಕನಿಷ್ಠ
ಶುದ್ಧ ಕುಡಿಯುವ ನೀರು ಹಾಗೂ ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ರೋಗಿಗಳು ಹಾಗೂ ಅವರ ಸಂಬಂಧಿ
ಕರು ನಿತ್ಯ ಬಿಸಿ ನೀರಿಗಾಗಿ ಬಾಟಲು ಹಿಡಿದು ಅಕ್ಕಪಕ್ಕದ ಹೋಟೆಲ್‌ಗ‌ಳ ಮುಂದೆ ಕ್ಯೂ ನಿಲ್ಲಬೇಕಾದ ದುಸ್ಥಿತಿ
ಎದುರಾಗಿದೆ.

ಬರೋಬ್ಬರಿ 22 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾಸ್ಪತ್ರೆಯ ಮೇಲೆ ಮೊದಲೇ ಔಷಧಗಾಗಿ ಬಿಳಿ ಚೀಟಿ
ಹಾವಳಿ, ತಜ್ಞ ವೈದ್ಯರ ಕೊರತೆ, ಡಿ ಗ್ರೂಪ್‌ ನೌಕರರ ಲಂಚಕ್ಕೆ ಬೇಡಿಕೆ, ಹೆರಿಗೆ ವಾರ್ಡ್‌ಗಳಲ್ಲಿ ನಾಯಿಗಳ ಕಾಟ, ಆಸ್ಪತ್ರೆ ಸುತ್ತಮುತ್ತಲೂ ನೈರ್ಮಲ್ಯದ ಕೊರತೆ ಜತೆಗೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂಬ ಅಪವಾದ ಇದೆ. ಆದರೆ, ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಹಾಗೂ ಆಸ್ಪತ್ರೆಗೆ ಬರುವ ಹೊರ ರೋಗಿಗಳಿಗೆ ಅಗತ್ಯ ಸಮರ್ಪಕ ಶುದ್ದ ಕುಡಿಯುವ ನೀರು ಹಾಗೂ ಬಿಸಿ ನೀರಿನ ವ್ಯವಸ್ಥೆ ಇಲ್ಲದೇ ರೋಗಿಗಳು ನಿತ್ಯ ಪರದಾಡುವುದು ಸಾಮಾನ್ಯವಾಗಿದೆ.

ನೀರಿಗೆ ಪರದಾಟ: ಜಿಲ್ಲಾಸ್ಪತ್ರೆಯಲ್ಲಿ ನಿತ್ಯ ಹೆರಿಗೆಗೆಂದು ಜಿಲ್ಲೆಯ ದೂರದ ಪ್ರದೇಶಗಳಿಂದ ಬರುವ ಮಹಿಳೆಯರ
ಸಂಖ್ಯೆ ಅಧಿಕವಾಗಿದೆ. ಅದರಲ್ಲೂ ಒಳ ರೋಗಿಗಳಿಗೆ 200 ರಿಂದ 250 ಮಂದಿ ನಿತ್ಯ ಚಿಕಿತ್ಸೆ ಪಡೆಯುತ್ತಾರೆ. ಹೊರ
ರೋಗಿ ಗಳಾಗಿ ನಿತ್ಯ 300 ಕ್ಕೂ ಹೆಚ್ಚು ಸಾರ್ವಜನಿಕರು ಆರೋಗ್ಯ ತಪಾಸಣೆಗೆಂದು ಜಿಲ್ಲಾಸ್ಪತ್ರೆಗೆ ಬಂದು
ಹೋಗುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು ಇಲ್ಲದಿರುವುದು ಮಾತ್ರ ರೋಗಿಗಳಿಗೆ
ತೀವ್ರ ತೊಂದರೆಯಾಗಿ ಪರಿಣಮಿಸಿದೆ. 

ಶಿಶು ಸ್ನಾನಕ್ಕೂ ನೀರಿಲ್ಲ: ಆಸ್ಪತ್ರೆಯಲ್ಲಿ ಹುಟ್ಟುವ ಮಕ್ಕಳಿಗೆ ಸ್ನಾನ ಮಾಡಿಸಲು ಬಿಸಿ ನೀರಿನ ಸೌಲಭ್ಯ
ಇಲ್ಲದಿರುವುದರಿಂದ ಸಂಬಂಧಿಕರು ಬಾಟಲು ಹಿಡಿದು ಹೋಟೆಲ್‌ಗ‌ಳಲ್ಲಿ ಬಿಸಿ ನೀರು ಖರೀದಿಸಿ ಮಕ್ಕಳಿಗೆ ಸ್ನಾನ
ಮಾಡಿಸಬೇಕಿದೆ. ಆಸ್ಪತ್ರೆಯಲ್ಲಿ ಒಂದು ಕಡೆ ಮಾತ್ರ ನೀರಿನಸೌಲಭ್ಯ ಇದ್ದರೂ ಅದು ಶುದ್ಧ ಕುಡಿಯುವ ನೀರು ಅಥವಾ ಇನ್ನಾವುದೋ ಎಂದು ಜನ ಆ ನೀರನ್ನು ಕುಡಿಯಲು ಹಿಂದೇಟು ಹಾಕುತ್ತಿದ್ದಾರೆ. ಅದರಲ್ಲೂ ಇಡೀ ಆಸ್ಪತ್ರೆಗೆ
ಒಂದು ಕಡೆ ನೀರಿನ ಸೌಕರ್ಯ ಕಲ್ಪಿಸಿರುವುದರಿಂದ ಬಹುತೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ
ಇಂತಹ ಕಡೆಗೆ ನೀರು ಸಿಗುತ್ತದೆ ಎಂದು ಮಾಹಿತಿ ಕೂಡ ಇಲ್ಲವಾಗಿದೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳು
ದಿಕ್ಕು ತೋಚದೇ ಕುಡಿಯುವ ನೀರಿಗಾಗಿ ಅಲೆದಾಡುವಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಬಿಸಿ ನೀರುಗಾಗಿಯೇ ಲಕ್ಷಾಂತರ ರೂ. ವೆಚ್ಚದಲ್ಲಿ ಸೋಲಾರ್‌ಗಳನ್ನು ಅಳವಡಿಸಲಾಗದ್ದಿರೂ ಅವು ಆಟಕ್ಕಕ್ಕುಂಟು ಲೆಕ್ಕಕ್ಕಿಲ್ಲ
ಎಂಬಂತಾಗಿದೆ. ಸೋಲಾರ್‌ ಬಳಸದ ಕಾರಣ ಅವು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎನ್ನಲಾಗಿದೆ

 ಬಿಸಿ ನೀರಿಗಾಗಿ ರೋಗಿಗಳ ಸಂಬಂಧಿಕರು ಹೋಟೆಲ್‌ಗಳಿಗೆ ಹೋಗುವುದು ನನ್ನ ಗಮನಕ್ಕೆ ಬಂದಿಲ್ಲ.
ಜಿಲ್ಲಾಸ್ಪತ್ರೆಯಲ್ಲಿ ಬಿಸಿ ನೀರಿಗಾಗಿಯೇ ಸೋಲಾರ್‌ ವ್ಯವಸ್ಥೆ ಅಳವಡಿಸಲಾಗಿದೆ. ರೋಗಿಗಳಿಗೆ ಬಿಸಿ ನೀರು ಕಲ್ಪಿಸುವ ಬಗ್ಗೆ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರ ಜತೆಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆ.
ಡಾ.ಬಿ.ಎಂ.ರವಿಶಂಕರ್‌, ಜಿಲ್ಲಾ ಆರೋಗ್ಯಾಧಿಕಾರಿ

ಸಮರ್ಪಕ ಊಟವೂ ಇಲ್ಲ
ಜಿಲ್ಲಾಸ್ಪತ್ರೆಯು ಮೂಲ ಸೌಕರ್ಯಗಳ ಕೊರತೆಯಿಂದ ಅವ್ಯವಸ್ಥೆಗಳ ಆಗರವಾಗಿದೆ. ರೋಗಿಗಳಿಗೆ ಶುದ್ಧ ಕುಡಿಯುವ ನೀರು, ಬಿಸಿ ನೀರಿನ ವ್ಯವಸ್ಥೆ ಇಲ್ಲ. ಬೆಳಗ್ಗೆ, ರಾತ್ರಿ ಸಮರ್ಪಕವಾಗಿ ತಿಂಡಿ ಕೊಡುವುದಿಲ್ಲ. ಕೊಡುವ ಊಟ ಕೂಡ ಗುಣಮಟ್ಟದಿಂದ ಇರಲ್ಲ. ಮೊಟ್ಟೆ, ಬಾಳೆಹಣ್ಣು ವಿತರಿಸುವುದಿಲ್ಲ. ಆಸ್ಪತ್ರೆಯಲ್ಲಿ ನೀಡುವ ತಿಂಡಿ ಸೇವಿಸಲಾಗದೇ ಬಹಳಷ್ಟು ರೋಗಿಗಳು ಹೋಟೆಲ್‌ಗ‌ಳಲ್ಲಿ ಇಡ್ಲಿ ತಂದು ತಿನ್ನಬೇಕಿದೆ ಎಂದು ರೋಗಿಗಳು ಅಳಲು ತೋಡಿಕೊಂಡಿದ್ದು, ಜಿಲ್ಲಾಧಿಕಾರಿಗಳು ಒಮ್ಮೆ ಜಿಲ್ಲಾಸ್ಪತ್ರೆಗೆ ಬಂದು ಖುದ್ದು ಪರಿಶೀಲನೆ ನಡೆಸಲಿ ಎಂದು ಆಸ್ಪತ್ರೆಯ
ಅವ್ಯವಸ್ಥೆಯಿಂದ ರೋಸಿ ಹೋಗಿರುವ ರೋಗಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ನೀರಿಗೆ ಹೋಟೆಲ್‌ಗೆ ಅಲೆದಾಟ
ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬರುವ ರೋಗಿಗಳು ಹಾಗೂ ಹೆರಿಗೆಗೆ ಬಂದು ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಬಾಣಂತಿಯರು ವೈದ್ಯರ ಸೂಚನೆಯಂತೆ ಬಿಸಿ ನೀರು ಕುಡಿಯಬೇಕು. ಆದರೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಇಲ್ಲದ ಪರಿಣಾಮ ರೋಗಿಗಳ ಸಂಬಂಧಿಕರು ದಿನ ಬೆಳಗಾದರೆ ಆಸ್ಪತ್ರೆಯ ಅಕ್ಕಪಕ್ಕದ
ಹೋಟೆಲ್‌ಗ‌ಳಿಗೆ ಖಾಲಿ ಬಾಟಲು ಹಿಡಿದು ಹೋಗಿ ಹೋಟೆಲ್‌ ಮಾಲಿಕರಿಗೆ 10, 20 ರೂ. ಕೊಟ್ಟು ಬಿಸಿ ನೀರನ್ನು ತರುತ್ತಾರೆ. 

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.