ಪ್ರತಿಯೊಬ್ಬರಿಗೂ ಅರ್ಥ ವ್ಯವಸ್ಥೆ ಅರಿವು ಅಗತ್ಯ


Team Udayavani, Jul 31, 2018, 11:55 AM IST

chikk1.jpg

ಚಿಕ್ಕಬಳ್ಳಾಪುರ: ದೇಶ ಎಷ್ಟೇ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿಗೊಂಡರೂ ಆರ್ಥಿಕವಾಗಿ ಸದೃಢಗೊಳ್ಳಬೇಕಾದರೆ ಪ್ರತಿಯೊಬ್ಬರಿಗೂ ದೇಶದ ಅರ್ಥ ವ್ಯವಸ್ಥೆಯ ಅರಿವು ಅಗತ್ಯ. ಹೀಗಾಗಿ ವಿದ್ಯಾರ್ಥಿಗಳನ್ನು ಅರ್ಥಶಾಸ್ತ್ರದ ಅಧ್ಯಯನದ ಕಡೆಗೆ ಹೆಚ್ಚು ಉತ್ತೇಜನಗೊಳಿಸುವ ಕೆಲಸ ವನ್ನು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜನಾರ್ದನ್‌ ತಿಳಿಸಿದರು.

ನಗರದ ಬೆಸ್ಟ್‌ ಪಿಯು ಕಾಲೇಜಿನಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅರ್ಥಶಾಸ್ತ್ರದ ಉಪನ್ಯಾಸಕರಿಗೆ ಅರ್ಥಶಾಸ್ತ್ರ ವಿಷಯಾಧಾರಿತವಾಗಿ ನಡೆದ ಏಳು ದಿನಗಳ ವಿಶೇಷ ಕಾರ್ಯಾಗಾರವನ್ನು ಉದ್ಘಾ ಟಿಸಿದ ಅವರು ಮಾತನಾಡಿ, ದೇಶ ಆರ್ಥಿಕವಾಗಿ ಮೊದಲು ಸದೃಢ ಆದರೆ ಮಾತ್ರ ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ದೇಶದ ಆರ್ಥಿಕ ವ್ಯವಸ್ಥೆ ಆಗುಹೋಗಗಳ ಬಗ್ಗೆ ಚಿಂತನೆ ನಡೆಸಬೇಕು ಎಂದರು.

ಜೀವನೋಪಾಯಕ್ಕೆ ಅರ್ಥಶಾಸ್ತ್ರ ಅನುಕೂಲ: ಬಹಳಷ್ಟು ಮಂದಿಗೆ ಅರ್ಥಶಾಸ್ತ್ರದ ಮಹತ್ವ ಗೊತ್ತಿಲ್ಲ. ದೇಶದ ಅರ್ಥಿಕ ವ್ಯವಸ್ಥೆಗೆ ಆಧಾರವಾಗಿರುವ ಅರ್ಥಶಾಸ್ತ್ರ ಪ್ರತಿಯೊಬ್ಬರಿಗೂ ಜೀವನದ ಪಾಠ ಕಲಿಸುತ್ತದೆ. ಜೀವನದಲ್ಲಿ ಆರ್ಥಿಕ ಶಿಸ್ತು ಇಲ್ಲದೇ ಯಾವುದೇ ವ್ಯಕ್ತಿಯ ಅಥವಾ ಕುಟುಂಬದ ಬೆಳೆವಣಿಗೆ ಆಗಲು ಸಾಧ್ಯವಿಲ್ಲ. ಆರ್ಥಿಕವಾಗಿ ಸ್ವಯಂ ಶಿಸ್ತು ಇಲ್ಲದೇ ಎಷ್ಟೋ ಕುಟುಂಬಗಳು ಇಂದಿಗೂ ಬಡತನದ ಬೇಗುದಿಯಲ್ಲಿ ನರಳಾಡುತ್ತಿವೆ.

ದೇಶದ ಸಮಗ್ರ ಅಭಿವೃದ್ಧಿ ಇಂದು ಅರ್ಥ ವ್ಯವಸ್ಥೆಯ ಮೇಲೆ ನಿಂತಿದೆ. ವಿದ್ಯಾರ್ಥಿಗಳಲ್ಲಿ ಅರ್ಥಶಾಸ್ತ್ರದ ಬಗ್ಗೆ ಆಸಕ್ತಿ ಬೆಳೆಸುವುದು ಅಗತ್ಯವಾಗಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಜೀವನೋಪಾಯಕ್ಕೆ ಅರ್ಥಶಾಸ್ತ್ರ ಹೆಚ್ಚು ಅನುಕೂಲ ಕಲ್ಪಿಸಿಕೊಡುತ್ತದೆ. ಅರ್ಥಶಾಸ್ತ್ರ ಬೋಧನೆ ಸುಲಭವಾದರೂ ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಉಪನ್ಯಾಸಕರು ವಿಶೇಷ ಬೋಧನಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. 

ವಿದ್ಯಾರ್ಥಿಗಳಿಗೆ ಸುಲಭ ಕಲಿಕೆ ಬೇಕು: ಮುಖ್ಯ ಅತಿಥಿಗಳಾಗಿದ್ದ ಗೌರಿಬಿದನೂರಿನ ಅರ್ಚಾಯ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಎಸ್‌. ರಾಜಶೇಖರ್‌ ಮಾತನಾಡಿ, ಮನುಷ್ಯ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕಾದರೆ ಅರ್ಥಶಾಸ್ತ್ರದ ಬಗ್ಗೆ ಕನಿಷ್ಠ ತಿಳುವಳಿಕೆ ಹೊಂದಿರಬೇಕು. ಅರ್ಥಶಾಸ್ತ್ರ ವಿಷಯದಲ್ಲಿ ಉಪನ್ಯಾಸಕರಿಗೆ ಎಷ್ಟೇ ಅನುಭವ ವಿದ್ದರೂ ವಿದ್ಯಾರ್ಥಿಗಳಿಗೆ ಸುಲಭವಾಗಿ ಕಲಿಸುವ ಅಗತ್ಯವಿದೆ. ಇದರಿಂದ ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವ್ಯವಹಾರ ಅಧ್ಯಯನ ಹಾಗೂ ಅರ್ಥಶಾಸ್ತ್ರ ಅಧ್ಯಯನಕ್ಕೆ ದೇಶದಲ್ಲಿ ಸಾಕಷ್ಟು ಮಹತ್ವವಿದ್ದು, ವಿದ್ಯಾರ್ಥಿಗಳು ಅರ್ಥಶಾಸ್ತ್ರ ಅಧ್ಯಯನಕ್ಕೆ ವಿಶೇಷ ಆದ್ಯತೆ ನೀಡುವ ಮೂಲಕ ತಮ್ಮ ಆರ್ಥಿಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಸ್ಟ್‌ ಪಿಯು ಕಾಲೇಜಿನ ಪ್ರಾಂಶುಪಾಲ ಪಿ.ರಘುನಾಥ ವಹಿಸಿದ್ದರು. ವೇದಿಕೆಯಲ್ಲಿ ಚಿಕ್ಕಬಳ್ಳಾಪುರ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಎಸ್‌.ಎನ್‌.ಮುಂಜುನಾಥ್‌, ಶಿಡ್ಲಘಟ್ಟದ ಮಳ್ಳೂರು ವಿವೇಕಾನಂದ ಪಿಯು ಕಾಲೇಜಿನ ಸಹ ಸಂಯೋಜಕ ಜಿ.ಎಂ. ಚಂದ್ರಕುಮಾರ್‌, ಗೌರಿಬಿದನೂರು ಸರ್ಕಾರಿ ಪಿಯು ಕಾಲೇಜಿನ ಸಂಯೋಜಕ ಆರ್‌.ಆದಿಶೇಷರಾವ್‌, ಬಾಗೇಪಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮಿತಿ ಸದಸ್ಯ ಬಿ. ಮಂಜುನಾಥ್‌ ಸೇರಿದಂತೆ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ್ದ ಅರ್ಥಶಾಸ್ತ್ರದ ಉಪನ್ಯಾಸಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಉಪನ್ಯಾಸಕರು ಶ್ರಮಿಸುವ ಮೂಲಕ ಸಮಾಜದಲ್ಲಿ ತಮಗೆ ಇರುವ ಗೌರವ ಕಾಪಾಡಿಕೊಳ್ಳಬೇಕು. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಕಾಲೇಜುಗಳಿಗೆ ಬರುತ್ತಿದ್ದಾರೆ. ಅವರನ್ನು ಉಪನ್ಯಾಸಕರು ತಮ್ಮ ಮಕ್ಕಳು ಎಂಬ ಭಾವನೆಯಿಂದ ನೋಡಿಕೊಳ್ಳಬೇಕಿದೆ. ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ಕುಸಿಯುತ್ತಿದ್ದು, ಫ‌ಲಿತಾಂಶದಲ್ಲಿ ಇಳಿಕೆ ಕಂಡು ಬರುತ್ತಿದೆ. ಈ
ಬಗ್ಗೆ ಗಂಭೀರ ಚಿಂತನೆ ಮಾಡಬೇಕು.
 ಎಸ್‌.ಜನಾರ್ದನ್‌, ಉಪ ನಿರ್ದೇಶಕರು, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.