ಬೆಲೆ ಬಾಳುವಮರಗಳ ಮಾರಾಟ
Team Udayavani, Aug 9, 2018, 2:53 PM IST
ಚಿಂತಾಮಣಿ: ನಗರದ ಮಹಿಳಾ ಕಾಲೇಜಿನ ಪಕ್ಕದಲ್ಲಿರುವ ಬೆಸ್ಕಾಂ ವಸತಿಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದ ಬೆಲೆಬಾಳುವ ಮರಗಳನ್ನು ಮಾರಾಟ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅರಣ್ಯ ಇಲಾಖೆಗೆ ಮಾಹಿತಿ ನೀಡದೆ, ಕೆಇಬಿ ವಸತಿ ಆವರಣದಲ್ಲಿ ಬೆಳೆದಿದ್ದ ಬೆಲೆಬಾಳುವ ಮರಗಳನ್ನು ಬೆಸ್ಕಾಂ ಸಿಬ್ಬಂದಿಯೊಬ್ಬರು ಕಡಿದು ಮಾರಾಟ ಮಾಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮರಗಳನ್ನು ಕಡಿದ ಬೆಸ್ಕಾಂ ಅಧಿಕಾರಿ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ದೂರು ದಾಖಲು ಮಾಡಿದ್ದಾರೆ.
ನೇರಳೆ, ಮಾವು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಕಡಿದಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಬೆಲೆ
ಬಾಳುವ ಮರಗಳಾಗಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಬೆಸ್ಕಾ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್ ಅರಣ್ಯ ಇಲಾಖೆಗೆ ಸೇರಿದ್ದ ಮರಗಳನ್ನು ಕಡಿದವರಾಗಿದ್ದು, ಇವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಜಯಚಂದ್ರ
ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ