ಮೂರು ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Team Udayavani, Dec 6, 2018, 1:38 PM IST
ಚಿಂತಾಮಣಿ: ಮೂವರು ಮಕ್ಕಳ ಕತ್ತು ಕೊಯ್ದ ಮಹಿಳೆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರವಾರ ನಡೆದಿದೆ. ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ನಿರಂತರವಾಗಿ ಮೀಟರ್ ಬಡ್ಡಿ ದಂಧೆಕೋರರ ಕಾಟ ತಾಳಲಾರದೆ ರಾಜಮ್ಮ ಎಂಬ ಮಹಿಳೆ ಮಕ್ಕಳಾದ ಮನೋಜ್, ಅಮೃತಾ ಮತ್ತು ಭೂಮಿಕಾಳ ಕತ್ತು ಕೊಯ್ದು ತಾನೂ ಕತ್ತು ಕುಯ್ದು ಕೊಂಡಿದ್ದಾಳೆ.
ಮಕ್ಕಳ ಚೀರಾಟ ಕೇಳಿ ನೆರೆ ಹೊರೆಯವರು ದೌಡಾಯಿಸಿ ನಾಲ್ವರನ್ನು ತಕ್ಷಣ ಚಿಕ್ಕಬಳ್ಳಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರಿಗೂ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜಮ್ಮ ಪತಿ ವೆಂಕಟೇಶ್ ಹಲವು ಜನರ ಬಳಿ ಸಾಲ ಪಡೆದುಕೊಂಡು,ಸಾಲಬಾಧೆ ತಾಳಲಾರದೆ ಮನೆ ಬಿಟ್ಟು ತೆರಳಿದ್ದಾರೆ. ಆ ಬಳಿಕ ಸಾಲ ನೀಡಿದವರು ನಿತ್ಯವೂ ಪೀಡಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ