ಎಲ್ಲೆಂದರಲ್ಲಿ ಬಿಸಾಡುತ್ತಿರುವ ಕೋಳಿ ತ್ಯಾಜ್ಯ: ರೋಗ ಭೀತಿ
Team Udayavani, Jan 8, 2019, 9:36 AM IST
ಗುಡಿಬಂಡೆ: ಪಟ್ಟಣ ಪಂಚಾಯಿತಿಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಪಟ್ಟಣ ಸೇರಿದಂತೆ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ ಕೋಳಿ ಅಂಗಡಿಗಳ ಮಾಲೀಕರು ಕೋಳಿ ತಾಜ್ಯವನ್ನು ಸುರಿಯುತ್ತಿರುವುದರಿಂದ ಮಾರಕ ರೋಗಗಳು ಹರಡುವ ಭೀತಿ ಜನತೆಯಲ್ಲಿ ಉಂಟಾಗಿದೆ.
ಮಾರಕ ರೋಗ ಹರಡುವ ಭೀತಿ: ಜನಸಂದಣೆಯಿಂದ ಕೂಡಿರುವ ಪಟ್ಟಣದಲ್ಲಿ ಸುಮಾರು 10 ಕ್ಕೂ ಅಧಿಕ ಕೋಳಿ ಅಂಗಡಿಗಳಿದ್ದು, ಸಾವಿರಾರು ಕೆಜಿ ಚಿಕನ್ ವಹಿವಾಟು ಪಟ್ಟಣದಲ್ಲಿ ನಡೆಯುತ್ತದೆ. ಕೋಳಿ ಕಟಾವು ನಂತರ ಸಿಗುವ ತಾಜ್ಯವನ್ನು ಪಟ್ಟಣ ಸೇರಿದಂತೆ ಪಟ್ಟಣ ಸಮೀಪದ ಪ್ರಸಿದ್ಧ ಜನರ ಜೀವನಾಡಿ ಅಮಾನಿ ಭೈರಸಾಗರ ಕೆರೆಯ ಸಮೀಪ ಹಾಗೂ ವಾಪಸಂದ್ರ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗುವ ಸ್ಥಳ ಸೇರಿದಂತೆ ಅಧಿಕ ಸಾರ್ವಜನಿಕರು ಓಡಾಡುವ ಪ್ರದೇಶ ಗಳಲ್ಲಿ ಪ್ರತಿನಿತ್ಯ ತ್ಯಾಜ್ಯ ಸುರಿಯಲಾಗುತ್ತಿದ್ದು, ಜನತೆಯಲ್ಲಿ ಮಾರಕ ರೋಗಗಳು ಹರಡುವ ಭೀತಿ ಶುರುವಾಗಿದೆ.
ಮನಬಂದಂತೆ ತಾಜ್ಯ ವೀಲೆವಾರಿ: ಪಟ್ಟಣದ ಹತ್ತಾರು ಕೋಳಿ ಅಂಗಡಿ ಮಾಲೀಕರು ತ್ಯಾಜ್ಯ ವಿಲೇವಾರಿಯನ್ನು ನಿರ್ದಿಷ್ಟ ಸ್ಥಳದಲ್ಲಿ ಮಾಡುತ್ತಿಲ್ಲ. ವ್ಯಾಪಾರ ವಹಿವಾಟು ಮುಗಿದ ನಂತರ ರಾತ್ರಿ ತ್ಯಾಜ್ಯವನ್ನು ಮನಬಂದಂತೆ ಎಲ್ಲೆಂದರಲ್ಲಿ ತಂದು ಸುರಿಯುತ್ತಿದ್ದಾರೆ. ತಾಜ್ಯದ ದುರ್ವಾಸನೆ ಬೀದಿ ಬೀದಿಗಳಿಗೆ ಆವರಿಸುತ್ತಿದ್ದು, ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದ್ದು, ನಿವಾಸಿಗಳಿಗೆ ನೆಮ್ಮದಿ ಇಲ್ಲದಂತಾಗಿದೆ.
ಪಟ್ಟಣ ಸೇರಿದಂತೆ ಹೊರವಲಯದಲ್ಲಿ ಸುರಿಯುತ್ತಿರುವ ಕೋಳಿ ತ್ಯಾಜ್ಯ ಮತ್ತು ಇತರೆ ಕೊಳೆತ ಕಸವನ್ನು ಸಂಬಂಧ ಪಟ್ಟ ಇಲಾಖೆಯವರು ಅನೇಕ ದಿನ ಗಳಾದರೂ ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಕಸದ ರಾಶಿ ರಾಶಿ ಅಲ್ಲೇ ಕೊಳೆತು ದುರ್ವಾಸನೆ ಬೀರುತ್ತಿದೆ.
ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯು ವುದನ್ನು ನಿಯಂತ್ರಿಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ಎಚ್ಚೆತ್ತುಕೊಳ್ಳಬೇಕು. ಇಲ್ಲದ್ದಿದಲ್ಲಿ ಡೆಂ, ಚಿಕನ್ಗುನ್ಯಾ ಸೇರಿದಂತೆ ಇನ್ನಿತರ ರೋಗಗಳು ಉಲ್ಬಣಗೊಳ್ಳಲು ಕಾರಣವಾಗುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ವತ್ಛತೆ ಕಾಪಾಡಲು, ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವುದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಿದೆ.
ಕೋಳಿ ಅಂಗಡಿಗಳ ಮಾಲೀಕರು ಕೋಳಿ ತಾಜ್ಯವನ್ನು ಮನಬಂದತೆ ಎಲ್ಲೆಂದರಲ್ಲಿ ಸುರಿಯುತ್ತಿದ್ದಾರೆ. ಬಾಗೇಪಲ್ಲಿ ರಸ್ತೆಯ ಗುಂಡಾಲಚ್ಚಮ್ಮ ದೇವಸ್ಥಾನ, ವಾಪಸಂದ್ರ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ತಾಜ್ಯ ಬಿಸಾಡಿದ್ದು, ಬೆಳಿಗ್ಗೆ ವಾಯು ವಿಹಾರಕ್ಕೆ ಹೋಗು ವವರಿಗೆ ತೊಂದರೆಯಾಗಿದೆ.
ಲಕ್ಷ್ಮೀನಾರಾಯಣ ವಿ, ಮಾಜಿ ಸೆ„ನಿಕ ಗುಡಿಬಂಡೆ
ಗುಡಿಬಂಡೆ ಪಟ್ಟಣದ ಕೋಳಿ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳಲ್ಲಿ ಸಂಗ್ರಹಿಸಿದ ಕೋಳಿ ತಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುತ್ತಿರುವುದರ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು, ಈ ಸಂಬಂಧ ಕೋಳಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ
ಮಾಡಲಾಗುವುದು.
ನಾಗಾರಾಜ್, ಮುಖ್ಯಾಧಿಕಾರಿ ಪಂ.ಪಂ, ಗುಡಿಬಂಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ