ಬಿದಿರು ಬೆಳೆಸಲು ಪೈಲಟ್‌ ಯೋಜನೆ ಅನುಷ್ಠಾನ


Team Udayavani, Jul 22, 2018, 12:48 PM IST

chikk-1.jpg

ಚಿಕ್ಕಬಳ್ಳಾಪುರ: ಅಂತರ್ಜಲಕ್ಕೆ ಮಾರಕವಾಗಿರುವ ನೀಲಿಗಿರಿ ಮರಗಳನ್ನು ತೆರವುಗೊಳಿಸಿ, ಅದಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ರೈತರಿಗೆ ಹೆಚ್ಚು ಲಾಭದಾಯಕವಾಗಿರುವ ಬಿದಿರನ್ನು ಬೆಳೆಸಲು ಜಿಲ್ಲೆಗೆ ಶೀಘ್ರದಲ್ಲಿ ಪೈಲಟ್‌ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೃಷಿ ಸಚಿವ ಎನ್‌.ಎಚ್‌. ಶಿವಶಂಕರೆಡ್ಡಿ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯ ಕೃಷಿ ಇಲಾಖೆ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿ, ನೀಲಿಗಿರಿ ಮರಗಳು ಜಿಲ್ಲೆಯಲ್ಲಿ ವ್ಯಾಪಕವಾಗಿರುವುದರಿಂದ ಅಂತರ್ಜಲದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನೀಲಿಗಿರಿ ಮರಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ರೈತರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಿ ಬಿದಿರು ಬೆಳೆಸಲು ಉತ್ತೇಜನ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಬಿದಿರು ಮರಗಳು ರೈತರಿಗೆ ಹೆಚ್ಚು ಲಾಭದಾಕಯವಾಗಿವೆ. ವೈಜ್ಞಾನಿಕ ಸಂಶೋಧನೆ ಮೂಲಕ ಅನೇಕ ರೀತಿಯ ಬಿದಿರು ತಳಿಗಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮೂರು ತಿಂಗಳಿಗೆ ಬೆಳೆ ಬರುತ್ತಿವೆ.

ಜಿಲ್ಲೆಯಲ್ಲಿನ ನೀಲಿಗಿರಿ ಮರಗಳನ್ನು ತೆರವುಗೊಳಿಸಿ ಬಿದಿರು ಬೆಳೆಸುವ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹಿಸಲು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ರಾಜ್ಯದಲ್ಲಿ ಪೈಲಟ್‌ ಯೋಜನೆಯಾಗಿ ತೆಗೆದುಕೊಂಡು ಬಿದಿರು ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಈ ಸಂಬಂಧ ಅರಣ್ಯ ಇಲಾಖೆ ನರ್ಸರಿಗಳಲ್ಲಿ ಬಿದಿರು ಸಸಿಗಳನ್ನು ಬೆಳೆಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಭೂ ಸಮೃದ್ಧಿಗೆ ಆದ್ಯತೆ ನೀಡಿ: ಭೂಮಿಯ ಫ‌ಲವತ್ತತೆ ಕಾಪಾಡಬೇಕಿದೆ. ಇದಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಭೂ ಸಮೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸ ಬೇಕು. ಆ ಮೂಲಕ ಮಣ್ಣಿನ ಸವಕಳಿ ತಡೆಯುವುದು, ರೈತರ ಹೊಲಗಳಲ್ಲಿ ಬದುಗಳ ನಿರ್ಮಾಣ, ಜಲ ಮೂಲಗಳ ಸಂರಕ್ಷಣೆಗೆ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿ ಕೊಳ್ಳುವಂತೆ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರೈತ ಕೇಂದ್ರಗಳಿಗೆ ಭೇಟಿ ಕೊಡಿ: ರೈತ ಸಂಪರ್ಕ ಕೇಂದ್ರಗಳು ಕೇವಲ ರೈತರಿಗೆ ರಸಗೊಬ್ಬರ ಅಥವಾ ಬಿತ್ತನೆ ಬೀಜ ವಿತರಣೆಗೆ ಮಾತ್ರ ಸಿಮೀತವಾಗಬಾರದು. ಕೇಂದ್ರಗಳಿಗೆ ತಾಲೂಕು ಮಟ್ಟದಲ್ಲಿರುವ ರೇಷ್ಮೆ, ಪಶು ಸಂಗೋಪಾನೆ, ಹೈನುಗಾರಿಕೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲೆಯ ಕೃಷಿ ವಿಜ್ಞಾನಿಗಳು ಕಾಲಕಾಲಕ್ಕೆ ಭೇಟಿ ನೀಡಬೇಕು. ಇಲಾಖೆಗಳಲ್ಲಿ ಸಿಗುವ ಸಾಲ, ಸೌಲಭ್ಯಗಳ ಬಗ್ಗೆ ರೈತರಿಗೆ ಸಮರ್ಪಕವಾಗಿ ಮಾಹಿತಿ ಒದಗಿಸಬೇಕು. ಸಮಗ್ರ ಕೃಷಿಗೆ ಪೂರಕವಾದ ಮಾಹಿತಿ ನೀಡುವ ಕೇಂದ್ರಗಳಾಗಿ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸಿದಾಗ ರೈತರಿಗೆ ಉಪಯೋಗವಾಗುತ್ತದೆ ಎಂದು ತಿಳಿಸಿದರು.

ಕೃಷಿ ಹೊಂಡಗಳ ನಿರ್ಮಾಣಕ್ಕೆ ಒತ್ತು: ಜಿಲ್ಲಾ ಜಂಟಿ ಕೃಷಿ ನಿದೇರ್ಶಕ ಡಾ.ಕೆ.ಮಲ್ಲಿಕಾರ್ಜುನ್‌ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 11,672 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಈ ವರ್ಷ ಒಟ್ಟು 2,900 ಗುರಿ ಇದೆ. ಈಗಾಗಲೇ 317 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಸಚಿವ ಶಿವಶಂಕರ ರೆಡ್ಡಿ, ಕೃಷಿಹೊಂಡಗಳ ನಿರ್ಮಾಣಕ್ಕೆ ಎಷ್ಟೇ ಬೇಡಿಕೆ ಇದ್ದರೂ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಇತ್ತೀಚಿನ ದಿನಗಳಲ್ಲಿ ಕೃಷಿ ಹೊಂಡಗಳಲ್ಲಿ ಬಿದ್ದು ರೈತರು, ಮಹಿಳೆಯರು, ಮಕ್ಕಳು ಹೆಚ್ಚಿಗೆ ಮೃತ ಪಡುತ್ತಿರುವುದರಿಂದ ಹೊಂಡಗಳ ಸುತ್ತ ಸೋಲಾರ್‌ ತಂತಿ ಬೇಲಿ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಸರ್ಕಾರ ಹನಿ ನೀರಾವರಿ ಯೋಜನೆಯಡಿ ನೀಡುತ್ತಿರುವ ಪೈಪ್‌ಗ್ಳು ಪ್ಲೋರೈಡ್‌ ಪ್ರಮಾಣದ ಹೆಚ್ಚಳದಿಂದ ವರ್ಷ ಕೂಡ ಬಾಳಿಕೆ ಬರುತ್ತಿಲ್ಲ. ಗುಣ ಮಟ್ಟದ ಪೈಪ್‌ಗ್ಳು ವಿತರಿಸಿದರೆ, ರೈತರಿಗೆ ಹೆಚ್ಚಿನ ಲಾಭ ಆಗುತ್ತದೆ ಎಂದು ಕೃಷಿ ಇಲಾಖೆ ಅಧಿಕಾರಿಯೊಬ್ಬರು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಕೂಡಲೇ ಗುಣಮಟ್ಟದ ಪೈಪ್‌ಗ್ಳ ವಿತರಣೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಒಂದೇ ತಾಸಿನಲ್ಲಿ ಪ್ರಗತಿ ಸಭೆ ಮುಕ್ತಾಯ: ಕೃಷಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜಿಪಂ ಸಭಾಂಗಣದಲ್ಲಿ ಶನಿವಾರ ತಮ್ಮದೇ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ ಒಂದೇ ತಾಸಿನಲ್ಲಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯನ್ನು ಮುಗಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಜಿಪಂ ಸದಸ್ಯರು ಕೃಷಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರೂ ಈಗ ಕಾರ್ಯಕ್ರಮಗಳು ಜಾಸ್ತಿ ಇವೆ. ಮುಂದೆ ಸಭೆ ನಡೆಸೋಣ ಎಂದು ಹೇಳಿ ಸಭೆಗೆ ಇತೀಶ್ರೀ ಹಾಡಿದರು. ಇನ್ನೂ ಸಭೆಯಲ್ಲಿ ಸಚಿವರು ಕನ್ನಡಕ್ಕಿಂತ ಹೆಚ್ಚು ಆಂಗ್ಲ ಬಗ್ಗೆ ವ್ಯಾಮೋಹ ತೋರಿದ್ದು, ಗಮನ ಸೆಳೆಯಿತು. ಅಧಿಕಾರಿಗಳು ಕನ್ನಡದಲ್ಲಿ ಮಾತನಾಡಿದರು. ಸಚಿವರು ಮಾತ್ರ ಪದೇ ಪದೇ ಆಂಗ್ಲಭಾಷೆಗೆ ಮೊರೆಹೋದರು.

ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ, ಜಿಪಂ ಅಧ್ಯಕ್ಷ ಹೆಚ್‌.ವಿ. ಮಂಜುನಾಥ, ಉಪಾಧ್ಯಕ್ಷೆ ನಿರ್ಮಲ ಮುನಿರಾಜು, ಕೃಷಿ ಇಲಾಖೆ ಆಯುಕ್ತ ಸತೀಶ್‌, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಗುರುದತ್‌ ಹೆಗ್ಗಡೆ, ಅಪರ ಜಿಲ್ಲಾಧಿಕಾರಿ ಡಾ.ಕೆ.ಎನ್‌. ಅನುರಾಧ, ಜಿಲ್ಲಾ

ಮಳೆ ಕೊರತೆ: ಬಿತ್ತನೆ ಕುಂಠಿತ ಸಭೆ ಆರಂಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ. ಮಲ್ಲಿಕಾರ್ಜುನ್‌, ಜಿಲ್ಲೆಯಲ್ಲಿ ಇದುವರೆಗೂ ನಡೆದಿರುವ ಬಿತ್ತನೆ ಪ್ರಮಾಣದ ಅಂಕಿ, ಅಂಶಗಳನ್ನು ನೀಡಿ ಇಲಾಖೆ ಹೊಂದಿರುವ 1.54 ಲಕ್ಷ ಹೆಕ್ಟೇರ್‌ ಪೈಕಿ ಇದುವರೆಗೂ ಕೇವಲ 58 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಗೊಂಡು ಶೇ.38ರಷ್ಟು ಪ್ರಗತಿ ಸಾಧಿಸಲಾಗಿದೆಯೆಂದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಸಿದಿರುವುದಕ್ಕೆ ಕೃಷಿ ಸಚಿವರು ತೀವ್ರ ಕಳವಳ ವ್ಯಕ್ತಪಡಿಸಿದರು. ಶಿಡ್ಲಘಟ್ಟ ತಾಲೂಕಿನಲ್ಲಿ ಮಳೆ ಪ್ರಮಾಣ ತೀರಾ ಕುಸಿದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು, ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.