5 ಕೋಟಿ ವೆಚ್ಚದ ಕಟ್ಟಡದಲ್ಲಿಲ್ಲ ಇ-ಲೈಬ್ರರಿ


Team Udayavani, Sep 1, 2018, 4:56 PM IST

chikk-1.jpg

ಚಿಕ್ಕಬಳ್ಳಾಪುರ: ರಾಜ್ಯಕ್ಕೆ ಮಾದರಿಯಾಗಿ ಚಿಕ್ಕ ಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಮಹಾನಗರಗಳಲ್ಲಿ ನಿರ್ಮಾಣಗೊಳ್ಳುವ ಹೈಟೆಕ್‌ ಕಟ್ಟಡಗಳನ್ನು ನಾಚಿಸುವಂತೆ ತಲೆ ಎತ್ತಿರುವ ಜಿಲ್ಲಾ ಸಾರ್ವಜನಿಕ ಕೇಂದ್ರ ಗ್ರಂಥಾಲಯ ಉದ್ಘಾಟನೆಗೊಂಡು ಬರೋಬ್ಬರಿ ಎರಡು ವರ್ಷ ಕಳೆದರೂ ಓದುಗರ ಪಾಲಿಗೆ ಮಾತ್ರ ಇ-ಲೈಬ್ರರಿ ಕನಸು ಇಂದಿಗೂ ನನಸಾಗದೆ ಹೆಸರಿಗೆ
ಮಾತ್ರ ಡಿಜಿಟಲ್‌ ಲೈಬ್ರರಿಯಾಗಿ ಉಳಿದುಕೊಂಡಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಎಂ. ವೀರಪ್ಪ ಮೊಯ್ಲಿ ಕನಸಿನ ಕೂಸು ಆಗಿರುವ ಗ್ರಂಥಾಲಯವು ಸುಸಜ್ಜಿತವಾದ ಕಟ್ಟಡ ಹೊಂದಿದ್ದರೂ ಗ್ರಂಥಾಲಯ ನಿರ್ವಹಣೆಗೆ ಅಗತ್ಯ ಸಿಬ್ಬಂದಿ ಕೊರತೆ ಜತೆಗೆ ಇ-ಲೈಬ್ರರಿ ಸೌಲಭ್ಯ ಸಿಗದೇ ಓದುಗರ ಪಾಲಿಗೆ ಡಿಜಿಟಲ್‌ ಲೈಬ್ರರಿ ಬರೀ ಕನಸಿನ ಮಾತಾಗಿದೆ. ಕಳೆದ 2016ರ ಜುಲೈ 2 ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸುಸಜ್ಜಿ ಗ್ರಂಥಾಲಯ ವನ್ನು ಲೋಕಾರ್ಪಣೆ ಮಾಡಿದ್ದರು.

ಇಡೀ ಜಗತ್ತನೇ ಬೆರಳ ತುದಿಯಲ್ಲಿ ನೋಡುವ ಇವತ್ತಿನ ಮಾಹಿತಿ, ತಂತ್ರಜ್ಞಾನ ಅವಿಷ್ಕಾರ ಯುಗದಲ್ಲಿ ಜಿಲ್ಲೆಯ ವಿದ್ಯಾರ್ಥಿ-ಯುವ ಜನತೆಗೆ ಅದರಲ್ಲೂ ಪುಸ್ತಕ ಓದುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಆಶಾಕಿರಣವಾಗಿದೆ.

ಮೂರು ಅಂತಸ್ತಿನ ವಿಶಾಲವಾದ ಗ್ರಂಥಾಲಯ ಕಟ್ಟಡದಲ್ಲಿ ಲಕ್ಷಾಂತರ ಪುಸ್ತಕಗಳ ಭಂಡಾರವನನೇ ಶೇಖರಿಸಿ ಇಡುವಷ್ಟು ಸ್ಥಳಾವಕಾಶ ಇದೆ. ಆದರೆ, ಗ್ರಂಥಾಲಯ ಉದ್ಘಾಟನೆಗೊಂಡು ಎರಡು ವರ್ಷ ಕಳೆದರೂ ಇಂದಿಗೂ ಮಹತ್ವಾಕಾಂಕ್ಷಿ ಇ-ಲೈಬ್ರರಿ ಆರಂಭವಾಗದಿರುವುದು ಪುಸ್ತಕ ಪ್ರೇಮಿಗಳಲ್ಲಿ ತೀವ್ರ ನಿರಾಸೆ ಮೂಡಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಕಟ್ಟಡ ನಿರ್ಮಾಣಕ್ಕೆ ತೋರಿದ ಆಸಕ್ತಿಯನ್ನು ಗ್ರಂಥಾ ಲಯದೊಳಗೆ ಇ-ಲೈಬ್ರರಿ ಸೌಲಭ್ಯ ಕಲ್ಪಿಸುವುದರತ್ತ ಗಮನ ಹರಿಸದಿರುವುದು ಆಕ್ರೋಶಕ್ಕೆ ಕಾರಣ ವಾಗಿದೆ.

ಮುದ್ರಣಕ್ಕೂ ಮೊದಲು ಆನ್‌ಲೈನ್‌ನಲ್ಲಿ ಲಭ್ಯ: ಇತ್ತೀಚಿನ ದಿನಗಳಲ್ಲಿ ಪ್ರಸಿದ್ಧ ಲೇಖಕರು, ಬರಹ ಗಾರರು, ಚಿಂತಕರು ಬರೆಯುವ ಮಹತ್ವದ ಕೃತಿಗಳು ಮುದ್ರಣಗೊಂಡು ಮಾರುಕಟ್ಟೆಗೆ ತಲುಪುವ ಮುನ್ನವೇ ಆನ್‌ಲೈನ್‌ನಲ್ಲಿ ಬಿಡುಗಡೆಯಾಗುತ್ತಿವೆ. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳ್ಳುವ ಅದ ರಲ್ಲೂ ಸರ್ಕಾರಿ ಹಾಗೂ ಖಾಸಗಿ ರಂಗದ ಉದ್ಯೋಗಾಕಾಂಕ್ಷಿಗಳಿಗೆ ಇ-ಲೈಬ್ರರಿ ಸಾಕಷ್ಟು ಮಹತ್ವದಾಗಿದೆ. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅಗತ್ಯವುಳ್ಳ ಕಲೆ, ಸಾಹಿತ್ಯ, ಇತಿಹಾಸ ಕುರಿತು, ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕವಾಗಿ ಪ್ರಸಿದ್ಧ ಲೇಖಕರ ಕೃತಿಗಳ ಅಧ್ಯಯನಕ್ಕೆ ಇ-ಲೈಬ್ರರಿ ಹೆಚ್ಚು ಪ್ರಯೋಜನ ಕಾರಿಯಾದರೂ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಇ-ಲೈಬ್ರರಿ ಇನ್ನೂ ಗಗನ ಕುಸುಮವಾಗಿದೆ. 

ಗ್ರಂಥಾಲಯಕ್ಕೆ ಸಿಬ್ಬಂದಿ ಕೊರತೆ: ಸುಮಾರು 5 ಕೋಟಿಗಿಂತಲೂ ಅಧಿಕ ಅನುದಾನದಲ್ಲಿ ಭವ್ಯವಾದ ಗ್ರಂಥಾಲಯ ಕಟ್ಟಡ ಜಿಲ್ಲೆಗೆ ಸಿಕ್ಕರೂ ಅದರ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇದೆ. ಗ್ರಂಥಾಲಯಕ್ಕೆ ಒಟ್ಟು 13 ಸಿಬ್ಬಂದಿ ಮಂಜೂರಾಗಿದ್ದರೂ ಕೆಲಸ ಮಾಡುತ್ತಿರುವ 6- 7 ಮಂದಿ ಮಾತ್ರ. ಇನ್ನೂ 7 ಸಿಬ್ಬಂದಿ ಕೊರತೆ ಇದೆ. ಗ್ರಂಥಾಲಯಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಇದ್ದರೂ ಗ್ರಂಥಾಲಯದ ಕೆಳಗೆ ಸಾರ್ವಜನಿಕರು ಪ್ರವೇಶಿಸಿ ಓದುಗರಿಗೆ ಕಿರಿಕಿರಿ ಉಂಟು ಮಾಡುತ್ತಾರೆಂಬ ಆರೋಪ ಇದ್ದರೂ ಗ್ರಂಥಾಲಯ ಆವರಣದೊಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸುವಲ್ಲಿ ಅಲ್ಲಿನ ಅಧಿಕಾರಿ, ಸಿಬ್ಬಂದಿ ವಿಫ‌ಲವಾಗಿರುವುದು ಎದ್ದು ಕಾಣುತಿದೆ.

ಒಟ್ಟಾರೆ ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಜನತೆಗೆ ಜ್ಞಾನ ದೇಗುಲದಂತಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಇಂದಿಗೂ ಇ-ಲೈಬ್ರರಿ ಸೌಲಭ್ಯ ಮರೀಚಿಕೆಯಾಗಿರುವುದು ಜನಪ್ರತಿನಿಧಿಗಳು ಇಚ್ಛಾಶಕ್ತಿ, ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ. 

ವಾರ್ಷಿಕ ತಮ್ಮ ತಮ್ಮ ಕ್ಷೇತ್ರಗಳ ಪ್ರಾದೇಶಾಬಿವೃದ್ಧಿಗೆ ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಪಡೆದು ಖರ್ಚು ಮಾಡುವ ಜಿಲ್ಲೆಯ ಜನಪ್ರತಿನಿಧಿಗಳು ಕನಿಷ್ಠ ಓದುಗರಿಗೆ ಅನುಕೂಲವಾಗುವ ರೀತಿ ಯಲ್ಲಿ ಜಿಲ್ಲಾ ಗ್ರಂಥಾಲಯದಲ್ಲಿ ಇ-ಲೈಬ್ರರಿ ಸೌಲಭ್ಯ ಒದಗಿಸಲು ಮುಂದಾಗದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಮೂಡಿಸಿದೆ.

ಗ್ರಂಥಾಲಯಕ್ಕೆ ಬರಬೇಕು 2 ಕೋಟಿ ರೂ. ಸೆಸ್‌ ಅಗತ್ಯ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಅದರಲ್ಲೂ ಇ-ಲೈಬ್ರರಿಯಂತಹ ಸೌಲಭ್ಯದಿಂದ ವಂಚಿತವಾಗಿರುವ ಜಿಲ್ಲಾ ಸಾರ್ವಜನಿಕ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲೆಯ ಗ್ರಾಪಂ, ನಗರಸಭೆ, ಪುರಸಭೆಗಳಿಂದ ಬರೋಬ್ಬರಿ 2 ಕೋಟಿ ರೂ.ಗೂ ಮೀರಿ ಹೆಚ್ಚಿನ ಸೆಸ್‌ ಬಾಕಿ ಉಳಿಸಿಕೊಂಡಿವೆಯೆಂದು ತಿಳಿದು ಬಂದಿದೆ. ಪದೇ ಪದೆ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದರೂ ಬಾಕಿ ಉಳಿಸಿಕೊಂಡಿರುವ ಗ್ರಂಥಾಲಯ ಅಭಿವೃದ್ಧಿ ಸೆಸ್‌ ಪಾವತಿಸಲು ಗ್ರಾಪಂ ನಗರಸಭೆ, ಪುರಸಭೆಗಳು ಹಿಂದೇಟು ಹಾಕುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಡಳಿತ ಅಧಿಕಾರಿಗಳು ಎಚ್ಚೆತ್ತಿಕೊಂಡು ಗ್ರಂಥಾಲಯಕ್ಕೆ ಬರಬೇಕಾದ ಸೆಸ್‌ ವಸೂಲಿ ಮಾಡಿಕೊಡಬೇಕಿದೆ.

ನಿತ್ಯ 500 ಓದುಗರು ಗ್ರಂಥಾಲಯಕ್ಕೆ ಭೇಟಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಪತ್ರಿಕೆ, ನಿಯತಕಾಲಿಕೆಗಳು, ಸಾಹಿತ್ಯ, ಸಂಸ್ಕೃತಿ, ಕಲೆ, ಪರಿಸರ, ಆರೋಗ್ಯ ಹೀಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳ ಅಧ್ಯಯನಕ್ಕಾಗಿ ಪ್ರತಿದಿನ 500 ಕ್ಕೂ ಹೆಚ್ಚು ಓದುಗರು ಭೇಟಿ ನೀಡುತ್ತಾರೆ. ಈ ಪೈಕಿ 300ಕ್ಕೂ ಹೆಚ್ಚು ಮಂದಿ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಸಿದ್ಧಗೊಳ್ಳಲೆಂದು ಗ್ರಂಥಾಲಯವನ್ನು  ಶ್ರಯಿಸಿಕೊಂಡಿದ್ದಾರೆ. ಆದರೆ, ಸ್ಪರ್ಧಾತ್ಮ ಪರೀಕ್ಷೆಗೆ ಸಿದ್ಧಗೊಳ್ಳುವ ಉದ್ಯೋಗಾಕಾಂಕ್ಷಿಗಳಿಗೆ ಇ-ಲೈಬ್ರರಿ ಇಲ್ಲದೇ ಸಾಕಷ್ಟು ತೊಂದರೆ ಆಗಿದೆ. ಇ-ಲೈಬ್ರರಿ ಅನುಷ್ಠಾನಕ್ಕಾಗಿಯೇ ಸಾರ್ವಜನಿಕ ಗ್ರಂಥಾಲಯ ಕಟ್ಟಡದಲ್ಲಿ ಬರೋಬ್ಬರಿ 50 ಆಸನಗಳನ್ನು ಅಳವಡಿಸುವಷ್ಟು ಸುಸಜ್ಜಿತ ಕೊಠಡಿಗಳನ್ನು ಸಹ ನಿರ್ಮಿಲಾಗಿದ್ದರೂ ಉಪಯೋಗವಾಗುತ್ತಿಲ್ಲ

ಇ-ಲೈಬ್ರರಿಗೆ ಪ್ರಸ್ತಾವನೆ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಇ-ಲೈಬ್ರರಿ ಗ್ರಂಥಾಲಯಕ್ಕೆ ಅನುಕೂಲವಾಗುವಂತೆ 50
ಆಸನಗಳ ವ್ಯವಸ್ಥೆಗೆ ಬೇಕಾದ ಗಣಕಯಂತ್ರಗಳು, ಪೀಠೊಪಕರಣಗಳನ್ನು ಒದಗಿಸುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಈಗಾಗಲೇ ಇಲಾಖೆ ನಿರ್ದೇಶಕರಿಗೆ ಸಲ್ಲಿಸಿದ್ದೇವೆ. ಸರ್ಕಾರ ಈ ವರ್ಷದೊಳಗೆ ಮಂಜೂರಾತಿ ನೀಡುವ ನಿರೀಕ್ಷೆ ಇದೆ. ಇಲಾಖೆ ಅನುದಾನ ಬಿಡುಗಡೆ ಮಾಡಿದ ತಕ್ಷಣ ಓದಿಗೆ ಇ-ಲೈಬ್ರರಿ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಮುಖ್ಯ ಗ್ರಂಥಪಾಲಕ ಶಂಕರಪ್ಪ ತಿಳಿಸಿದ್ದಾರೆ.

 ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.