ಕಠಿಣ ಶ್ರಮದಿಂದ ಯಶಸ್ಸು
Team Udayavani, Jun 10, 2018, 5:34 PM IST
ಶಿವಮೊಗ್ಗ: ಯಾವುದೇ ಕ್ಷೇತ್ರವಿರಲಿ, ಯಶಸ್ಸು ಸುಲಭವಾಗಿ ದಕ್ಕುವುದಿಲ್ಲ. ಕಠಿಣ ಶ್ರಮದ ಜೊತೆ ಜೊತೆಯಲ್ಲಿ ಬದ್ದತೆ ಹಾಗೂ ಅರ್ಪಣಾ ಮನೋಭಾವ ಇದ್ದಾಗ ಮಾತ್ರ ಯಶಸ್ಸು ಸಹಜವಾಗಿ ದೊರೆಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ಬೆಳ್ಳಿ ಮಂಡಲ, ಸಿನಿಮೊಗೆ- ಶಿವಮೊಗ್ಗ ಚಿತ್ರ ಸಮಾಜದಿಂದ ಆಯೋಜಿಸಿದ್ದ ರಾಘು ಶಿವಮೊಗ್ಗ ಅವರ ನಿರ್ದೇಶನದ “ಚೂರಿಕಟ್ಟೆ’ ಚಿತ್ರ ಪ್ರದರ್ಶನ-ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷವಾಗಿ ಅತ್ಯಂತ ಪೈಪೋಟಿ ಇರುವ ಚಿತ್ರರಂಗದಲ್ಲಿ ಬದ್ಧತೆ ಇಲ್ಲದಿದ್ದರೆ ಭವಿಷ್ಯ ಇಲ್ಲ ಎಂದ ಅರ್ಥೈಸಿದರು.
ಇಂದು ಪ್ರದರ್ಶಿಸಲ್ಪಡುತ್ತಿರುವ ಚೂರಿಕಟ್ಟೆ ಸಿನಿಮಾ ಒಂದು ಯಶಸ್ವಿ ಪ್ರಯೋಗ.
ಆದರೆ, ಇದನ್ನು ಚಿತ್ರಮಂದಿರಗಳಲ್ಲಿ ನೋಡುವುದರ ಮೂಲಕ ನಿರ್ಮಾಪಕರಿಗೆ ಆಸರೆಯಾಗಬೇಕು. ವಾಸ್ತವದಲ್ಲಿ
ಸಾಗರ ತಾಲೂಕಿನ ಚೂರಿಕಟ್ಟೆ ಗ್ರಾಮ ಋಣಾತ್ಮಕ ಚಿಂತನೆಗೆ ಹೆಸರಾಗಿತ್ತು ಎಂದ ಅವರು, ದಾರಿಹೋಕರಿಗೆ ಚೂರಿ ಹಾಕಿ ಬೆದರಿಸುವುದು, ಕೊಲೆ ಸುಲಿಗೆ ಕೃತ್ಯಗಳೇ ಮೇಲುಗೈ ಸಾಧಿಸಿತ್ತು. ಈ ಕಾರಣಕ್ಕಾಗಿಯೇ ಇದಕ್ಕೆ “ಚೂರಿಕಟ್ಟೆ’ ಎಂಬ ಹೆಸರು ಬಂದಿತ್ತು. ಆದರೆ ಕ್ರಮೇಣ ಇಡೀ ಗ್ರಾಮದ ಚಿತ್ರಣವೇ ಬದಲಾಗಿದ್ದು ಸಂಪೂರ್ಣ ಧನಾತ್ಮಕ
ಚಿಂತನೆಗಳು ಮೈಗೂಡಿವೆ. ಈಗ ಪರಿಸ್ಥಿತಿ ಬದಲಾಗಿದೆ ಎಂದರು.
ಸದಭಿರುಚಿಯ ಚಿತ್ರಗಳನ್ನು ನೋಡಿ ಬೆಂಬಲಿಸಬೇಕಾದ್ದು ಕನ್ನಡಿಗರ ಕರ್ತವ್ಯ ಎಂದ ಅವರು, ಪ್ರಸ್ತುತ ಚೂರಿಕಟ್ಟೆ
ಸಿನಿಮಾದಲ್ಲಿ ಬಿಂಬಿಸಲಾಗಿರುವ ಧನಾತ್ಮಕ ಚಿಂತನೆಗಳನ್ನು ಬೆಂಬಲಿಸುವುದರ ಮೂಲಕ ನಿರ್ಮಾಪಕರು, ನಿರ್ದೇಶಕರಲ್ಲಿ ಆತ್ಮ ವಿಶ್ವಾಸ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ ಚಿತ್ರ ಸಮಾಜ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯಂತ ಸಕಾಲಿಕ ಎಂದರು.
ಚಿತ್ರದ ನಿರ್ದೇಶಕ ಶಿವಮೊಗ್ಗ ರಾಘು ಮಾತನಾಡಿ, ಚೂರಿಕಟ್ಟೆ ಋಣಾತ್ಮಕ ಮನಃಸ್ಥಿತಿಯ ಸಂಕೇತವಾದ ಗ್ರಾಮ. ಚಿತ್ರದ ಕಥೆ ಕೂಡ ಸ್ವಲ್ಪ ಇದೇ ಧಾಟಿಯಲ್ಲಿ ಇರುವುದರಿಂದ ಆ ಹೆಸರನ್ನೇ ಇಡಲಾಗಿದೆ. ಆದರೆ, ಚಿತ್ರ ಧನಾತ್ಮಕ ಚಿಂತನೆಯೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.
ಶಿವಮೊಗ್ಗ ಬೆಳ್ಳಿ ಮಂಡಲದ ಕಾರ್ಯಾಧ್ಯಕ್ಷ ಡಿ.ಎಸ್.ಅರುಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಬೆಳ್ಳಿಮಂಡಲದ ಉಪಾಧ್ಯಕ್ಷ ಡಾ| ಕೆ.ಆರ್. ಶ್ರೀಧರ್ ಇದ್ದರು. ಬೆಳ್ಳಿಮಂಡಲದ ಖಜಾಂಚಿ ಎನ್. ಆರ್. ಪ್ರಕಾಶ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಜಿ. ವಿಜಯಕುಮಾರ್ರಿಂದ ನಿರೂಪಿಸಿದರು. ಜಿಲ್ಲಾ ಸಂಚಾಲಕ ವೈದ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ