ಪದವಿ, ಉದ್ಯೋಗ, ಪರಿಪೂರ್ಣ ವ್ಯಕ್ತಿತ್ವಕ್ಕೆ ಶಿಕ್ಷಣ ಬುನಾದಿ


Team Udayavani, Jan 27, 2019, 8:58 AM IST

sudhakar.jpg

ಚಿಕ್ಕಬಳ್ಳಾಪುರ: ಕೇವಲ ಪದವಿ ಅಥವಾ ಉದ್ಯೋಗ ಗಿಟ್ಟಿಸಿಕೊಳ್ಳುವುದಕ್ಕಿಂತ ಮನಷ್ಯ ಪರಿಪೂರ್ಣವಾದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಶಿಕ್ಷಣ ತಳಹದಿ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ 2018-19ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ಕಾಣಲು ದೂರದೃಷ್ಟಿ ಹೊಂದಿರಬೇಕೆಂದರು.

ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಕಾಲೇಜು ಹಂತದ ವಯಸ್ಸು ಪ್ರತಿಯೊಬ್ಬರ ಜೀವನದಲ್ಲಿ ಕೆಟ್ಟ ಅಭ್ಯಾಸಗಳ ಕಡೆಗೆ ಹೆಚ್ಚು ಆಕರ್ಷಿತವಾಗುತ್ತದೆ. ಇದರಿಂದ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಪಡೆಯುವಾಗ ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ವ್ಯರ್ಥ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಕಲಿಕೆ ಸಂದರ್ಭದಲ್ಲಿ ದುಶ್ಚಟಗಳ ಕಡೆಗೆ ಆಕರ್ಷಿತರಾಗದೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡಾಗ ಮಾತ್ರ ನಮ್ಮ ಭವಿಷ್ಯ ಕೂಡ ಉತ್ತಮವಾಗಿರುತ್ತದೆ ಎಂದರು.

ಪೋಕಷರನ್ನು ಕರೆ ತನ್ನಿ: ಶಾಲಾ, ಕಾಲೇಜು ವಾರ್ಷಿಕೋತ್ಸವಗಳು ಮಕ್ಕಳ ಸೃಜನಶೀಲತೆಯನ್ನು ಪ್ರತಿಬಿಂಬಿಸುವಂತೆ ಇರಬೇಕು. ಆದ್ದರಿಂದ ಕಾಲೇಜು ವಾರ್ಷಿಕೋತ್ಸಗಳು ಸಂತೋಷ ಕೂಟಗಳಾಗಿರುವುದರಿಂದ ಪೋಷಕರನ್ನು ಕರೆ ತಂದರೆ ಮಕ್ಕಳ ಚಟುವಟಿಕೆಗಳನ್ನು ಅಥವಾ ಆಟಪಾಟಗಳನ್ನು ನೋಡಿ ಪೋಷಕರು ಸಂತಸಪಡುತ್ತಾರೆ. ತಂದೆ, ತಾಯಿಗೂ ಮಕ್ಕಳನ್ನು ಯಾವ ರೀತಿ ಬೆಳೆಸಬೇಕೆಂಬುದು ಮನವರಿಕೆ ಆಗುತ್ತದೆ. ಆದ್ದರಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಪೋಷಕರನ್ನು ಕರೆ ತರುವಂತೆ ಮಕ್ಕಳಿಗೆ ಸಲಹೆ ನೀಡಿದರು.

ಕಾಲೇಜು ವಿದ್ಯಾರ್ಥಿಗಳಿಂದ ಮೂಡಿ ಬಂದ ಭರತನಾಟ್ಯ, ನೃತ್ಯ ಪ್ರದರ್ಶನ, ಜನಪದ ಗೀತೆ, ಭಾವಗೀತೆಗಳ ಗಾಯನ ಕಾರ್ಯಕ್ರಮಗಳು ಗಮನ ಸೆಳೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎಸ್‌.ಮಂಜುನಾಥ ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ, ಕೋಚಿಮುಲ್‌ ನಿರ್ದೇಶಕ ಕೆ.ವಿ.ನಾಗರಾಜ್‌, ನಗರಸಭಾ ಸದಸ್ಯರಾದ ಸುಬ್ರಹ್ಮಣ್ಯಚಾರಿ, ಗಜೇಂದ್ರ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಕೀಲ ಪ್ರಕಾಶ್‌, ಖಜಾಂಚಿ ಡಾ.ರಾಮು, ನಗರಸಭೆ ಆಯುಕ್ತ ಉಮಾಕಾಂತ್‌, ಕಾಲೇಜು ಉಪನ್ಯಾಸಕರಾದ ಸತೀಶ್‌ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.